Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಆ. 24 : ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದ ಹರ್ಷಿತ್ ಸೋಮೇಶ್ವರ ನಿರ್ದೆಶನದ ಅನರ್ಕಲಿ ತುಳು ಸಿನೆಮಾ ಶುಕ್ರವಾರ ಬಿಡುಗಡೆಗೊಂಡಿದೆ. ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಚಿತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ನಂತರ ಮಾತಾನಾಡಿ ಒಳ್ಳೆಯ ಸಿನೆಮಾ ಹಾಗೂ ಒಳ್ಳೆಯ ಪ್ರಯತ್ನವನ್ನು ತುಳುನಾಡಿನ ಪ್ರೇಕ್ಷಕರು ಖಂಡಿತ ಬೆಂಬಲಿಸುತ್ತಾರೆ. ಅನರ್ಕಲಿ ಸಿನೆಮಾ ನೋಡಿ ಪ್ರೋತ್ಸಾಹಿಸಿ ಎಂದರು. ಚಿತ್ರದ ನಟ ಅರವಿಂದ್ ಬೋಳಾರ್ ಮಾತನಾಡಿ , ಪ್ರೇಕ್ಷಕರು ಥಿಯೇಟರ್ಗೆ ಬಂದು ಸಿನೆಮಾಗಳನ್ನು ನೋಡಿದಲ್ಲಿ ನಿರ್ಮಾಪಕ ಹಾಕಿದ ಬಂಡವಾಳ ಬಂದುಬಿಡುತ್ತದೆ. ಇದರಿಂದ ನಿರ್ಮಾಪಕ ಲಾಸ್ ಆಗಲ್ಲ ಎಂದರು. ಕಾರ್ಯಕ್ರಮದಲ್ಲಿ ಕಿಶೋರ್ ಡಿ.ಶೆಟ್ಟಿ, ಪ್ರಕಾಶ್ ಪಾಂಡೇಶ್ವರ್, ನವನೀತ್ ಶೆಟ್ಟಿ ಆರ್. ಧನರಾಜ್, ಭೋಜರಾಜ ವಾಮಂಜೂರು, ಚಂದ್ರಶೇಖರ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಲಂಚುಲಾಲ್, ವಿಜಯ್ ಶೋಭರಾಜ್ ಪಾವೂರು, ಮಧುರಾ ಆರ್.ಜೆ., ಪುರುಷೋತ್ತಮ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಭಂಡಾರಿ…
ಉಡುಪಿ, ಆ.23 : ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿಯ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ ಚಂದ್ರ ಈ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಈ ಎರಡು ಸ್ಥಾನಗಳಿಗೆ ಕ್ರಮವಾಗಿ ಗುಂಡಿಬೈಲು ವಾರ್ಡ್ ನ ಪ್ರಭಾಕರ ಪೂಜಾರಿ ಹಾಗೂ ಒಳಕಾಡು ವಾರ್ಡ್ ನ ರಜನಿ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದರು. ಯಾವುದೇ ಪ್ರತಿಸ್ಪರ್ಧಿ ಇಲ್ಲದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಚುನಾವಣಾಧಿಕಾರಿ ಘೋಷಿಸಿದರು. ಈ ಸಂದರ್ಭದಲ್ಲಿ ಡಾ. ರಾಯಪ್ಪ ಹಾಜರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು.
ಕಾಸರಗೋಡು, ಆ.22 : ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ಚೆರ್ಕಳ ಕೆ .ಕೆ ಪುರದಲ್ಲಿ ನಡೆದಿದೆ. ಕುಂಬಳೆ ಮೊಗ್ರಾಲ್ ಖುತುಬಿ ನಗರದ ಅಹಮ್ಮದ್ ಕಬೀರ್ ( 30) ಮೃತರು. ಸಂಬಂಧಿಕರೊಬ್ಬರ ವಿವಾಹ ಆಮಂತ್ರಣಕ್ಕೆ ತೆರಳಿ ಮರಳುತ್ತಿದ್ದಾಗ ಅಪಘಾತ ನಡೆದಿದ್ದು,ಗಂಭೀರ ಗಾಯಗೊಂಡ ಕಬೀರ್ ರನ್ನು ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ . ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಟ್ವಾಳ , ಆ.21 : ಯಕ್ಷಗಾನ ಸಂಘಟಕ ಕಲಾಪೋಷಕ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ( 65) ಅವರು ಅ. 21ರಂದು ಹೃದಯಾಘಾತದಿಂದ ನಿಧನರಾದರು. ಕುರಿಯ ಹವ್ಯಕ ಘಟಕದ ಗುರಿಕ್ಕಾರರಾಗಿ, ಸ್ವರ್ಣ ಭಿಕ್ಷಾ ಉತ್ಸವದ ಗೌರವಾಧ್ಯಕ್ಷರಾಗಿ,ಕೋಳ್ಯೂರ ಹವ್ಯಕ ವಲಯ ಅಧ್ಯಕ್ಷರಾಗಿ ಹತ್ತು ಹಲವು ಜವಾಬ್ದಾರಿಯನ್ನು ಹೊತ್ತು ಯಶಸ್ವಿಯಾಗಿ ನಿರ್ವಹಿಸಿದ್ದರು.
ಕಾಸರಗೋಡು, ಆ.20 : ವಿದ್ಯುತ್ ಶಾಕ್ ತಗುಲಿ ಯಶವಂತ ಎಂಬವರು ಸಾವನ್ನಪ್ಪಿದ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ಸೋಮವಾರ ನಡೆದಿದೆ. ಮಂಜೇಶ್ವರ ಹೊಸಬೆಟ್ಟುವಿನ ನಿವಾಸಿ ಯಶವಂತ (21) ಮೃತರು. ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದ ಯಶವಂತ ಅವರು, ಮರದ ಹತ್ತಿರದಲ್ಲೇ ಹಾದು ಹೋಗಿದ್ದ ಹೈಟೆನ್ಷನ್ ತಂತಿಯಿಂದ ಶಾಕ್ ತಗುಲಿ ಅಲ್ಲೇ ಕುಸಿದು ಬಿದ್ದಿದ್ದಾನೆ. ಯಶವಂತ ಸುಮಾರು ಹೊತ್ತು ಕಳೆದರೂ ಮರಳಿ ಬಾರದ ದಿದ್ದುದರಿಂದ ಸಹೋದರಿ ಟೆರೇಸ್ ಗೆ ಹತ್ತಿ ನೋಡಿದಾಗ ಯಶವಂತ ಬಿದ್ದಿರುವುದು ಕಂಡುಬಂದಿದೆ.ಬಳಿಕ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಯಶವಂತ ಅವರು ಮೃತ ಪಟ್ಟಿದ್ದರು ಎನ್ನಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಮೂಡುಬಿದಿರೆ, ಆ. 19 : ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ‘ರೈತ ಸಿರಿ’ ನೂತನ ಕಟ್ಟಡವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಿದರು. ಹವಾನಿಯಂತ್ರಿತ ಬ್ಯಾಂಕಿಂಗ್ ಕಚೇರಿಯನ್ನು ಶಾಸಕರಾದ ಉಮಾನಾಥ ಎ.ಕೋಟ್ಯಾನ್, ‘ವಜ್ರಸಿರಿ’ ಸಭಾಭವನವನ್ನು ಸಂಸದರಾದ ಕ್ಯಾ| ಬ್ರಿಜೇಶ್ ಚೌಟ, ಹಾಗೂ ಗೋದಾಮು ಮಾರಾಟ ಮಳಿಗೆಯನ್ನು ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್ ಉದ್ಘಾಟಿಸಿದರು. ನಂತರ ಮಾತನಾಡಿದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು, ಅವಿಭಜಿತ ದ.ಕ. ಜಿಲ್ಲೆಯ ರೈತರು, ಕೃಷಿಕರು ಪಡೆದ ಸಾಲವನ್ನುಪ್ರಾಮಾಣಿಕವಾಗಿ ಮರುಪಾವತಿ ಮಾಡುವ ಮೂಲಕ ಸಹಕಾರಿ ಕ್ಶೇತ್ರವನ್ನು ಬಲಗೊಳಿಸುತ್ತಿದ್ದಾರೆ. ಮಹಿಳೆಯರು ಸ್ವಸಹಾಯ ಗುಂಪುಗಳ ಮೂಲಕ ತಮ್ಮ ಕುಟುಂಬದ ಆರ್ಥಿಕ ಸಶಕ್ತತೆಗೆ ವಿಶೇಷ ಕೊಡುಗೆ ನೀಡುತ್ತಲಿದ್ದಾರೆ. ಸಹಕಾರಿ ಸಂಘಗಳು ತಮ್ಮ ಆರ್ಥಿಕ ಶಕ್ತಿಯನ್ನು ವರ್ಧಿಸಿಕೊಳ್ಳುತ್ತಿದ್ದು ಇದಕ್ಕೆ ಕೇಂದ್ರ ಸರಕಾರವೂ ವಿಶೇಷ ಪ್ರೋತ್ಸಾಹ ನೀಡುತ್ತಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ…
ಮಂಗಳೂರು,ಆ.18 : ಟೈಲ್ಸ್ ಮತ್ತು ಸ್ಯಾನಿಟರಿ ಉತ್ಪನ್ನಗಳ ಯುವರ್ ಪ್ರೆಸ್ಟೀಜ್ ಶೋ ರೂಮ್ ಜಪ್ಪಿನಮೊಗರುವಿನಲ್ಲಿ ಆಗಸ್ಟ್ 16, ಶುಕ್ರವಾರ ಉದ್ಘಾಟನೆಗೊಂಡಿತು. ಯುವರ್ ಪ್ರೆಸ್ಟೀಜ್ ಶೋ ರೂಮ್ ನಲ್ಲಿ ನೂತನ ಸ್ಯಾನಿಟರಿಗಳು ಲಭ್ಯವಿದೆ. ಯುವರ್ ಪ್ರೆಸ್ಟೀಜ್ ಶೋ ರೂಮ್ ಇದರ ಉದ್ಘಾಟನೆಯನ್ನು ವಿಧಾನಸಭೆಯ ಸಭಾಧ್ಯಕ್ಷರು ಯು ಟಿ ಖಾದರ್ ಅವರು ರಿಬ್ಬನ್ ತುಂಡರಿಸುವ ಮೂಲಕ ನೆರವೇರಿಸಿದರು. ನಂತರ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ನಂತರ ಯುವರ್ ಪ್ರೆಸ್ಟೀಜ್ ಶೋ ರೂಮ್ ನ ಸಂಸ್ಥಾಪಕರು ಶಂಶುದ್ದೀನ್ ಕಾರ್ಯಕ್ರಮದಲ್ಲಿ ಮಾತಾಡಿದರು. ಕಾರ್ಯಕ್ರಮದಲ್ಲಿ ಸ್ಪೀಕರ್ ಯುಟಿ ಖಾದರ್, ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಜಿ ಕಣಚೂರು ಯು. ಕೆ.ಮೋನು , ಮಾಜಿ ಮೇಯರ್ ಕೆ. ಅಶ್ರಫ್ , ಮ.ನಪಾ. ಸದಸ್ಯರು ವೀಣಾ ಮಂಗಳಾ, ದ.ಕ. ಕಾಂಗ್ರಸ್ ಸಮಿತಿ ಸದಸ್ಯರು ಪದ್ಮರಾಜ್ ರಾಮಯ್ಯ, ಮಾಜಿ ಸಚಿವರು ಕೃಷ್ಣ ಜೆ. ಪ್ಯಾಲೆಮಾರ್, ಯುವರ್ ಪ್ರೆಸ್ಟೀಜ್ ಶೋ ರೂಮ್ ನ ಸಂಸ್ಥಾಪಕರು ಶಂಶುದ್ದೀನ್, ಸಹ-ಸಂಸ್ಥಾಪಕರಾಗಿ ಬಶೀರ್. ಇತರ ಪಾಲುದಾರರು ಮೊದಲಾದವರು ಉಪಸ್ಥಿತರಿದ್ದರು. ಯುವರ್ ಪ್ರೆಸ್ಟೀಜ್…
ಉಳ್ಳಾಲ, ಆ.18 : ಉಳ್ಳಾಲ ದರ್ಗಾ ವಠಾರದಲ್ಲಿರುವ ಮದನಿ ಸಭಾಂಗಣದಲ್ಲಿ ಉಳ್ಳಾಲ ದರ್ಗಾ ನೂತನ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಪ್ತಿ ಎ.ಪಿ.ಅಬೂಬಕರ್ ಮುಸ್ಲಿಯಾರ್ ಕಾಂದಪುರಂ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು. ಹಾಗೆನೇ ಅವರು ಉಳ್ಳಾಲ ಜುಮಾ ಮಸ್ಜಿದ್ ಹಾಗೂ ಸಯ್ಯಿದ್ ಮದನಿ ದರ್ಗಾ ಸಮಿತಿ ವತಿಯಿಂದ ಉಳ್ಳಾಲ ದರ್ಗಾ ವಠಾರದಲ್ಲಿ ನಡೆದ ಸಯ್ಯಿದ್ ಮದನಿ ಶರೀಅತ್ ಕಾಲೇಜು ಕಟ್ಟಡದ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ನೂತನ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಪ್ತಿ ಎ.ಪಿ.ಅಬೂಬಕರ್ ಮುಸ್ಲಿಯಾರ್ ಕಾಂದಪುರಂ ಅವರು, ಗುರುಗಳ,ಹಿರಿಯರ ಆಶೀರ್ವಾದದಿಂದ ಧಾರ್ಮಿಕ ಶಿಕ್ಷಣ ಪಡೆದ ಬಳಿಕ ಧಾರ್ಮಿಕ ಶಿಕ್ಷಣ ನೀಡುವತ್ತ ಹೆಜ್ಜೆ ಇಟ್ಟೆ. ಅದರಿಂದ ಇಲ್ಲಿಯವರೆಗೆ ತಲುಪಿದೆ, ಮಡವೂರು ಶೈಖ್ ರವರ ಸೂಚನೆ ಮೇರೆಗೆ ಮರ್ಕಝ್ ಕಾಲೇಜು ಸ್ಥಾಪನೆ ಮಾಡಲಾಯಿತು. ಈ ಕಾಲೇಜು ಸ್ಥಾಪನೆ ಮಾಡುವ ಮೂಲಕ ಜವಾಬ್ದಾರಿಯುತವಾದ ಸ್ಥಾನ ವಹಿಸಿಕೊಂಡಿದ್ದೇನೆ ಎಂದು ಅವರು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಾತನಾಡಿ, ಉಳ್ಳಾಲ ಜುಮಾ ಮಸ್ಜಿದ್ ಸಮುದಾಯಕ್ಕೆ…
ಮಂಗಳೂರು,ಆ.17 : ನಗರದ ಫಾದರ್ ಮುಲ್ಲರ್ ಕನ್ನೆನ್ಶ್ ನ್ ಸೆಂಟರ್ನಲ್ಲಿ ಇಂದಿರಾ ಆಸ್ಪತ್ರೆಯ 25ನೇ ವಾರ್ಷಿಕೋತ್ಸವ ಸಮಾರಂಭ ಜರುಗಿತು.ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ಒದಗಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಾ ಇದೆ. ಆದರೆ ಜನರ ಆವಶ್ಯಕತೆಗಳನ್ನು ಪೂರೈಸಲು ಜತೆಯಾಗಿ ಖಾಸಗಿ ಆಸ್ಪತ್ರೆಗಳ ಕೊಡುಗೆಯೂ ಮುಖ್ಯವಾಗಿದೆ. ಆಸ್ಪತ್ರೆಯಲ್ಲಿ ವಿಜ್ಞಾನ, ಸಹಾನುಭೂತಿಯ ಸೇವೆ ಎರಡೂ ಸಮರ್ಪಕವಾಗಿ ಇರಬೇಕು. ಆಸ್ಪತ್ರೆಯ ವೈದ್ಯರು, ಇತರ ಸಿಬ್ಬಂದಿಗಳು ಉತ್ತಮ ಸೇವೆ ನೀಡಿದ್ದಲ್ಲಿ ಆ ಆಸ್ಪತ್ರೆ, ವೈದ್ಯರು, ಇತರ ಸಿಬ್ಬಂದಿಯನ್ನು ಜನ ಮರೆಯೋದಿಲ್ಲ.ಅದ್ದರಿಂದ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿಗಳು ಉತ್ತಮ ಸೇವೆ ನೀಡಬೇಕು. 25 ವಷ೯ಳಿಂದ ವೈದ್ಯಕೀಯ ಸೇವೆಯನ್ನು ನೀಡುತ್ತಾ ಬಂದಿರುವ ಇಂದಿರಾ ಆಸ್ಪತ್ರೆಯ ಸೇವಾ ಕಾರ್ಯಕ್ಕೆ ಶ್ಲಾಘನೀಯ ಎಂದು ಹೇಳಿದರು. ಮುಖ್ಯ ಅತಿಥಿ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಅವರು ಮಾತನಾಡಿ, ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ಮೂಲಕ ಜನರ ವಿಶ್ವಾಸ ಗಳಿಸಿರುವ ಇಂದಿರಾ ಆಸ್ಪತ್ರೆಯು ತನ್ನ…
ಮಹಾನಗರ,ಅ, 17: ನಗರದ ಹೊಟೇಲ್ ಮೋತಿ ಮಹಲ್ ಸಭಾಂಗಣದಲ್ಲಿ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನ 28ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆ.10,ಶನಿವಾರ ನಡೆಯಿತು.ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್’ ಸ್ವೀಕರಿಸಿ ಮಾತನಾಡಿದ ನಿವೃತ್ತ ಮೇಜರ್ ಜನರಲ್ ಸತೀಶ್ ಭಂಡಾರಿ ಅವರು, ಸೇನಾ ಸಾಧನಗಳ ತಯಾರಿಯ ಸಂಶೋ ಧನೆ ಮತ್ತು ಅಭಿವೃದ್ಧಿಯ 40ರಷ್ಟು ಹಾಗೂ ಉತ್ಪಾದಿಸುವ ಸುಮಾರು 30 ಕಂಪೆನಿಗಳು ನಮ್ಮಲ್ಲಿವೆ, ಹಾಗಾಗಿ ದೇಶ ಶೇ.75ರಷ್ಟು ಸ್ವಾವಲಂಬಿಯಾಗಿದೆ ಎಂದರು. ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪುರಸ್ಕೃತ ಉದ್ಯಮಿ ಡಾ| ಕೆ. ಪ್ರಕಾಶ್ ಶೆಟ್ಟಿ ಅವರನ್ನು ಪ್ರತಿಷ್ಠಾನದ ವತಿ ಯಿಂದ ಸ ನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ಶೆಟ್ಟಿ ಅವರು, ನಾನು ಅದೃಷ್ಟವಂತ ಎಂದು ಕೆಲವರು ಹೇಳುತ್ತಾರೆ. ನನ್ನ ಅದೃಷ್ಟದಿಂದ ನನ್ನ ಉದ್ಯಮ ಎತ್ತರಕ್ಕೆ ಬೆಳೆದಿದೆ . ಅಲ್ಲದೆ ಬಂಟ ಸಮಾಜದ ಹಿರಿಯರ ಸಾಧನೆಯಿಂದ ನಾನು…












