Author: admin

ಉಡುಪಿ, ಏ 03: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಯವರು ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು. ಕೋಟ ಶ್ರೀನಿವಾಸ್ ಪೂಜಾರಿಯವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಟಿ ರವಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ ಪಾಲ್ ಸುವರ್ಣ, ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಉಪಸ್ಥಿತರಿದ್ದರು.

Read More

ಕೋಟ, ಮಾ.31 : ಕೃಷಿಕರೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಕ್ಕುಂಜೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಕ್ಕುಂಜೆ ಗ್ರಾಮದ ಕೃಷಿಕ ಸಂಜೀವ(75) ಎಂದು ಗುರುತಿಸಲಾಗಿದೆ ಬೆನ್ನು ನೋವಿನಿಂದ ಬಳಲುತಿದ್ದ ಕೃಷಿಕ ಸಂಜೀವ ಜೀವನದಲ್ಲಿ ಜಿಗುಪ್ಸೆಗೊಂಡು ಮಾ.28 ಗುರುವಾರ ರಾತ್ರಿ ವೇಳೆ ಮನೆಯ ಟೆರೆಸಿನ ಕಬ್ಬಿಣದ ಶೀಟ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾಪು, ಮಾ. 30 : ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾರ್ಟರ್ಸ್ನಲ್ಲಿ ನೇಣಿಗೆ ಶರಣಾದ ಘಟನೆ ಶನಿವಾರ ನಡೆದಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಜ್ಯೋತಿ (29) ಎಂದು ಗುರುತಿಸಲಾಗಿದೆ. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

Read More

ಉಳ್ಳಾಲ, ಮಾ. 25: ಬೈಕ್ ಅಪಘಾತ ಸಂಭವಿಸಿ ಸಹಸವಾರೆ ವಿವಾಹಿತ ಮಹಿಳೆ ಸಾವನ್ನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲದ ನಾಟೆಕಲ್ ಸಮೀಪ ರವಿವಾರ ನಡೆದಿದೆ. ಬೋಂದೇಲ್ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಸಾವನ್ನಪ್ಪಿದವರು. ಸವಾರ ಯತೀಶ್ ದೇವಾಡಿಗ ಗಂಭೀರವಾಗಿ ಗಾಯಗೊಂಡಿದ್ದು, ಉಳ್ಳಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಇಬ್ಬರು ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ತೆರಳಿ ಬೈಕ್ನಲ್ಲಿ ವಾಪಸ್ಸಾಗುವ ಸಂದರ್ಭ ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಈ ಘಟನೆ ನಡೆದಿದೆ. ಶ್ರೀನಿಧಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಯತೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾಸರಗೋಡು,ಮಾ 22 : ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶುಕ್ರವಾರ ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ನಡೆದಿದೆ. ಮೃತರನ್ನು ಅಂಗಡಿ ಪದವಿನ ಪ್ರಜ್ವಲ್ (19) ಎಂದು ಗುರುತಿಸಲಾಗಿದೆ. ಬೈಕ್ ವರ್ಕ್ಸ್ ಶೋಪ್ ನಲ್ಲಿ ದುಡಿಯುತ್ತಿದ್ದ ಪ್ರಜ್ವಲ್ ಗೆ ಶಾಕ್ ತಗಲಿದ್ದು , ಸ್ಥಳೀಯರು ವಿದ್ಯುತ್ ಕಂಬದಿಂದ ವಿದ್ಯುತ್ ವಯರನ್ನು ವಿಚ್ಚೇಧಿಸಿ ಪ್ರಜ್ವಲ್ ನನ್ನು ತಕ್ಷಣ ಉಪ್ಪಳದ ಆಸ್ಪತ್ರೆಗೆ ಕೊಂಡೊಯ್ದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Read More

ಬಂಟ್ವಾಳ, ಮಾ 21: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತೌಹೀದ್ ಶಾಲಾ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ  ಬುಧವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಎಂದು ಗುರುತಿಸಲಾಗಿದೆ. ಶಹಿಮಾ ಅವರು 3 ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ಈ ವೇಳೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮದಲ್ಲಿದ್ದರು. ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

Read More

ಬಿಹಾರ, ಮಾ.18: ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ7 ಮಂದಿ ಮೃತಪಟ್ಟ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ  ಭಾನುವಾರ ನಡೆದಿದೆ. ಬಿಹಾರದ ಖಗಾರಿಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ಬರುತ್ತಿದ್ದ ವೇಳೆ ಕಾರು ಟ್ರ್ಯಾಕ್ಟರ್ ಗೆ   ಡಿಕ್ಕಿ ಹೊಡೆದಿದೆ . ಅಪಘಾತದಲ್ಲಿ ಕಾರಿನಲ್ಲಿದ್ದ 7ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಬೆಳ್ತಂಗಡಿ,ಮಾ. 17: ಆಟೋ ರಿಕ್ಷಾ ಡಿಕ್ಕಿಯಾಗಿ 3 ವರ್ಷದ ಮಗು ಮೃತಪಟ್ಟ ಘಟನೆ ಸೋಣಂದೂರು ಪಣಕಜೆಯಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಪಣಕಜೆ ಮುಂಡಾಡಿ ನಿವಾಸಿ ಚಂದ್ರಶೇಖರ್ ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್ ಎಂದು ಗುರುತಿಸಲಾಗಿದೆ. ಮುಂಡಾಡಿಯಲ್ಲಿ ಚಂದ್ರಶೇಖರ್ ಅವರ ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದ ವೇಳೆ  ಆಟೋರಿಕ್ಷಾ ಮಗುವಿಗೆ ತಾಗಿ ಗಂಭೀರ ಗಾಯಗೊಂಡಿದ್ದು, ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎನ್ನಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಮಾ.16: ರಾಜ್ಯ ಸರಕಾರವು ತುಳು, ಕೊಂಕಣಿ, ಬ್ಯಾರಿ  ಅಕಾಡೆಮಿಗಳಿಗೆ ಅಧ್ಯಕ್ಷ ರು ಮತ್ತು ಸದಸ್ಯರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ತಾರನಾಥ್ ಗಟ್ಟಿ ಕಾಪಿಕಾಡ್, ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಅಲ್ವಾರಿಸ್  ಹಾಗೂ  ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್. ಅವರನ್ನು ನೇಮಿಸಿದೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಬೆಂಗಳೂರಿಗೆ ಫಾದರ್ ಪ್ರಕಾಶ್ ಮಾಡ್ತಾ ಎಸ್ ಜೆ. ದಕ್ಷಿಣ ಕನ್ನಡಕ್ಕೆ ರೊನಾಲ್ಡ್ ಕ್ರಾಸ್ತಾ, ನವೀನ್ ಲೋಬೋ, ಡಾ ವಿಜಯಲಕ್ಷ್ಮಿ ನಾಯಕ್, ಸಪ್ನಾ ಮೇ ಕ್ರಾಸ್ತಾ ಮತ್ತು ಸಮರ್ಥ ಭಟ್ ಸದಸ್ಯರಾಗಿದ್ದಾರೆ. ಕಾರ್ಕಳಕ್ಕೆ ದಯಾನಂದ ಮುಡ್ಯೇಕರ್, ಚಿಕ್ಕಮಗಳೂರಿಗೆ ಪ್ರಮೋದ್ ಪಿಂಟೋ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಯಲ್ಲಾಪುರಕ್ಕೆ ಸುನೀಲ್ ಸಿದ್ದಿ, ಉತ್ತರ ಕನ್ನಡಕ್ಕೆ ಜೇಮ್ಸ್ ಲೋಪೆಜ್ ಸದಸ್ಯರಾಗಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಪೃಥ್ವಿರಾಜ್, ಕುಂಬ್ರ ದುರ್ಗಾಪ್ರಸಾದ್ ರೈ, ಅಕ್ಷಯ್ ಆರ್ ಶೆಟ್ಟಿ, ಮೋಹನ್ ದಾಸ್ ಕೊಟ್ಟಾರಿ,…

Read More

ಸುಳ್ಯ, ಮಾ. 15 : ರಬ್ಬರ್ ಸ್ಮೋಕ್ ಹೌಸ್ ವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ರಬ್ಬರ್ ಸೀಟ್ ಬೆಂಕಿಗೆ ಆಹುತಿಯಾಗಿ ಅಪಾರ ನಷ್ಟ ಸಂಭವಿಸಿರುವ ಘಟನೆ ಸುಳ್ಯ ಅರಂತೋಡು ಗ್ರಾಮದ ಪಿಂಡಿಮನೆ ಎಂಬಲ್ಲಿ ಬುಧವಾರ ನಡೆದಿದೆ. ರೇಣುಕಾಪ್ರಸಾದ್ ಎಂಬವರ ರಬ್ಬರ್ ಸ್ಮೋಕ್ ಹೌಸ್ ವೊಂದಕ್ಕೆ ಮಧ್ಯರಾತ್ರಿ ಬೆಂಕಿ ತಗುಲಿದೆ. ಮನೆಯವರೆಲ್ಲಾ ಸೇರಿ ಬ್ಯಾರೆಲ್ ನಲ್ಲಿದ್ದ ನೀರನ್ನು ಬಕೆಟ್ ಮೂಲಕ ಸ್ಮೋಕ್ ಹೌಸ್ ಮೇಲೆ ಹಾಯಿಸಿದ್ದಾರೆ. ಇದರಿಂದ ಕೊಟ್ಟಿಗೆಗೆ ಬೆಂಕಿ ಹತ್ತಿಕೊಳ್ಳುವುದು ತಪ್ಪಿದೆ ಎನ್ನಲಾಗಿದೆ. ಹೌಸ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಸುಮಾರು 180 ಕೆಜಿಯಷ್ಟು ರಬ್ಬರ್ ಶೀಟ್ ಗಳು ಬೆಂಕಿಗೆ ಆಹುತಿಯಾಗಿರುವುದಾಗಿ ಅಂದಾಜಿಸಲಾಗಿದೆ.

Read More