Subscribe to Updates
Get the latest creative news from FooBar about art, design and business.
Author: admin
ಬೆಂಗಳೂರು, ,ಮಾ. 06 : ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ತೊಗರಿಬೇಳೆ, ಉಪ್ಪು, ಸಕ್ಕರೆ, ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಸಿಎಂ, ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ 4.54 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗಾಗಿ ಒಟ್ಟು 17,167 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು. ಪ್ರಸ್ತುತ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಪ್ರತಿ ತಿಂಗಳು ಪೌಷ್ಟಿಕಾಂಶವುಳ್ಳ ತೊಗರಿಬೇಳೆ, ಉಪ್ಪು ,ಸಕ್ಕರೆ ಮತ್ತು ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈ ಸಾಲಿನಲ್ಲಿ 6,200 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದರು.
ಮಂಗಳೂರು, ಮಾ.5 : : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 58ನೇ ಬೋಳಾರ ವಾರ್ಡಿನಲ್ಲಿ ಸುಮಾರು ಒಂದು ಕೋಟಿ ರೂ. ವಿಶೇಷ ಅನುದಾನದಲ್ಲಿ ಟಿವಿಎಸ್ ಫ್ಯಾಕ್ಟರಿ ರಸ್ತೆಯು ಸಮಗ್ರ ಅಭಿವೃದ್ಧಿಗೊಳ್ಳಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರುಗಳಾದ ಭಾನುಮತಿ ಪಿ.ಎಸ್, ಶೈಲೇಶ್ ಶೆಟ್ಟಿ, ಮಂಡಲದ ಉಪಾಧ್ಯಕ್ಷರಾದ ದೀಪಕ್ ಪೈ, ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಸಾದ್ ಬೋಳಾರ್, ಪ್ರಮುಖರಾದ ಅಮಿತ್ ಶೆಟ್ಟಿ, ದಿನೇಶ್ ಕರ್ಕೇರ, ಪ್ರವೀಣ್ ನಿಡ್ಡೆಲ್, ನಾಗರಾಜ್ ಆಚಾರ್ಯ, ಸಾತ್ವಿಕ್ ಭುವನ್, ಸುಜಾತ ಆಳ್ವ, ರೂಪ, ಜಯಶ್ರೀ, ಕೇಶವ್ ಶೆಟ್ಟಿ, ದಿನೇಶ್ ಶೆಟ್ಟಿ, ಸುರೇಶ, ಪುಂಡಲೀಕ ಸುವರ್ಣ, ದೇವದಾಸ್ ಶೆಟ್ಟಿ, ರವಿ ಆಚಾರಿ, ಪುಟ್ಟ, ಗಿರೀಶ್,ರಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು, ಮಾ.4 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯು ತನ್ನ 33ನೇ ವಾರ್ಷಿಕೋತ್ಸವವನ್ನು ಮಾರ್ಚ್ 6 ಕ್ಕೆ ಕೆಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ಅಡಿಟೋರಿಯಂನಲ್ಲಿ “ಸಮನ್ವಯ 2026” ಎಂಬ ಶೀರ್ಷಿಕೆಯಲ್ಲಿ ಆಚರಿಸುತ್ತಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಫಾತಿಮಾ ಡಿ ಸಿಲ್ವಾ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನವದೆಹಲಿ ಟೈನ್ ನರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಕಾರ್ಯದರ್ಶಿಯಾದ ಎವ್ಲಿನ್ ಪಿ.ಕಣ್ಣನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ಡೀಮ್ಸ್ ಟು ಬಿ ಯುನಿವರ್ಸಿಟಿಯ ತಾಂತ್ರಿಕ ಶಿಕ್ಷಣದ ಉಪಾಧ್ಯಕ್ಷರಾದ ಪ್ರೊ. ಡಾ.ಗೋಪಾಲ್ ಮೊಗರಾಯ ವಹಿಸಲಿದ್ದಾರೆ. ವಾರ್ಷಿಕೋತ್ಸವದ ಪ್ರಯುಕ್ತ ಒಂದು ವಾರಪೂರ್ತಿ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯ ಪ್ರಮುಖರಾದ ಸಬಿತಾ ನಾಯಕ್ , ಪ್ರತಿಮಾ, ಜೆಸಿಂತಾ ವೇಗಸ್ , ಮಾಳವಿಕಾ ಮತ್ತಿತರರು ಉಪಸ್ಥಿತರಿದ್ದರು.
ಜಕಾರ್ತ, ಮಾ. 03 : ಇಂಡೋನೇಷ್ಯಾದ ಸುಮಾತ್ರಾ ದ್ವೀಪದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಸಾವುನೋವುಗಳು ಅಥವಾ ಹಾನಿಯ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಲಭಿಸಿಲ್ಲ. ಪೆಸಿಫಿಕ್ “ರಿಂಗ್ ಆಫ್ ಫೈರ್” ನಲ್ಲಿ ಹಲವಾರು ಟೆಕ್ಟೋನಿಕ್ ಪ್ಲೇಟ್ಗಳು ಒಮ್ಮುಖವಾಗುವ ಕಾರಣದಿಂದಾಗಿ ಆಗಾಗ್ಗೆ ಭೂಕಂಪನ ಚಟುವಟಿಕೆಯನ್ನು ಅನುಭವಿಸುವ ಪ್ರದೇಶವಾದ ಸುಮಾತ್ರಾ ಬಳಿಯ ನೀರಿನಲ್ಲಿ ಕಂಪನ ಸಂಭವಿಸಿದೆ.
ಟೆಹ್ರಾನ್, ಮಾ. 02 : ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ, ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ ಎಂದು ಇರಾನ್ನ ಸರ್ಕಾರಿ ಮಾಧ್ಯಮಗಳು ಭಾನುವಾರ ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿವೆ. ಅಮೆರಿಕದ ಅತ್ಯಾಧುನಿಕ B-2 ಸ್ಟೈಲ್ ಬಾಂಬರ್ಗಳು ಮತ್ತು ಇಸ್ರೇಲ್ನ F-35 ಯುದ್ಧ ವಿಮಾನಗಳು ರೇಡಾರ್ಗಳ ಕಣ್ಣು ತಪ್ಪಿಸಿ ಇರಾನ್ನ ವಾಯುಗಡಿಯನ್ನು ಸದ್ದಿಲ್ಲದೆ ಪ್ರವೇಶಿಸಿ ನಡೆಸಿದ ವೈಮಾನಿಕ ದಾಳಿಯಲ್ಲಿ ಆಯತೊಲ್ಲಾ ಅಲಿ ಖಮೇನಿ ಅವರು ಹತ್ಯೆಯಾಗಿದ್ದಾರೆ ಇರಾನ್ನ ಸರ್ಕಾರಿ ಮಾಧ್ಯಮಗಳು ಖಚಿತಪಡಿಸಿವೆ. ಅಮೇರಿಕಾ ಮತ್ತು ಇಸ್ರೇಲ್ ಜಂಟಿ ದಾಳಿಯ ಬಳಿಕ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿದೆ. ಇರಾನ್ ಪ್ರತಿದಾಳಿಗಳನ್ನು ತೀವ್ರಗೊಳಿಸಿದ್ದು, ಇಸ್ರೇಲ್ ಜೊತೆಗೆ ಇತರೆ ಮುಸ್ಲಿಂ ರಾಷ್ಟ್ರಗಳಲ್ಲಿರುವ ಅಮೆರಿಕದ ಸೈನಿಕ ನೆಲೆಗಳನ್ನು ಗುರಿಯಾಗಿಸಿಕೊಂಡಿದೆ.
ಸುಳ್ಯ , ಮಾ. 02 : ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಅವರು ಕುಣಿತ ಭಜನೆ ಮಾಡುತ್ತಾ ಇದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಭಜನ ಮಂಡಳಿಯ ಸದಸ್ಯೆ ರತ್ನಾವತಿ ಕುಸಿದು ಬಿದ್ದ ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ತೆಗೆದುಕೊಂಡು ಹೋಗಲಾಯಿತಾದರೂ,ಅಲ್ಲಿಗೆ ತಲುಪುವ ಮೊದಲೇ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ವಾಷಿಂಗ್ಟನ್, ಮಾ. 01 : ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಘೋಷಿಸಿದ್ದಾರೆ. ಟ್ರೂತ್ ಸೋಶಿಯಲ್’ ಸಾಮಾಜಿಕ ಜಾಲತಾಣದಲ್ಲಿ ಟ್ರಂಪ್ ಅವರು ಪ್ರಕಟಿಸಿದ ಸಂದೇಶದಲ್ಲಿ ಖಮೇನಿ ಅವರನ್ನು “ವಿಶ್ವ ಇತಿಹಾಸದ ಅತ್ಯಂತ ದುಷ್ಟ ವ್ಯಕ್ತಿಗಳಲ್ಲಿ ಒಬ್ಬ” ಎಂದು ಕರೆದಿದ್ದಾರೆ. ಖಮೇನಿ ಸಾವಿನಿಂದ ಇರಾನ್ ಜನತೆಗೆ ತಮ್ಮ ದೇಶವನ್ನು ಮರಳಿ ಪಡೆಯುವ ಅವಕಾಶ ಸಿಕ್ಕಂತಾಗಿದೆ ಎಂದು ಅವರು ಹೇಳಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಗುಪ್ತಚರ ಸಂಸ್ಥೆಗಳ ಸಮನ್ವಯದಿಂದ ನಡೆದ ನಿಖರ ಬಾಂಬ್ ದಾಳಿಯಲ್ಲಿ ಟೆಹ್ರಾನ್ನಲ್ಲಿರುವ ಖಮೇನಿ ನಿವಾಸವನ್ನು ಗುರಿಯಾಗಿಸಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಸರ್ಕಾರ ಇದುವರೆಗೆ ಅಧಿಕೃತವಾಗಿ ಖಮೇನಿ ಸಾವಿನ ಬಗ್ಗೆ ಯಾವುದೇ ದೃಢೀಕರಣ ನೀಡಿಲ್ಲ.
ಮಂಗಳೂರು, ಮಾ. 01 : ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಸಾಧನೆಯ ಸಂಭ್ರಮಾಚರಣೆಯು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್ಶಾಖೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಮೊದಲ ವರ್ಷದೊಳಗೆ ಸಾಧಿಸಲಾದ ರೂ.10 ಕೋಟಿ ಮೈಲಿಗಲ್ಲು ಸಾಮೂಹಿಕ ಪ್ರಯತ್ನ, ದೂರದೃಷ್ಟಿಯ ಯೋಜನೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಗ್ರಾಹಕರ ಅಚಲ ನಂಬಿಕೆಯ ಫಲಿತಾಂಶವಾಗಿದೆ, ಬ್ಯಾಂಕಿನ ಪ್ರಾಥಮಿಕ ಉದ್ದೇಶ ತನ್ನ ಗ್ರಾಹಕರಿಗೆ ತ್ವರಿತ ಮತ್ತು ಪರಿಣಾಮಕಾರಿ ಸೇವೆಯನ್ನು ಒದಗಿಸುವುದು ಎಂದು ಹೇಳಿದರು. ಗ್ರಾಹಕರ ಬಲವಾದ ಬೆಂಬಲ ಮತ್ತು ನಂಬಿಕೆಯಿಂದಾಗಿ ಶಾಖೆ ಈ ಮೈಲಿಗಲ್ಲು ಸಾಧಿಸಲು ಸಾಧ್ಯವಾಯಿತು, ಡಿಸೆಂಬರ್ ತಿಂಗಳಲ್ಲಿಯೇ ಶಾಖೆಯು ರೂ.10 ಕೋಟಿ ಗಡಿ ತಲುಪಿತ್ತು ಮತ್ತು ಈಗ ರೂ.12 ಕೋಟಿ ಮೈಲಿಗಲ್ಲನ್ನು ದಾಟಿದೆ. ಶಾಖೆಯ ಗ್ರಾಹಕರು ಬ್ಯಾಂಕಿನ ನಿಜವಾದ ಬ್ರಾಂಡ್ ರಾಯಭಾರಿಗಳು ಎಂದು…
ಮಂಗಳೂರು, ಫೆ. 28 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮರೋಳಿ ಸೂರ್ಯ ನಾರಾಯಣ ದೇವಸ್ಥಾನ ಸಮೀಪದ 37ನೇ ವಾರ್ಡಿನ ಶಾಂತಿನಗರ ರುಕ್ಕಯ್ಯ ದೇವಾಡಿಗ ಮನೆ ಪರಿಸರದ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಸ್ಥಳೀಯರ ಮನವಿ ಮೇರೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಸುಮಾರು 28 ಲಕ್ಷ ರೂ ವೆಚ್ಚದಲ್ಲಿ ರಸ್ತೆ, ಚರಂಡಿ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಯು ನಡೆಯಲಿದೆ. ಇದು ತುರ್ತಾಗಿ ನಡೆಯಬೇಕಿರುವ ಕಾಮಗಾರಿಯಾಗಿದ್ದು ಈ ಹಿಂದೆಯೇ ಗುದ್ದಲಿ ಪೂಜೆ ನಡೆದಿದ್ದರೂ ಅರ್ಧಕ್ಕೆ ನಿಂತಿತ್ತು. ಇದೀಗ ಮತ್ತೆ ಪ್ರಕ್ರಿಯೆ ಆರಂಭವಾಗಿದೆ ಎಂದರು. ಈ ಸಂದರ್ಭದಲ್ಲಿ ಪ್ರಮುಖರಾದ ಕಿರಣ್ ದೇವಾಡಿಗ, ಜಗದೀಶ್ ಶೆಣೈ, ರಾಘವೇಂದ್ರ, ಪ್ರಶಾಂತ್ ಪ್ರಭು, ಅರುಣ್ ಶೆಟ್ಟಿ, ಪ್ರಶಾಂತ್, ಅನಿತಾ, ಮಾಲತಿ, ಮಮತ, ರಾಜೇಶ್ ಅಲಂಗಾರ್, ಮ್ಯಾಕ್ಸಿ ಡಿಸೋಜ, ಜಾನ್ ಡಿಸೋಜ, ಆಗ್ನೇಸ್, ನಾಗೇಶ್ ಸರಳ, ಲಕ್ಷ್ಮಣ, ರುಕ್ಮಯ್ಯ, ಸುಲೋಚನ, ರಾಜೇಶ್, ದೀಪಕ್ ಸೇರಿದಂತೆ…
ಮಂಗಳೂರು, ಫೆ. 27 : ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ಮಂಗಳೂರು ಹೊರವಲಯ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ನಡೆದಿದೆ. ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಎಂದು ಗುರುತಿಸಲಾಗಿದೆ. ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೆಲಸ ಮುಗಿಸಿಕೊಂಡು ಬಿಜೈಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಲಾರಿಯೊಂದು ಹಿಂದಿನಿಂದ ಬಂದು ಢಿಕ್ಕಿ ಹೊಡೆದ್ದಿದ್ದು, ಢಿಕ್ಕಿಯ ರಭಸಕ್ಕೆ ಅವರು ಲಾರಿಯ ಹಿಂಭಾಗದ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ನಿರೀಕ್ಷಕ ಶಿವಕುಮಾರ್ ಎಂ. ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












