Subscribe to Updates
Get the latest creative news from FooBar about art, design and business.
Author: admin
ಕೊಯಮತ್ತೂರು : ಕಾರು ಚಲಿಸುತ್ತಿದ್ದ ವೇಳೆ ಕಾರಿಗೆ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಜೀವ ದಹನವಾದ ಘಟನೆ ಕೊಯಮತ್ತೂರಿನ ಉಕ್ಕಡಂ ಬಳಿಯ ಕೊಟ್ಟೈಮೇಡುವಿನ ಈಶ್ವರನ್ ದೇವಸ್ಥಾನದ ಮುಂಭಾಗದಲ್ಲಿ ಅ. 23, ಭಾನುವಾರ ಬೆಳಿಗ್ಗೆನಡೆದಿದೆ. ಸ್ಫೋಟದ ಶಬ್ದ ಕೇಳಿದ ಸಾರ್ವಜನಿಕರು ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ
ನವದೆಹಲಿ : ನವೆಂಬರ್ ನಿಂದ ಪ್ರಯಾಣಿಕ ವಿಮಾನ ಮತ್ತು ಕಾರ್ಗೊ ವಿಮಾನದಲ್ಲಿ ಸಾಕು ಪ್ರಾಣಿಗಳ ಸಂಚಾರಕ್ಕೆ ಆಕಾಸ ಏರ್ಲೈನ್ಸ್ ಅವಕಾಶ ಕಲ್ಪಿಸಲಿದೆ ಎಂದು ಸಂಸ್ಥೆತಿಳಿಸಿದೆ. ಅ.15ರಿಂದ ಬುಕ್ಕಿಂಗ್ ಆರಂಭವಾಗಲಿದೆ. ಪ್ರತಿ ಸಾಕುಪ್ರಾಣಿಯನ್ನು ಬೋನಿನಲ್ಲಿ ಇರಿಸಬೇಕಾಗುತ್ತದೆ. ಈ ಬಗ್ಗೆ ಮಾಹಿತಿ ನೀಡಿರುವ ಆಕಾಶ್ ಏರ್ಲೈನ್ಸ್ನ ಸಹ ಸಂಸ್ಥಾಪಕ ಪ್ರವೀಣ್ ಐಯ್ಯರ್, ಪ್ರಯಾಣಿಕ ವಿಮಾನದಲ್ಲಿ ಬೋನ್ ಸೇರಿ ತೂಕ 7 ಕೆಜಿ ಮೀರಬಾರದು. ಚೆಕ್-ಇನ್ನಲ್ಲಿ 32 ಕೆ.ಜಿ. ಮೀರಬಾರದು. ಹೆಚ್ಚಿನ ತೂಕವಿರುವ ಸಾಕು ಪ್ರಾಣಿಗಳಿಗೆ ಬೇರೆ ವ್ಯವಸ್ಥೆ ಇದೆ ಎಂದು ತಿಳಿಸಿದ್ದಾರೆ.
ಕಾಸರಗೋಡು: ಅ.5,ಬುಧವಾರ ತಡರಾತ್ರಿ ತೃಶ್ಯೂರು ವಡಕ್ಕಂಚೇರಿಯಲ್ಲಿ ನಡೆದ ಬಸ್ಸು ಅಪಘಾತದಲ್ಲಿ9 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ9 ಮಂದಿ ಮೃತಪಟ್ಟಿದ್ದು,ಈ ಪೈಕಿ6 ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ. ಅಪಘಾತವು ಬುಧವಾರ ತಡರಾತ್ರಿ ನಡೆದಿತ್ತು. ಕೇರಳದ ಎರ್ನಾಕುಲಂ ಮುಳುಂಪುರತ್ ವೆಟ್ಟಿಕಲ್ ಮಾರ್ ಬಸೆಲಿಯಾಸ್ ವಿದ್ಯಾರ್ಥಿಗಳು ಊಟಿಗೆ ಪ್ರವಾಸಕ್ಕೆ ಹೊರಟಿದ್ದರು. ಈ ಬಸ್ಸು ವಡಕ್ಕಂಚೇರಿಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ಸಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟು, 5೦ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ನವದೆಹಲಿ: ಕೇಂದ್ರ ಸರ್ಕಾರವು ಸೆ 28, ಬುಧವಾರ ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಹಾಗೂ ಅದರ ಅಂಗಸಂಸ್ಥೆಗಳನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ 5 ವರ್ಷಗಳ ಕಾಲ ನಿಷೇಧಿಸಿದೆ. ಪಿಎಫ್ಐ ಸಂಘಟನೆಯು ಐಸಿಸ್ ಮತ್ತು ಇತರ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದೆ ಎಂದು ಸರ್ಕಾರ ಆರೋಪಿಸಿದೆ. ಉಗ್ರ ಸಂಘಟನೆಗಳ ಮುಖಂಡರೊಂದಿಗೆ ಸಂಪರ್ಕ, ಹಾಗೂ ದುಷ್ಕೃತ್ಯಕ್ಕೆ ಕೋಟ್ಯಂತರ ಹಣ ಬಳಕೆ ಆರೋಪದಡಿ ದೇಶದ ಹಲವು ರಾಜ್ಯಗಳಲ್ಲಿ ಎನ್ಐಎ ರೇಡ್ ನಡೆಸಿತ್ತು. ಅಲ್ಲದೆ, ಪಿಎಫ್ಐ ಯೊಂದಿಗೆ ಸಂಬಂಧ ಹೊಂದಿರುವ 15 0 ಕ್ಕೂಹೆಚ್ಚುಮಂದಿಯನ್ನು ಬಂಧಿಸಿದ್ದವು.ಉತ್ತರ ಪ್ರದೇಶ, ಕರ್ನಾಟಕ, ಗುಜರಾತ್, ದೆಹಲಿ, ಮಹಾರಾಷ್ಟ್ರ, ಅಸ್ಸಾಂ ಮತ್ತು ಮಧ್ಯಪ್ರದೇಶದಲ್ಲಿ ರಾತ್ರೋರಾತ್ರಿ ಹಲವರನ್ನು ಬಂಧಿಸಲಾಗಿತ್ತು. ಸೆಪ್ಟೆಂಬರ್ 22 ರಂದು, ಎನ್ಐಎ ನಡೆಸಿದ ದಾಳಿಯಲ್ಲಿ ಪಿಎಫ್ಐ ನ 100 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ ನಂತರ ಕೇಂದ್ರ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ. ದೇಶಾದ್ಯಂತ ಕಳೆದ 2 ವಾರಗಳ ಕಾಲ ಪಿಎಫ್ಐ ಸಂಘಟನೆ ಮೇಲೆ ರೇಡ್ಗಳು ನಡೆದ…
ಕಾರ್ಕಳ: ವಿಪರೀತ ಮದ್ಯವ್ಯಸನಿಯಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರನ್ನು ಕಾರ್ಕಳ ತಾಲೂಕಿನ ರೆಂಜಾಳ ಪೆರಲ್ದಬೆಟ್ಟು ನಿವಾಸಿ ಮಥಾಯಸ್ ಸಾಂಕ್ತಿಸ್(55) ಎಂದು ಗುರುತಿಸಲಾಗಿದೆ. ಅವರು ಮಾನಸಿಕವಾಗಿ ಜೀವನದಲ್ಲಿ ನೊಂದು ಸೆ .16 ಶುಕ್ರವಾರ ತಮ್ಮ ತಂದೆಯವರ ಜಾಗದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ಆಟೋ ರಿಕ್ಷಾ ಒಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಸಮೀಪದ ಪಾನೀರು ಎಂಬಲ್ಲಿ ಸೆ.12ರಂದು ತಡರಾತ್ರಿ ವೇಳೆ ಸಂಭವಿಸಿದೆ. ಮೃತರನ್ನು ಸೋಮೇಶ್ವರ ದೇವಸ್ಥಾನ ಬಳಿಯ ನಿವಾಸಿ ಆನಂದ್ ಸಪಲ್ಯ (70) ಎಂದು ಗುರುತಿಸಲಾಗಿದೆ. ಆನಂದ್ ಅವರು ನಿನ್ನೆ ರಾತ್ರಿ ದೇರಳಕಟ್ಟೆ ಕಡೆಗೆ ಬಾಡಿಗೆಗೆ ತೆರಳಿ ವಾಪಸ್ಸಾಗುತ್ತಿದ್ದಾಗ ಪಾನೀರು ಅಸಿಸ್ಸಿ ಶಾಲೆ ಬಳಿ ಕಮರಿಗೆ ಉರಳಿ ತಲೆಗೆ ಗಾಯಗಳಾಗಿ ಸಾವನ್ನಪ್ಪಿದ್ದಾರೆ.ಈ ಸಂಬಂಧ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು:ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಸೆ.8,ಗುರುವಾರದಂದು ಕ್ರೈಸ್ತರು ಮೊಂತಿಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಕ್ರೈಸ್ತರ ಮೊಂತಿ ಫೆಸ್ತ್ ಅಥವಾ ತೆನೆಹಬ್ಬ ಸೆಪ್ಟೆಂಬರ್ ತಿಂಗಳ 8ನೇ ತಾರೀಕಿನಂದು ಬರುತ್ತದೆ. ಅಂದು ಯೇಸು ಕ್ರಿಸ್ತರ ತಾಯಿ ಮೇರಿ ಅವರ ಜನ್ಮದಿನ. ಈ ದಿನವನ್ನು ಕರಾವಳಿಯ ಜಿಲ್ಲೆಗಳಲ್ಲಿ ಕ್ರೈಸ್ತ ಬಾಂಧವರು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಲಾಗುತ್ತದೆ. ಕರಾವಳಿಯ ಕ್ರೈಸ್ತರು ಹೆಚ್ಚಿನವರು ಕೃಷಿಯನ್ನೇ ಜೀವನಾಧರವಾಗಿ ನಂಬಿದವರು. ಇನ್ನು ಬೆಳೆ ಹಬ್ಬ ಆಗಿರುವುದರಿಂದ ಇದು ಸಾಂಸ್ಕತಿಕ ಆಚರಣೆಯೂ ಆಗಿದೆ. ಹೀಗೆ ಮೇರಿ ಮಾತೆಯ ಜನ್ಮ ದಿನಾಚರಣೆಯ ಜತೆಗೆ ಬೆಳೆ ಹಬ್ಬವನ್ನೂ ಥಳಕು ಹಾಕಿಕೊಂಡು ಮೊಂತಿ ಫೆಸ್ತ್ ಆಚರಿಸಲಾಗುತದೆ.
ಮಂಗಳೂರು : ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ಹಿರಿಯ ಸದಸ್ಯ ಜಯಾನಂದ ಅಂಚನ್ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಆಗಿ ಬಿಜೆಪಿಯ ಕಾರ್ಪೊರೇಟರ್ ಪೂರ್ಣಿಮಾ ಆಯ್ಕೆಯಾಗಿದ್ದಾರೆ. ಸೆ.9ರ ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆಯಿತು. ಚುನಾವಣೆಯ ವೇಳೆ ಒಟ್ಟು 65 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ 62 ಸದಸ್ಯರು ಚುನಾವಣೆಗೆ ಹಾಜರಾಗಿದ್ದರು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಜಿ.ಸಿ. ಪ್ರಕಾಶ್ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಚುನಾವಣಾಧಿಕಾರಿಯು ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್ ಗಳ ಹೆಸರನ್ನು ಘೋಷಿಸಿದರು. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ,ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಮಹಾನಗರ ಪಾಲಿಕೆಯ ಕಾರ್ಪೊರೇಟರ್ಗಳು, ಇತರೆ ಚುನಾವಣಾ ಪ್ರಕ್ರಿಯೆ ಅಧಿಕಾರಿಗಳು ಚುನಾವಣೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು : ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ(61) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳವಾರ ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಉಮೇಶ್ ಕತ್ತಿ ನಿಧನರಾಗಿದ್ದಾರೆ. ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಅಭಿವೃದ್ದಿಗೆ ಕತ್ತಿಯವರ ಕೊಡುಗೆ ಸ್ಮರಣೀಯ ಎಂದು ತಿಳಿಸಿದ್ದಾರೆ.
ಲಕ್ನೋ : ಉತ್ತರ ಪ್ರದೇಶದ ಭಾರತೀಯ ಜನತಾ ಪಾರ್ಟಿಯ ಶಾಸಕ ಅರವಿಂದ್ ಗಿರಿ (65) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಾಸಕ ಅರವಿಂದ್ ಸೆ. 06, ಮಂಗಳವಾರ ಬೆಳಗ್ಗೆ ಲಕ್ನೋಗೆ ತೆರಳುತ್ತಿದ್ದ ವೇಳೆ ಕಾರಿನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ಶಾಸಕ ಅರವಿಂದ್ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಅರವಿಂದ್ ಗಿರಿ 1993 ರಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿ 2006 ರಲ್ಲಿ ಎಸ್ ಪಿ ಅಭ್ಯರ್ಥಿಯಾಗಿ ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು.