Author: admin

ಮಂಗಳೂರು, ಅ.15: ಪೇಸ್ ಶಿಕ್ಷಣ ಸಂಸ್ಥೆಗಳು 25ನೆ ವರ್ಷದ ಸಂಭ್ರಮದಲ್ಲಿದ್ದು, ‘ಪೇಸ್ ಸಿಲ್ವಿಯೋರಾ 2025’ ಹೆಸರಿನಲ್ಲಿ ಡಿಸೆಂಬರ್ ವರೆಗೆ ವಿವಿಧ ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಲಾಗಿದೆ ಎಂದು ಪಿಎ ಎಜುಕೇಶನಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಅಬ್ದುಲ್ಲಾ ಇಬ್ರಾಹೀಂ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2000ದಲ್ಲಿ ಮಂಗಳೂರಿನ ಪಿ.ಎ. ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಆರಂಭಗೊಂಡ ಪೇಸ್ ಇಂದು, ಯುಎಇ, ಭಾರತ ಮತ್ತು ಕುವೈತ್ ಗಳಲ್ಲಿ 20 ಸಂಸ್ಥೆಗಳ ಜಾಗತಿಕ ಜಾಲವಾಗಿ ಜಾಗತಿಕ ಜಾಲವಾಗಿ ಬೆಳೆದಿದೆ.ಪೇಸ್ ಗ್ರೂಪ್ ಭಾರತದಲ್ಲಿನ ರಿಮ್ಸ್ ಇಂಟರ್ ನ್ಯಾಶನಲ್ ಸ್ಕೂಲ್ ಕಣ್ಣೂರು ಮತ್ತು ವೆಸ್ಟ್ ಲಂಡನ್ ವಿಶ್ವವಿದ್ಯಾನಿಲಯ, ರಾಸ್ ಅಲ್ ಖೈಮಾಗಳಲ್ಲಿ ಪಾಲುದಾರಿಕೆಯನ್ನು ಹೊಂದಿದೆ. ಪೇಸ್ ಸಿಲ್ವಿಯೋರಾ ಕಾರ್ಯಕ್ರಮದ ಬ್ಯಾನರ್ ಡ್ರಾಪ್ ಹಾಗೂ ಕಾರ್ಯಕ್ರಮಗಳ ಉದ್ಘಾಟನೆ ಅ.14ರಂದು ಪೇಸ್ ನಾಲೆಡ್ಜ್ ಸಿಟಿ ಕ್ಯಾಂಪಸ್ನಲ್ಲಿ ನಡೆದಿದೆ  ಎಂದರು. ಮೂರು ತಿಂಗಳ ಉತ್ಸವ ‘ಒಂದು ಪರಂಪರೆಯನ್ನು ಗೌರವಿಸುವುದು, ಭವಿಷ್ಯವನ್ನು ಬೆಳಗಿಸುವುದು’ ಎಂಬ ಥೀಮ್ ನಡಿ ವಿವಿಧ ವಿಭಾಗಗಳಲ್ಲಿ ನಡೆಯಲಿದೆ. ಸಂಭ್ರಮದ…

Read More

ಸುಳ್ಯ , ಅ. 14 : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಸುಳ್ಯ ತಾಲೂಕಿನ ಗುತ್ತಿಗಾರು ಶಾಖೆ ಗುತ್ತಿಗಾರು ಮುಖ್ಯ ರಸ್ತೆಯ ರಾಘವೇಂದ್ರ ಕಾಂಪ್ಲೆಕ್ಸ್ನ ಪ್ರಥಮ ಅಂತಸ್ತಿಗೆ ಸ್ಥಳಾಂತರಗೊಂಡಿದ್ದು, ಶಾಖೆಯ ಉದ್ಘಾಟನೆ ಹಾಗೂ ಎಟಿಎಂ ಉದ್ಘಾಟನೆ ಸೋಮವಾರ ನಡೆಯಿತು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರೈತರ ಪರವಾಗಿ ನಿಂತಿರುವ ಡಿಸಿಸಿ ಬ್ಯಾಂಕ್ ಹಲವು ಯೋಜನೆಗಳನ್ನು ರೂಪಿಸಿದೆ. ಹಲವು ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಿ, ಮಹಿಳೆಯರ ಸಬಲೀಕರಣಕ್ಕೆ ಕೈಜೋಡಿಸಿರುವುದು ಶ್ಲಾಘನೀಯವಾದದ್ದು ಎಂದು ಹೇಳಿದರು. ಎಸ್‌ಸಿಡಿಸಿಸಿ ಬ್ಯಾಂಕ್ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ರಿಬ್ಬನ್ ಕತ್ತರಿಸಿ ಶಾಖೆ ಉದ್ಘಾಟಿಸಿದರು. ನಿರ್ದೇಶಕ ಕುಶಾಲಪ್ಪ ಗೌಡ ಎಟಿಎಂ ಕೇಂದ್ರವನ್ನು ಉದ್ಘಾಟಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರಾ ಮೂಕಮಲೆ ಠೇವಣಿಪತ್ರ ವಿತರಿಸಿದರು. ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರು…

Read More

ಮಂಗಳೂರು, ಅ. 13 : ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 72 ನೇ ಅವತರಣೋತ್ಸವ ಅಮೃತೋತ್ಸವ 2025 ಕಾರ್ಯಕ್ರಮ ಅ. 11, ಶನಿವಾರ ನಡೆಯಿತು. ಅಂದು ಬೆಳಗ್ಗೆ 8.45ಕ್ಕೆ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಅಮೃತ ಜ್ಯೋತಿಯನ್ನು ಬೆಳಗಿಸುವ ಮೂಲಕ ಚಾಲನೆ ನೀಡಿದರು. ಗಂಟೆ 9ರಿಂದ ಶ್ರೀ ಗುರು ಪಾದುಕಾ ಪೂಜೆ, ಸತ್ಸಂಗ, ಭಜನೆ, ಧ್ಯಾನ, ನಂತರ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಆರ್ಶಿವಾಚನದಲ್ಲಿ ಕಳೆದ 25 ವರ್ಷಗಳಿಂದ ಮಠವು ಧಾರ್ಮಿಕ ಚಟುವಟಿಕೆಗಳ ಜೊತೆಗೆ ಶೈಕ್ಷಣಿಕ, ಸಾಮಾಜಿಕ ಪ್ರಗತಿಯ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಾತಾಡಿ,, ಮಂಗಳೂರಿನ ಮಾತಾ ಅಮೃತಾನಂದಮಯಿ ಮಠವು ಬಡವರಿಗೆ ಉಚಿತ ಆರೋಗ್ಯತಪಾಸಣಾ ಹಾಗೂ ಚಿಕಿತ್ಸಾ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಈ ಕ್ಷೇತ್ರಕ್ಕೆ ಮಾತಾ ಅಮೃತಾನಂದಮಯಿ ದೇವಿ ಯವರ ಕೊಡುಗೆ ಅಪಾರವಾದುದು ಎಂದು ಹೇಳಿದರು. ಮುಖ್ಯ…

Read More

ಉಳ್ಳಾಲ, ಅ. 12: ಉಳ್ಳಾಲದ ರಾಷ್ಟ್ರೀಯ ಹೆದ್ದಾರಿ 66 ರ ತಲಪಾಡಿ ಸಮೀಪದ ಉಚ್ಚಿಲ ಜಂಕ್ಷನ್ ಬಳಿಯ ಗುಜರಿ ಅಂಗಡಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಭಾನುವಾರ ಮಧ್ಯಾಹ್ನ ಸಂಭವಿಸಿದ ಈ ಘಟನೆಯಿಂದ ಗುಜರಿ ಅಂಗಡಿಯಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗುಜರಿ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ವರದಿಯಾಗಿದೆ. ಉಚ್ಚಿಲದ ಅಂಡರ್ ಪಾಸ್ ಬಳಿಯ ಇಕ್ಬಾಲ್ ಹಾಗೂ ಇಬ್ರಾಹಿಂ ಎಂಬವರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿರುವಾಗಲೇ ಬೆಂಕಿ ಕಾಣಿಸಿಕೊಂಡಿದೆ. ಮೊದಲು ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಳಿಕ ಅಗ್ನಿ ಶಾಮಕದಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಘಟನೆ ನಡೆದ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಮಂಗಳೂರು, ಅ.11: ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಚೀಫ್ ಮಿನಿಸ್ಟರ್ ಮಂಗಳೂರು ಇಂಡಿಯಾ ಇಂಟರ್ ನ್ಯಾಶನಲ್ ಚಾಲೆಂಜ್ ಬ್ಯಾಡ್ಮಿಂಟನ್ ಕ್ರೀಡಾಕೂಟವು ಅ.27ರಿಂದ ನವೆಂಬರ್ 2ರತನಕ ನಡೆಯಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಟೂರ್ನಿಗೆ ಒಂದು ಕೋಟಿ ರೂ. ಅನುದಾನವನ್ನು ಸರಕಾರ ನೀಡಿದೆ. ಈ ಪಂದ್ಯಾವಳಿಯಲ್ಲಿ ನಮ್ಮದೇಶದಿಂದ 350 ಸ್ಪರ್ಧಿಗಳು ಹಾಗೂ ಹೊರದೇಶಗಳಿಂದ 100 ಮಂದಿ ಸೇರಿ ಒಟ್ಟು 400 ರಾಷ್ಟ್ರೀಯ, ಅಂತಾರಾಷ್ಟ್ರೀಯ ಆಟಗಾರರು ಭಾಗವಹಿಸಲಿದ್ದಾರೆ. ಪಂದ್ಯಾವಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿ ರುವರು ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ, ಮಂಜುನಾಥ ಭಂಡಾರಿ, ಐವನ್ ಡಿಸೋಜ, ದ.ಕ. ಜಿಲ್ಲಾ ಬ್ಯಾಂಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಸುಪ್ರೀತ್ ಆಳ್ವ ಹಾಗೂ ಇತರರು ಉಪಸ್ಥಿತರಿದ್ದರು.

Read More

ಬೆಂಗಳೂರು,ಅ.11 ‘ಕಟ್ಟಾಳನ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್  ಬಿಡುಗಡೆಯಾಗಿದೆ. ಕ್ಯೂಬ್ಸ್ ಎಂಟರ್‌ಟೈನ್‌ಮೆಂಟ್ಸ್ ಮತ್ತು ನಿರ್ಮಾಪಕ ಷರೀಫ್ ಮೊಹಮ್ಮದ್ ಅವರ ಪ್ರಾಜೆಕ್ಟ್‌ನಲ್ಲಿ, ನಟ ಆ್ಯಂಟನಿ ವರ್ಗೀಸ್ ಪೆಪೆ ಅವರ ನಟನೆಯ ಚಿತ್ರ ಇದಾಗಿದೆ. ಪ್ಯಾನ್-ಇಂಡಿಯನ್ ಮಾರ್ಕೊ ನಂತರ, ಇದು ಕ್ಯೂಬ್ಸ್ ಎಂಟರ್‌ಟೈನ್‌ಮೆಂಟ್ಸ್ನ ಮತ್ತೊಂದು ಪ್ರಯತ್ನ. ನಿರ್ದೇಶಕ ಪಾಲ್ ಜಾರ್ಜ್ ಅವರ ಕಲ್ಪನೆಯಲ್ಲಿ ಮೂಡಿಬರುತ್ತಿರುವ ಈ ಚಿತ್ರ, ಸಂಗೀತದ ವಿಚಾರಕ್ಕೆ ಬಂದರೆ, ದಕ್ಷಿಣ ಭಾರತದಾದ್ಯಂತ ಖ್ಯಾತಿ ಗಳಿಸಿದ ಕಂಟಾರಾ ಮತ್ತು ಮಹಾರಾಜ ಚಿತ್ರಗಳ  ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಅವರು ಕಟ್ಟಾಳನ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಥೈಲ್ಯಾಂಡ್‌ನಲ್ಲಿ ಚಿತ್ರೀಕರಿಸಿದ ಆ್ಯಕ್ಷನ್ ಸೀಕ್ವೆನ್ಸ್‌ಗಳಿಗೆ ಓಂಗ್-ಬಾಕ್ ಚಿತ್ರಗಳ ಮೂಲಕ ಹೆಸರು ಮಾಡಿದ ಸಾಹಸ ನಿರ್ದೇಶಕ ಕೇಚಾ ಕಾಂಫಕ್ಡೀ ಅವರ ತಂಡ ಸಂಯೋಜನೆ ಮಾಡಿದೆ. ಓಂಗ್-ಬಾಕ್ ಸಿನಿಮಾಗಳ ಮೂಲಕ ಹೆಸರು ಮಾಡಿದ ಆನೆ ಪಾಂಗ್ ಸಹ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದೆ. ಚಿತ್ರದಲ್ಲಿ ತೆಲುಗು ನಟ ಸುನೀಲ್ (ಪುಷ್ಪ, ಜೈಲರ್ ೨), ಕಬೀರ್ ದುಹಾನ್ ಸಿಂಗ್, ರಾಜ ತಿರಂದಾಸು,…

Read More

ಮಂಗಳೂರು, ಅ.10 : ಅಲ್ ನಜೀಂ ಉಸ್ ಸಕೀಬ್ ಪರ್ಫಮ್ ಟ್ರೇಡರ್ಸ್ ಸಂಸ್ಥೆಯ ಅಬ್ದುಲ್ ಹಮೀದ್ ಅವರ ಮಾಲಕತ್ವದ  ಹೊಸ ಫರ್ಫಮ್ ಬ್ರಾಂಡ್ ‘ತುಝರ್ ಪರ್ಫಮ್ ನಗರದ ಬೆಂದೂರ್‌ವೆಲ್ನ ಅಗ್ನೆಸ್ ಕಾಲೇಜು ಪಕ್ಕದ ಸೇಂಟ್ ಸೆಬಾಸ್ಟಿಯನ್ ಮಿನಿ ಹಾಲ್‌ನಲ್ಲಿ ಗುರುವಾರ ಬಿಡುಗಡೆಗೊಗೊಂಡಿತು. ‘ತುಝರ್” ಪರ್ಫಮ್ ಉತ್ಪನ್ನವನ್ನು ಯೆನೆಪೊಯ ಡೀಮ್ ಟು ಬಿ ಯೂನಿವರ್ಸಿಟಿಯ ಕುಲಪತಿ ಡಾ. ಯೆನೆಪೋಯ ಅಬ್ದುಲ್ಲಾ ಕುಂಞ ಅವರು ಬಿಡುಗಡೆಗೊಳಿಸಿದರು. ಬಳಿಕ ಮಾತಾನಾಡಿದ ಅವರು, ಅಬ್ದುಲ್ ಹಮೀದ್ ಅವರ ಮಾಲಕತ್ವದ ಹೊಸ ಫರ್ಫಮ್ ಬ್ರಾಂಡ್ ‘ತುಝರ್ ಪರ್ಫಮ್ ನೂತನ ಉದ್ಯಮಕ್ಕೆ ಶುಭವಾಗಲಿ ಎಂದರು. ಸ್ವಾಗತ ಭಾಷಣ ಮಾಡಿದ ತುಝರ್ ಸಂಸ್ಥೆಯ ಎಂಡಿ ಅಬ್ದುಲ್ ಹಮೀದ್ ಮಾತನಾಡಿ, ಮನೆಯ ಒಂದು ಸಣ್ಣ ಕೋಣೆಯನ್ನೇ ಲ್ಯಾಬ್ ಮಾಡಿಕೊಂಡು ಸುಗಂಧ ದ್ರವ್ಯ ತಯಾರಿ ಕುರಿತು ರೀಸರ್ಚ್ ಮಾಡಲು ಆರಂಭಿಸಿದೆ. ಅಲ್ಲಿಂದ 6 ತಿಂಗಳ ಕಾಲ ನಿರಂತರ ಪರಿಶ್ರಮದಿಂದ ಇಂದು ತುಝರ್ ಅನ್ನುವ ಬ್ರಾಂಡ್ ಅನ್ನು ಲೋಕಾರ್ಪಣೆಗೊಳಿಸುತ್ತಿದ್ದೇನೆ. ಡಾ.ಯೆನೆಪೋಯ ಅಬ್ದುಲ್ ಕುಂಞ ಅವರು ನನ್ನನ್ನು…

Read More

ಮಂಗಳೂರು, ಅ.09 : ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಆವರಣದಲ್ಲಿ ಅ. 11 ರಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 72 ನೇ ಅವತರಣೋತ್ಸವ ಅಮೃತೋತ್ಸವ 2025ನ್ನು ಶದ್ಧಾ ಭಕ್ತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತದೆ ಎಂದು ಸೇವಾ ಸಮಿತಿ ಅಧ್ಯಕ್ಷ ಸುರೇಶ್ ಅಮೀನ್ ಅವರು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8.45ಕ್ಕೆ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಅಮೃತ ಜ್ಯೋತಿಯನ್ನು ಬೆಳಗಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9ರಿಂದ 11 ಗಂಟೆಯವರೆಗೆ ಶ್ರೀ ಗುರು ಪಾದುಕಾ ಪೂಜೆ, ಸತ್ಸಂಗ, ಭಜನೆ, ಧ್ಯಾನ, 11ರಿಂದ 12ರ ವರೆಗೆ ಸಭಾ ಕಾರ್ಯಕ್ರಮ ಇರುತ್ತದೆ. ವಿಧಾನ ಸಭಾಧ್ಯಕ್ಷರಾದ ಯು.ಟಿ, ಖಾದರ್, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂ ರಾವ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಅಮೃತ ವಿಶ್ವವಿದ್ಯಾ ಪೀಠಂ ಕೊಚ್ಚಿ ಕ್ಯಾಂಪಸ್ ನ ಡೀನ್, ನಿರ್ದೇಶಕ ಡಾ| ಯು. ಕೃಷ್ಣ ಕುಮಾರ್ ಭಾಗವಹಿಸಲಿದ್ದಾರೆ…

Read More

ಸಂತೆಕಟ್ಟೆ, ಅ.09 : ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಅ. 5, ಭಾನುವಾರ, ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರು ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿ ಆರ್ ಓ ಮತ್ತು ತೊಟ್ಟಂ ಚರ್ಚ್ ನ ಧರ್ಮಗುರು ರೆ.ಫಾ.ಡೆನಿಸ್ ಡೆಸಾ ಅವರು ಎಟಿಎಂ ಅನ್ನು ಉದ್ಘಾಟಿಸಿದರು. ಕಲ್ಯಾಣಪುರ-ಸಂತೆಕಟ್ಟೆ ಕರಾವಳಿ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಅವರು ಎಟಿಎಂನಿಂದ ಮೊದಲ ಹಣ ಹಿಂಪಡೆದರು. ಸೇಫ್ ರೂಮ್ ಅನ್ನು ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅತೀ ವಂ. ಮೊ| ಫರ್ಡಿನಾಂಡ್ ಗೊನ್ಸಾಲ್ವಿಸ್ ಮತ್ತು ಇ-ಸ್ಟಾಂಪಿಂಗ್ ಸೌಲಭ್ಯವನ್ನು ಸುಬ್ರಹ್ಮಣ್ಯ ನಗರದ ಸೇಂಟ್ ಪಾಲ್ ಚರ್ಚ್ ನ ಸಭಾಪಾಲಕರು ರೆವೆರೆಂಡ್ ಕಿಶೋರ್ ಕುಮಾರ್ ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ…

Read More

ಮಂಗಳೂರು, ಅ.08 : ಅಲ್ ನಜೀಂ ಉಸ್ ಸಕೀಬ್ ಪರ್ಫಮ್ ಟ್ರೇಡರ್ಸ್ ಸಂಸ್ಥೆಯ ಹೊಸ ಫರ್ಫಮ್ ಬ್ರಾಂಡ್ ತುಝರ್ ಇದರ ಬಿಡುಗಡೆ ಕಾರ್ಯಕ್ರಮವು ಅ. 9, ಗುರುವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಬೆಂದೂರ್ ವೆಲ್ ನ ಅಗ್ನೆಸ್ ಕಾಲೇಜು ಪಕ್ಕದ ಸೇಂಟ್ ಸೆಬಾಸ್ಟಿಯನ್ ಮಿನಿ ಹಾಲ್ ನಲ್ಲಿ ನಡೆಯಲಿದೆ ಎಂದು ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಎಂಡಿ ಅಬ್ದುಲ್ ಹಮೀದ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಕಾರ್ಯಕ್ರಮವನ್ನು ಯೆನೆಪೊಯ ಡೀಮ್ಸ್ ಟು ಬಿ ಯೂನಿವರ್ಸಿಟಿಯ ಕುಲಪತಿ ಡಾ. ಯೆನೆಪಯ ಅಬ್ದುಲ್ಲಾ ಕುಂಞ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ರಾಷ್ಟ್ರೀಯ ಆಯೋಗದ ಅಧ್ಯಕ್ಷ (ಆಲೈಡ್ ಮತ್ತು ಹೆಲ್ತ್ ಕೇರ್ ಪ್ರೊಫೆಷನ್ಸ್) ಡಾ. ಯು. ಟಿ. ಇಪ್ತಿಖಾರ್ ಫರೀದ್, ಅಲ್ ಮುಝನ್ ಸಂಸ್ಥೆಯ ಅಧ್ಯಕ್ಷ ಮತ್ತು ಸಿಇಒ ಹಾಜಿ ಜಕರಿಯಾ…

Read More