Author: admin

ಬಾಯಾರು,ಫೆ.24: ಬೀಟಾ ಪ್ರೊಡಕ್ಷನ್ ಬ್ಯಾನರಿನಲ್ಲಿ ತಯಾರಾಗುವ “ಸಿಲಿಕಾನ್ ಸಿಟಿ” ಕನ್ನಡ ಕಿರುಚಿತ್ರದ ಮುಹೂರ್ತ ಕಾರ್ಯಕ್ರಮವು ಫೆ.17, ಶುಕ್ರವಾರ ಬಾಯಾರು ಪೆರುವೊಡಿ ಸರವು ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಶ್ರೀ ನಾರಾಯಣ ಬಾಯಾರು ಇವರ ಉಪಸ್ಥಿತಿಯಲ್ಲಿ ನೆರವೇರಿತು. ಮುಹೂರ್ತ ಕಾರ್ಯಕ್ರಮದಲ್ಲಿ ಕಿರುಚಿತ್ರದ ನಿರ್ದೇಶಕರಾದ ತುಕಾರಾಮ ಬಾಯಾರು , ನಾಯಕ ನಟರಾದ ಶರತ್ ಚಂದ್ರ ಬಾಯಾರು, ನಾಯಕಿ ಗೌತಮಿ ,ಗಿರೀಶ್ ಸಾಲ್ಯಾನ್ ಮುಳಿಯ, ಪ್ರವೀಣ್ ಆಚಾರ್ಯ ಪುತ್ತೂರು, ಬಾಲಪ್ರತಿಭೆ ಚುಕ್ಕಿ ವಿಟ್ಲ , ಮಂಗಳಗೌರಿ ಭಟ್ ಸರವು, ಆಶಾಚಂದ್ರ ಸರವು, ಸಂಧ್ಯಾ ಮಂಗಿಲಪದವು, ಪ್ರವೀಣ್ ಜಯ ವಿಟ್ಲ, ಕೃಷ್ಣ ಆಚಾರ್ಯ ಬಳ್ಳೂರು, ಧರ್ಮೇಂದ್ರ ಆಚಾರ್ಯ ಬಳ್ಳೂರು, ಶೈಲೇಶ್ ಆಚಾರ್ಯ ಪುತ್ತಿಗೆ, ಕಿರಣ್ ಆಚಾರ್ಯ ಪುತ್ತಿಗೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗಿರೀಶ್ ಸಾಲ್ಯಾನ್ ಮುಳಿಯ ಸಂಯೋಜಿಸಿದರು. ಕಿರಣ್ ಆಚಾರ್ಯ ಪುತ್ತಿಗೆ ನಿರೂಪಿಸಿದರು.

Read More

ಪುತ್ತೂರು, ಫೆ. 23: ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ನವ ವಿವಾಹಿತನೊಬ್ಬ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ನರಿಮೊಗರು ಗ್ರಾಮದ ಧರ್ಮನಗರದ ನಿವಾಸಿ ಸುರೇಶ್ (30) ಎಂದು ಗುರುತಿಸಲಾಗಿದೆ. ಮೃತ ಸುರೇಶ್ 2 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಸುರೇಶ್‌ ಅವರು ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಹತ್ತೀರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎನ್ನಲಾಗಿದೆ.

Read More

ಮಂಗಳೂರು, ಫೆ. 22 : ದ.ಕ. ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುದು-1ರಿಂದ 10 ಕ್ಷೇತ್ರಗಳು, ಬಂಟ್ವಾಳ ತಾಲೂಕಿನ 43-ಅನಂತಾಡಿಯ ಗ್ರಾಮ ಪಂಚಾಯತ್ನ 2-ಅನಂತಾಡಿ, ಕಡಬ ತಾಲೂಕಿನ ಕಟ್ರುಪಾಡಿ ಗ್ರಾಮ ಪಂಚಾಯತ್ನ 1-ಬಲ್ಯ ಹಾಗೂ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ 4-ಆರ್ಯಾಪುವಿನಲ್ಲಿ ಫೆ. 24 ಹಾಗೂ ಫೆ. 25ರವರೆಗೆ ಚುನಾವಣೆ ನಡೆಯಲಿದೆ. ಅದ್ದರಿಂದ ಫೆ.24ರ ಬೆಳಿಗ್ಗೆ 6 ಗಂಟೆಯಿಂದ ಫೆ.25ರ ಸಂಜೆ ಚುನಾವಣೆ ಮುಕ್ತಾಯಗೊಳ್ಳುವವರೆಗೆ ಈ ಭಾಗಗಳಲ್ಲಿ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ.

Read More

ಪುತ್ತೂರು, ಫೆ. 21 : ದ್ವಿಚಕ್ರ ವಾಹನದ ಮೇಲೆ ಬೊಲೆರೋ ಉರುಳಿ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಫೆ.20 ಸೋಮವಾರ ನಡೆದಿದೆ. ಮೃತರನ್ನು ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ ಕೊರಗಪ್ಪ ಗೌಡ (58) ಎಂದು ಗುರುತಿಸಲಾಗಿದೆ. ಬೊಲೆರೋ ಪಿಕಪ್ ಕಡಬದಿಂದ ಬರುತ್ತಿದ್ದು, ಓಡ್ಲಾ ಎಂಬಲ್ಲಿ ದಿಢೀರ್ ಬ್ರೇಕ್ ಹಾಕಿದ ಪರಿಣಾಮವಾಗಿ ಬೊಲೆರೋ ಪಲ್ಟಿಯಾಗಿ ಕೊರಗಪ್ಪ ಅವರು ಚಲಾಯಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಕೊರಗಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸ್ವಲ್ಪ ಹೊತ್ತಿನಲ್ಲೇ ಮೃತಪಟ್ಟಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಕಡಬ, ಫೆ. 20 : ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ಕಾಡಾನೆಯೊಂದು ದಾಳಿ ನಡೆಸಿ ಯುವತಿ ಸೇರಿ ಇಬ್ಬರನ್ನು ಕೊಂದು ಹಾಕಿದೆ. ಮೃತರನ್ನು ರಂಜಿತಾ (21) ಹಾಗೂ ರಮೇಶ್ ರೈ ನೈಲ (55) ಎಂದು ಗುರುತಿಸಲಾಗಿದೆ . ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ ಎಂಬವರು ಮನೆಯಿಂದ ಸೊಸೈಟಿ ಗೆ ಹೋಗುತ್ತಿದ್ದ ವೇಳೆ ಮೀನಾಡಿ ಎಂಬಲ್ಲಿ ಆನೆ ದಾಳಿ ನಡೆಸಿದೆ. ಆಕೆ ಬೊಬ್ಬೆ ಹೊಡೆದ ವೇಳೆ ಅಲ್ಲಿಗೆ ರಕ್ಷಿಸಲು ಬಂದ ರಮೇಶ್ ಎಂಬವರ ಮೇಲೂ ಆನೆ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ರಮೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಯುವತಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅರಣ್ಯ ಇಲಾಖೆಯ ವಿರುದ್ಧ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಮಂಗಳೂರು ವಿಭಾಗದ ಡಿಎಫ್ಓ ದಿನೇಶ್ ಕುಮಾರ್ ಭೇಟಿ ನೀಡಿದ್ದು. ಸಂಜೆಯೊಳಗಡೆ ಆನೆಗಳನ್ನು ಹಿಡಿಯುವ ವ್ಯವಸ್ಥೆ ಮಾಡುತ್ತೇವೆ. ನಾಗರಹೊಳೆ, ದುಬಾರೆ ಆನೆ ಕ್ಯಾಂಪ್ ನಲ್ಲಿರುವ ಪಳಗಿದ ಆನೆಗಳನ್ನು ತಂದು ಕಾಡಾನೆ ಹಿಡಿಯುತ್ತೇವೆ ಎಂದು ಸಾರ್ವಜನಿಕರಿಗೆ…

Read More

ಲಖನೌ, ಫೆ. 19 : ಬೀದಿ ನಾಯಿಗಳ ದಾಳಿಗೆ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಲಖನೌನಲ್ಲಿ ಶನಿವಾರ ನಡೆದಿದೆ. ದಾಳಿಯಿಂದ ಸಾವನ್ನಪ್ಪಿದ ಬಾಲಕ ವಿಕಾಸ್ ಎಂಬುವರ ಏಳು ವರ್ಷದ ಪುತ್ರ ನಾಗಿರುತ್ತಾನೆ. ಬಾಲಕ ತನ್ನ ಮನೆ ಬಳಿ ಆಟವಾಡುತ್ತಿದ್ದ ವೇಳೆ ಬೀದಿನಾಯಿಗಳು ದಾಳಿ ನಡೆಸಿದ್ದು,ನಾಯಿಗಳ ದಾಳಿಯಿಂದಾಗಿ ಬಾಲಕ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

Read More

ಕಾಸರಗೋಡು, ಫೆ. 18 : ನವಜಾತ ಶಿಶುವಿನ ಗಂಟಲಲ್ಲಿ ತಾಯಿಯ ಎದೆಹಾಲು ಸಿಲುಕಿ  ಸಾವಿಗೀಡಾಗಿದ ಘಟನೆಯೊಂದು ಬದಿಯಡ್ಕದಲ್ಲಿ ನಡೆದಿದೆ. ಸಾವಿಗೀಡಾಗಿದ ಮಗು ಉಕ್ಕಿನಡ್ಕ ನಿವಾಸಿಗಳಾದ ಅಬ್ದುಲ್ ರಹ್ಮಾನ್-ತಾಹಿರಾ ದಂಪತಿಯ 25 ದಿನದ ಹಸುಗೂಸು ಆಗಿದೆ. ಫೆ. 16ರಂದು ಮಗುವಿಗೆ ಎದೆ ಹಾಲು ಉಣಿಸುತ್ತಿದ್ದಾಗ ಹಾಲು ಗಂಟಲಲ್ಲಿ ಸಿಲುಕಿಕೊಂಡು ಮಗು ಅಸ್ವಸ್ಥಗೊಂಡಿದ್ದು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎನ್ನಲಾಗಿದೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಶ್ರೀನಗರ, ಫೆ. 16 : ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿರುವ ಘಟನೆ ನಡೆದಿದೆ. ಕುಪ್ವಾರ ಪೊಲೀಸರ ನಿಖರ ಮಾಹಿತಿಯೊಂದಿಗೆ ಸೈನ್ಯ ಮತ್ತು ಪೊಲೀಸ್ ತಂಡವು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸೈದ್ಪೋರಾ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರ ಒಳನುಸುಳುವಿಕೆಯನ್ನು ವಿಫಲಗೊಳಿಸಿದೆ. ಕಾರ್ಯಾಚರಣೆಯಲ್ಲಿ ಒಬ್ಬ ನುಸುಳುಕೋರನನ್ನು ಹತ್ಯೆಗೈಯಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

Read More

ಕಡಬ, ಫೆ. 16 : ಮೊಟ್ಟೆ ಸಾಗಾಟ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ . ಚರಂಡಿಗೆ ಉರುಳಿ ಬಿದ್ಬ ಪರಿಣಾಮ ಲಾರಿಯಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ನೆಟ್ಟಣಕ್ಕೆ ಮೊಟ್ಟೆ ತಲುಪಿಸಿ ಉಳಿದ ಮೊಟ್ಟೆಗಳನ್ನು ಪುತ್ತೂರಿಗೆ ಕೊಂಡೊಯ್ಯುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

Read More

ನವದೆಹಲಿ, ಫೆ. 14: ಭೂಕಂಪದಿಂದ ತತ್ತರಿಸಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ( ಎನ್ ಡಿ  ಆರ್ ಎಫ್  ) ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಎನ್ ಡಿ ಆರ್ ಎಫ್ ನ ಜೂಲಿ ಮತ್ತು ರೋಮಿಯೋ ಹೆಸರಿನ ಎರಡು ಪತ್ತೆದಾರಿ ಶ್ವಾನಗಳು ಆರು ವರ್ಷದ ಬಾಲಕಿಯನ್ನು ರಕ್ಷಿಸುವಲ್ಲಿ ವಿಶೇಷ ಪಾತ್ರವಹಿಸಿವೆ. ಯಂತ್ರೋಪಕರಣಗಳು ವೈಫಲ್ಯ ಕಂಡ ಜಾಗದಲ್ಲಿ ರೊಮಿಯೋ ಮತ್ತು ಜೂಲಿ ಎಂಬ ಶ್ವಾನ ಜೋಡಿ ಮೂಸುತ್ತಾ ಅವಶೇಷಗಳಡಿಯಲ್ಲಿ ಬಾಲಕಿ ಇರುವುದನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ

Read More