Author: admin

ಮಂಗಳೂರು, ಸೆ.5 : ಅಳಕೆಯ ಮಲ್ಯ ಆರ್ಕೇಡ್‌ನಲ್ಲಿ ಶ್ರೇಯಾಸ್ ಸ್ವೀಟ್ಸ್ ನ ನವೀಕೃತ, ಹವಾನಿಯಂತ್ರಿತ ಮಳಿಗೆ ಬುಧವಾರ ಆರಂಭಗೊಂಡಿತು. ಶ್ರೇಯಾಸ್ ಸ್ವೀಟ್ಸ್ ನ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, 22 ವರ್ಷಗಳಿಂದ ಶ್ರೇಯಾಸ್ ಸ್ವೀಟ್ಸ್ ಉತ್ತಮ ಸೇವೆ ನೀಡುತ್ತಾ ಬಂದಿದೆ. ಜನರಿಗೆ ಆರೋಗ್ಯಕರ ತಿನಿಸುಗಳನ್ನು ಪೂರೈಸಿದೆ. ಗುಣಮಟ್ಟ ಕಾಯ್ದುಕೊಂಡ ಕಾರಣ ಶ್ರೇಯಾಸ್ ಸ್ವೀಟ್ಸ್ ತಿನಿಸುಗಳನ್ನು ಜನ ಖುಷಿ ಪಡುತ್ತಾರೆ ಎಂದರು. ಮಾಲಕ ರಮೇಶ್ ಮಲ್ಯ ಮಾತನಾಡಿ, ಶ್ರೇಯಾಸ್ ಸ್ವೀಟ್ಸ್ ಅನ್ನು 2002ರಲ್ಲಿ ಜಿ.ಎಚ್.ಎಸ್. ರಸ್ತೆಯಲ್ಲಿ ಆರಂಭಿಸಲಾಗಿದ್ದು, 22 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸಿಹಿ ತಿಂಡಿಗಳನ್ನು ಪೂರೈಸಿದ್ದೇವೆ. ಉತ್ತರ ಭಾರತೀಯ, ಬಂಗಾಲಿ ಸಿಹಿ ತಿಂಡಿಗಳು, ಗೋಲ್ಡ್ ಸೀಟ್ಸ್ ಚಾಟ್ಸ್, ಮಿಕ್ಸರ್, ವಿವಿಧ ಕರಿದ ತಿಂಡಿಗಳು, ಬಿಸಿ ಮೈಸೂರು ಪಾಕ್, ಸ್ವೀಟ್ಸ್ ಗಳ  ಗಿಫ್ಟ್ ಪ್ಯಾಕ್, ಡ್ರೈಫ್ರುಟ್ಸ್ ಲಭ್ಯವಿದ್ದು, ಎಲ್ಲದಕ್ಕೂ ಪ್ರತ್ಯೇಕ ಕೌಂಟರ್‌ಗಳಿವೆ. ಗ್ರಾಹಕರಿಗೆ ಪ್ರಿಯವಾದ ಸಿಹಿತಿಂಡಿಗಳು, ಉತ್ತಮ ಬೆಲೆಯಲ್ಲಿ ನಮ್ಮಲ್ಲಿ ದೊರೆಯುತ್ತದೆ ಎಂದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು,…

Read More

ಅತ್ತಾವರ,ಸೆ.04: ಅತ್ತಾವರ ಶ್ರೀ ಕ್ಷೇತ್ರ ಚಕ್ರಪಾಣಿ ಗೋಪಿನಾಥ ದೇವಸ್ಥಾನದಲ್ಲಿ ಶ್ರೀಕೃಷ್ಣ ಜಯಂತ್ಯುತ್ಸವ ಪ್ರಯುಕ್ತ ಮುದ್ದುಕೃಷ್ಣ, ಕಿಶೋರ ಕೃಷ್ಣ, ಬಾಲಕೃಷ್ಣ, ಶ್ರೀ ಕೃಷ್ಣ ಹಾಗೂ ರಾಧಕೃಷ್ಣ ವಿಭಾಗದಲ್ಲಿ ಸ್ಪರ್ಧೆ ಅ. 26 ರಂದು ಜರಗಿತು. ಶ್ರೀಕೃಷ್ಣವೇಶ ಸ್ಪರ್ಧೆಯಲ್ಲಿ ಒಟ್ಟು 174 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಯಮಿ ಪ್ರಮೋದ್ ರಾವ್ ಉದ್ಘಾಟಿಸಿದರು. ಚಕ್ರಪಾಣಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ಅತ್ತಾವರ ಅಧ್ಯಕ್ಷತೆ ವಹಿಸಿದ್ದರು. ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ಶಾಸಕ ವೇದವ್ಯಾಸ ಕಾಮತ್ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಎ. ನಾರಾಯಣ, ಪ್ರವೀಣ್ ಕುಮಾರ್, ಪುಟ್ಟುಬೈಲ್, ಮಂಜುನಾಥ್, ಗುರುಪ್ರಸಾದ್ ಬೋಪಣ್ಣ, ಉದ್ಯಮಿ ಕೆ. ವಸಂತದಾಸ್, ಡಾ| ದಿನೇಶ್, ನಿಲೇಶ್ ಡಿ. ಕಾಮತ್, ಚಕ್ರಪಾಣಿ ಸೇವಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣಕೋಟ್ಯಾನ್ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಚಕ್ರವಾಣಿ ನೃತ್ಯಕಲಾಕೇಂದ್ರದ ನೃತ್ಯ ಗುರುಗಳಾದ ವಿದ್ವಾನ್ ಸುರೇಶ್ ಅತ್ತಾವರ ಇವರ ಶಿಷ್ಯವೃಂದದವರಿಂದ ನೃತ್ಯಾರಾಧನ ಕಾಯಕ್ರಮ ಜರಗಿತು.ರಾತ್ರಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಹಾಪೂಜೆ, ಉಯ್ಯಾಲೋತ್ಸವ,…

Read More

ಸುರತ್ಕಲ್, ಸೆ. 3: ಕರ್ನಾಟಕ ಸೇವಾ ವೃಂದ ಸುರತ್ಕಲ್ ಇದರ ವತಿಯಿಂದ 59ನೇ ಶ್ರೀ ಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆ ಕಾರ್ಯಕ್ರಮ ಅ. 27 ರಂದು ಸುರತ್ಕಲ್ ಲೋಕಯ್ಯ ಶೆಟ್ಟಿ ಸ್ಮಾರಕರಂಗ ಮಂದಿರದಲ್ಲಿ ನಡೆಯಿತು. ಕ್ಯಾ| ಬ್ರಿಜೇಶ್ ಚೌಟ ಅವರು  ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದ ಸೇವಾ ವೃಂದದ ಅಧ್ಯಕ್ಷ ಎಂ. ಸುರೇಶ್ಚಂದ್ರ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಅದಾನಿ ಸಂಸ್ಥೆಯ ಇಡಿ ಕಿಶೋರ್ ಆಳ್ವ, ಬಿಎಎಸ್‌ಎಫ್ನ ಹಿರಿಯ ಮ್ಯಾನೇಜರ್ ಸಂತೋಷ್ ಪೈ, ಎಂಆರ್ ಪಿಎಲ್ನ ಅಧಿಕಾರಿ ಕಿರಣ್, ವೇ। ಮೂ. ರಂಗ ಐತಾಳ್  ಕಾರ್ಯಕ್ರಮಕ್ಕೆ  ಶುಭ ಹಾರೈಸಿದರು. ಈ ಸಂದರ್ಭ ದಲ್ಲಿ ಎಸೆಸೆಲ್ಸಿ, ಪಿಯುಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಮ್ಮಾನ, ಕಂಬಳದಲ್ಲಿ ಸಾಧನೆಗೈದ ಯೋಗೀಶ್ ಕರಿಯ ಪೂಜಾರಿ ಅವರಿಗೆ ಗೌರವಾರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ  ಸೇವಾ ವೃಂದವು ಕೈಗೊಂಡ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಡಿ.ಕೆ. ಶೆಟ್ಟಿ ನೋಟರಿ, ನ್ಯಾಯವಾದಿ ಆರತಿ ಸುರತ್ಕಲ್, ಉದ್ಯಮಿ…

Read More

ನಿಂತಿಕಲ್ಲು, ಸೆ.. 2 : ನಿಂತಿಕಲ್ಲುವಿನಲ್ಲಿ ನಮ್ಮ ಶಾಖೆಯ ಉದ್ಘಾಟನೆ ಆಗಿರುವುದು ನನಗೆ ಸಂತಸ ತಂದಿದೆ. ಪಾರದರ್ಶಕ ಆಡಳಿತ ವ್ಯವಸ್ಥೆ ಹಾಗೂ ಪ್ರಾಮಾಣಿಕ ಪ್ರಯತ್ನದಿಂದ ಸಂಸ್ಥೆಯು ಯಶಸ್ಸಿಯಾಗಿ ಬೆಳೆಯಲು ಸಾಧ್ಯ. ಗ್ರಾಹಕರು ಸಹಕಾರಿಯ ಜೀವಾಳ, ಮಾನವೀಯ ಮೌಲ್ಯ ಬಹಳಷ್ಟು ಶ್ರೇಷ್ಟವಾದುದು. ಸೇವೆ, ಸಹಕಾರ ಸಂಸ್ಥೆಯ ಮೂಲ ಉದ್ದೇಶವಾಗಿಸಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಅವರು ಆ.30ರಂದು ನಿಂತಿಕಲ್ಲಿನ ಸಾಧನಾ ಸಹಾಕಾರ ಸೌಧದಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 21ನೇ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ನಿರ್ದೇಶಕರಾದ ಭಾರತಿ ಜಿ. ಭಟ್ ರವರು ಮಾತನಾಡಿ ಗ್ರಾಮೀಣ ಜನರ ಸೇವೆಗಾಗಿ ಒಡಿಯೂರು ವಿವಿಧೋ ದೇಶ ಸಹಕಾರಿ ಸಂಸ್ಥೆಯು ಹುಟ್ಟಿಕೊಂಡಿದೆ. ಮಾನವೀಯ ಮೌಲ್ಯ ತುಂಬಿದ ಸಂಸ್ಥೆ ಇದಾಗಿದೆ ಎಂದು ಅವರು ಹೇಳಿದರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷರಾದ ಸಹಕಾರ ರತ್ನ ಎ. ಸುರೇಶ್…

Read More

ಮಂಗಳೂರು,ಸೆ.1 : ಶೆಫ್ ಟಾಕ್ ಮಂಗಳೂರು ಕಬ್ಬಡಿ ಪ್ರೀಮಿಯರ್ ಲೀಗ್ ಸೀಸನ್ – 2  ಇದರ ಕಬಡ್ಡಿ ಪಂದ್ಯಾಟ ಹಾಗೂ ಫುಡ್ ಫೆಸ್ಟಿವಲ್ ಮಂಗಳೂರಿನ  ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಿತು. ಆಗಸ್ಟ್ 30ರಂದು ಆಹಾರೋತ್ಸವನ್ನು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಉದ್ಘಾಟಿಸಿದರು. ಆಗಸ್ಟ್ 31ರಂದು ಕಬಡ್ಡಿ ಪಂದ್ಯಾಟದ ಉದ್ಘಾಟನೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ. ಶ್ರೀ ವಿಶ್ವಾಸ್ ದಾಸ್. ಚಿಲಿಂಬಿ, ಲಯನ್ ಅನಿಲ್ ದಾಸ್ ಮಂಗಳೂರು, ಡಾಕ್ಟರ್ ಅನಂತ ಪ್ರಭು, ನಗರ ಪಾಲಿಕೆ ಸದಸ್ಯ ಕಿರಣ್ ಕುಮಾರ್, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಶಾನವಾಜ್, ಲಾಂಚು ಉಳ್ಳಾಲ್, ದೀಪಕ್ ಪಿಲಾರ್, ಮುಂತಾದ ಗಣ್ಯರು ಭಾಗವಹಿಸಿದ್ದರು. ವಿ.ಆರ್ ಯುನೈಟೆಡ್ ಅಧ್ಯಕ್ಷರಾದ ರಜಾಕ್ ಮಂಗ್ಳೂರ್, ಸುದೇಶ್ ಭಂಡಾರಿ, ಸುಕೇಶ್ ಭಂಡಾರಿ, ಕರುಣಾಕರ, ಮತ್ತು ಕ್ರೀಡಾ ಸಂಘಟಕರು ಉಪಸ್ಥಿತರಿದ್ದರು.

Read More

ಬೆಂಗಳೂರು, ಆ. 31 : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ ಆಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನ  ನ್ಯಾಯಾಂಗ ಅವಧಿ ಆಗಸ್ಟ್ 28ಕ್ಕೆ ಅಂತ್ಯಗೊಂಡಿದೆ. ಹೀಗಾಗಿ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿದೆ. ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 9ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ. ನ್ಯಾಯಾಧೀಶರು ಆರಂಭದಲ್ಲಿ ಎಲ್ಲರ ಹಾಜರಾತಿ ಪಡೆದರು. ಆ ಬಳಿಕ ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

Read More

ಮಂಗಳೂರು, ಆ. 31: ನಗರದ ಪಂಪ್‌ವೆಲ್‌ನಲ್ಲಿರುವ ಇಂಡಿಯಾನ ಆಸ್ಪತ್ರೆ ಮತ್ತು ಹೃದಯ ಚಿಕಿತ್ಸಾ ಕೇಂದ್ರದಲ್ಲಿ ‘ಇಂಡಿಯಾನ ಕ್ಯಾನ್ಸರ್ ಸೆಂಟರ್’ ಆ.30 ಶುಕ್ರವಾರ ಉದ್ಘಾಟನೆಗೊಂಡಿತು. ಇಂಡಿಯಾನ ಕ್ಯಾನ್ಸರ್ ಸೆಂಟರ್ ಇದರ ಉದ್ಘಾಟನೆಯನ್ನು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ನೆರವೇರಿಸಿದರು. ನಂತರ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ತಂತ್ರಜ್ಞಾನ ಬೆಳೆಯುತ್ತಿರುವಂತೆಯೇ ವೈದ್ಯಕೀಯ ಕ್ಷೇತ್ರದಲ್ಲೂ ಕೂಡ ಹೊಸ ಸಂಶೋಧನೆಗಳು ನಡೆಯುತ್ತಿವೆ. ಆಧುನಿಕ ಕಾಲದಲ್ಲಿ ಜನರು ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಬಯಸುತ್ತಾರೆ. ರಾಜ್ಯದ ಸರಕಾರಿ ಜಿಲ್ಲಾಸ್ಪತ್ರೆಗಳಲ್ಲಿ ‘ಕ್ಯಾನ್ಸರ್ ಡೇಕೇರ್ ಕಿಮೋ ಸೆಂಟರ್ ‘ಗಳನ್ನು ಮುಂದಿನ ತಿಂಗಳಿನಿಂದ ಆರಂಭಿಸಲಾಗುವುದು.ಜಿಲ್ಲೆ ಹಾಗೂ ಹೊರಗಿನವರಿಗೆ ಗುಣಮಟ್ಟದ ಚಿಕಿತ್ಸೆ ಇಂಡಿಯಾನದ ಮೂಲಕ ಲಭಿಸುವಂತಾಗಲಿ ಎಂದರು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ| ಯೂಸುಫ್ ಕುಂಬ್ಳೆ ಮಾತನಾಡಿ, ಇಂಡಿಯಾನ ಆಸ್ಪತ್ರೆಯಲ್ಲಿ ಸುಧಾರಿತ ಕ್ಯಾನ್ಸರ್ ಚಿಕಿತ್ಸೆಯ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಿದೆ. ಉತ್ತಮ, ಜನರಿಗೆ ಕೈಗೆಟುಕುವ ಕ್ಯಾನ್ಸರ್ ಆರೈಕೆಯನ್ನು ನೀಡುವ ಮೂಲಕ, ಇಂಡಿಯಾನ ಕ್ಯಾನ್ಸರ್ ಸೆಂಟರ್ ಈ ಪ್ರದೇಶದಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿನ…

Read More

ಕೋಟೆಕಾರು,ಆ. 30 : ಉಳ್ಳಾಲ ಕೋಟೆಕಾರು ಪಟ್ಟಣ ಪಂಚಾಯತ್ನ ಅಧ್ಯಕ್ಷರಾಗಿ ಬಿಜೆಪಿಯ ದಿವ್ಯ ಸತೀಶ್ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಪ್ರವೀಣ್ ಬಗಂಬಿಲ ಆಯ್ಕೆಯಾಗಿದ್ದಾರೆ. ಕೋಟೆಕಾರು ಪಟ್ಟಣ ಪಂಚಾಯತ್ನ ಅಧ್ಯಕ್ಷಗಾದಿಗೆ ಸಾಮಾನ್ಯ, ಉಪಾಧ್ಯಕ್ಷಗಾದಿಗೆ ಹಿಂದುಳಿದ ವರ್ಗ(ಎ) ಗೆ ಮೀಸಲಿರಿಸಲಾಗಿತ್ತು.ಕೋಟೆಕಾರು ಪಟ್ಟಣ ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಮದ್ಯಾಹ್ನ ಚುನಾವಣೆ ಪ್ರಕ್ರಿಯೆ ನಡೆಯಿತು. ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿಯ ದಿವ್ಯ ಸತೀಶ್ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಪ್ರವೀಣ್ ಬಗಂಬಿಲ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ಡಿ.ಎ ಅವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

Read More

ಉಳ್ಳಾಲ,ಆ.29  : ಉಳ್ಳಾಲ ನಗರಸಭೆಯ ಅಧ್ಯಕ್ಷೆಯಾಗಿ ಕಾಂಗ್ರೆಸ್ಸಿನ ಶಶಿಕಲಾ, ಉಪಾಧ್ಯಕ್ಷರಾಗಿ ಸಪ್ನ ಹರೀಶ್ ಅವರು ಆಯ್ಕೆಯಾಗಿದ್ದಾರೆ. ಉಳ್ಳಾಲ ನಗರ ಸಭೆಯ 2ನೇ ಆಡಳಿತಾವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಗರಸಭೆಯ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು.ಚುನಾವಣೆಯಲ್ಲಿಅಧ್ಯಕ್ಷರಾಗಿ ಕಾಂಗ್ರೆಸ್ ನ ಶಶಿಕಲಾ, ಉಪಾಧ್ಯಕ್ಷರಾಗಿ ಸಪ್ನಾ ಹರೀಶ್ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ(ಎ)ದ ಮಹಿಳೆಗೆ ಮೀಸಲಿರಿಸಲಾಗಿತ್ತು. ಸಹಾಯಕ ಆಯುಕ್ತ ಹರ್ಷವರ್ಧನ್ ಚುನಾವಣೆ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

Read More

ಮಂಗಳೂರು, ಆಗಸ್ಟ್ 29: ಫಿನಿಕ್ಸ್ ಫಿಲ್ಮ್ ಲಾಂಛನದಡಿಯಲ್ಲಿ ನಿರ್ಮಾಣಗೊಂಡಿರುವ ದಿ ಜರ್ನಿ ಆಫ್ ಬೆಳ್ಳಿ ಕನ್ನಡ ಚಿತ್ರವು  ಸೆ.13ರಂದು ತೆರೆ ಕಾಣಲಿದೆ ಎಂದು ಮಂಗಳವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿ ಚಲನಚಿತ್ರದ ನಿರ್ಮಾಪಕ ಮಹೇಂದ್ರ ಕುಮಾರ್ ಅವರು ಹೇಳಿದರು. ಸೈನಿಕ ಮತ್ತು ಮಗಳ ಭಾಂದವ್ಯದ‌ ಮೇಲಿನ ಕಥೆ ಈ ಚಿತ್ರದಲ್ಲಿದೆ . ಪುಟ್ಟ ಬಾಲಕಿ ಬೆಳ್ಳಿಯ ಪಾತ್ರದಲ್ಲಿ ಎಸ್.ಪಾಟೀಲ್ ಅಭಿನಯಿಸಿದ್ದು, ಗೌರಿ ಶ್ರೀನಿವಾಸ್ ನಿರ್ದೇಶನ ಮಾಡಿದ್ದಾರೆ. ಅಡಿಶನ್‌ಗೆ ಬಂದಿದ್ದ 35 ಬಾಲ ಪ್ರತಿಭೆಗಳಲ್ಲಿ ಸಮನ್ವಿ ಯನ್ನು ಆಯ್ಕೆ ಮಾಡಲಾಗಿತ್ತು. ಬೆಳ್ಳಿ  ಚಿತ್ರದಲ್ಲಿ ಒಂದು ಹಾಡು ಇದೆ ಎಂದವರು ಹೇಳಿದರು. ಉತ್ತಮ ನಟನೆಯ ಮೂಲಕ ಚಿತ್ರಕ್ಕೆ ಸಮನ್ವಿ ಬಾಲ ನಟಿಯಾಗಿ ಜೀವ ತುಂಬಿದ್ದಾರೆ ಎಂದು ನಿರ್ದೇಶಕಿ ಗೌರಿ ಶ್ರೀನಿವಾಸ್ ಅವರು  ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ  ಅಮರ್‌ನಾಥ್ ರೈ, ರಾಜ್ ಗೋಪಾಲ್ ರೈ, ಶಂಕರ್, ಕಿರಣ್ ಕುಮಾರ್, ಮನೋಜ್ ಕುಮಾರ್ ಉಪಸ್ಥಿತರಿದ್ದರು.

Read More