Subscribe to Updates
Get the latest creative news from FooBar about art, design and business.
Author: admin
ಮಂಗಳೂರು ,ಆ. 28 : ಸ್ಟಾರ್ ಕ್ರಿಯೆಶನ್ಸ್ ಬ್ಯಾನರಿನಡಿಯಲ್ಲಿ ತಯಾರಾದ ರಾನಿ ಕನ್ನಡ ಚಿತ್ರ ಸೆಪ್ಟೆಂಬರ್ 12 ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಗುರುತೇಜ್ ಶೆಟ್ಟಿ ಅವರು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. 92 ದಿನ ಬೆಂಗಳೂರು ಮತ್ತು ಮೈಸೂರುನ ಸುತ್ತ ಮುತ್ತ ಚಿತ್ರೀಕರಣ ಮಾಡಲಾಗಿದೆ. ಚಿತ್ರದ ಟ್ರೈಲರ್ ಸೆಪ್ಟಂಬರ್ 1 ಕ್ಕೆ ಬಿಡುಗಡೆಯಾಗಲಿದೆ. ಚಿತ್ರವು ಇದೇ ಆಗಸ್ಟ್ 30 ಕ್ಕೆ ಬಿಡುಗಡೆ ಯಾಗಬೇಕಿತ್ತು ಕಾರಣಾಂತರದಿಂದ 2 ವಾರ ಮುಂದಕ್ಕೆ ಹೋಗಿದೆ. ಚಿತ್ರಕ್ಕೆ U/A ಸರ್ಟಿಫಿಕೇಟ ಸಿಕ್ಕಿದೆ ಎಂದು ಅವರು ಹೇಳಿದರು. ರಾನಿ ಚಿತ್ರದ ಕಥೆ-ಚಿತ್ರಕಥ-ಸಂಭಾಷಣೆ-ನಿರ್ದೇಶನ-ಗುರುತೇಜ್ ಶೆಟ್ಟಿ. ನಿರ್ಮಾಪಕರಾಗಿ ಚಂದ್ರಕಾಂತ ಪೂಜಾರಿ,ಉಮೇಶ್ ಹೆಗ್ಡೆ, ನಾಯಕನಾಗಿ ಕಿರಣ್ ರಾಜ್. ನಾಯಕಿರಾಗಿ ಅಪೂರ್ವ,ರಾಧ್ಯ,ಸಮೀಕ್ಷ. ಸಹ ಕಲಾವಿದರು-ರವಿ ಶಂಕರ,ಗಿರೀಶ್ ಹೆಗ್ಡೆ,ಮೈಕೊ ನಾಗರಾಜ್,ಉಗ್ರಂ ಮಂಜು,ಉಗ್ರಂ ರವಿ,ಯಶ್ ಶೆಟ್ಟಿ,ಸುಜಯ್ ಶಾಸ್ತ್ರಿ,ಬಿ ಸುರೇಶ್,ಶ್ರೀಧರ್,ಲಕ್ಷ್ಮೀಸುಬ್ಬಯ್ಯ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ .
ಸುರತ್ಕಲ್, ಆಗಸ್ಟ್ 28 : ಮಂಗಳೂರು ಉತ್ತರ ವಿಧನಾ ಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಿಸಾನ್ ಘಟಕದ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ “ಸೋಣ ಸೌಹಾರ್ದ ಕೆಸರ್ ದ ಪರ್ಬ”ವು ಭಾನುವಾರ ಮುಚ್ಚೂರು ಕೊಡಿಪಾಡಿಯ ಬ್ರಹ್ಮ ಬೈದರ್ಕಳ ಗರೋಡಿ ಮುಂಭಾಗದ ಗದ್ದೆಯಲ್ಲಿ ಆ.25, ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೊಬೈಲ್ ಸಾಮಾಜಿಕ ಜಾಲತಾಣಗಳಲ್ಲೇ ತಲ್ಲೀನರಾಗಿರುವ ಯುವಜನರಲ್ಲಿ ತುಳುನಾಡಿದ ಸಂಸ್ಕೃತಿಯನ್ನು ಪರಿಚಯಿಸುವ ಜೊತೆಗೆ ಮುಂದಿನ ಪೀಳಿಗೆಗೂ ಉಳಿಸುವ ಕೆಲಸ ಇಂದಿನ ಸೋಣ ಸೌಹಾರ್ದ ಕೆಸರ್ ದ ಪರ್ಬ ದಿಂದ ಆಗಿದೆ. ಈ ಸೌಹಾರ್ದ ಕಾರ್ಯಕ್ರಮವನ್ನು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಮುಂದಿನ ದಿನಗಳಲ್ಲೂ ಆಯೋಜಿಸಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದ ಬ್ರಹ್ಮ ಬೈದರ್ಕಳ ಗರೋಡಿಯ ಜಗನ್ನಾಥ ಅತ್ತಾರ್, ಡಾ. ಗುತ್ತಿನಾರ್ ರವಿರಾಜ್ ಶೆಟ್ಟಿ ತುಳುನಾಡಿನ ಸಂಸ್ಕೃತಿಯ ಕುರಿತು ಮಾತನಾಡಿದರು.…
ಮಂಗಳೂರು, ಆಗಸ್ಟ್ 28: ಕದ್ರಿಯ ಶ್ರೀಕ್ಷೇತ್ರ ಮಂಜುನಾಥ ದೇವಸ್ಥಾನದಲ್ಲಿ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಶ್ರೀಕೃಷ್ಣ ವೇಷ ಸ್ಪರ್ಧೆಯು ಆಗಸ್ಟ್ 26, ಸೋಮವಾರದಂದು ನಡೆಯಿತು. ಮಂಗಳೂರು ರಾಮಕೃಷ್ಣ ಮಠದ ಶ್ರೀ ಜಿತಕಾಮಾನಂದಜಿ ಮಹಾರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು . ವೇದಿಕೆಯಲ್ಲಿ ಉಪಸ್ಥಿತರಿದ್ದ ಶ್ರೀ ಕ್ಷೇತ್ರ ಕಟೀಲಿನ ಲಕ್ಷ್ಮಿನಾರಾಯಣ ಆಸ್ರಣ್ಣ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. 20ಕ್ಕೂ ಹೆಚ್ಚು ಹಸುಗೂಸುಗಳನ್ನು ತೊಟ್ಟಿಲಲ್ಲಿ ತೂಗುವ ಮೂಲಕ ಈ ಸ್ಪರ್ಧೆಗೆ ಚಾಲನೆ ನೀಡಲಾಯಿತು. ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಧರ್ಮದರ್ಶಿ ಹರಿಕೃಷ್ಣ ಪುನರೂರು, ಶರವು ರಾಘವೇಂದ್ರ ಶಾಸ್ತ್ರಿ, ಎ.ಜೆ.ಶೆಟ್ಟಿ, ನಿತಿನ್ ಕುಮಾರ್, ರತ್ನಾಕರ ಜೈನ್, ಜಿ.ಕೆ.ಭಟ್ ಸೇರಾಜೆ, ಶಕೀಲಾ ಕಾವ, ಭುವನಾಭಿರಾಮ ಉಡುಪ, ವಿಜಯಲಕ್ಷ್ಮಿ ಶೆಟ್ಟಿ, ಮಂಜುಳಾ ಶೆಟ್ಟಿ, ಜ್ಯೂಲಿಯೆಟ್, ಜಯಮ್ಮ, ಮತ್ತಿತರರು ಉಪಸ್ಥಿತರಿದ್ದರು.ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಸ್ವಾಗತಿಸಿದರು. ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನಂತರ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಿತು.…
ಕೋಟ, ಆ.27: ಸಾಲಿಗ್ರಾಮ ಪಟ್ಟಣ ಪಂಚಾಯತ್ ಎರಡನೇ ಅವಧಿಯ ಅಧ್ಯಕ್ಷರಾಗಿ ಮಾರಿಗುಡಿ ವಾರ್ಡ್ ಬಿಜೆಪಿಯ ಸದಸ್ಯೆ ಸುಕನ್ಯಾ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಕಾರ್ಕಡ ತೆಂಕುಹೋಳಿ ವಾರ್ಡ್ನ ಬಿಜೆಪಿಯ ಗಿರಿಜಾ ಪೂಜಾರಿ ಆಯ್ಕೆಯಾಗಿದ್ದಾರೆ. ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ನ 10 ನೇ ಅವಧಿಗೆ ಅಧ್ಯಕ್ಷ ಸ್ಥಾನವನ್ನು ಸಾಮಾನ್ಯ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಹಿಂದುಳಿದ ವರ್ಗ -ಅ (ಮಹಿಳೆ)ಗೆ ಮೀಸಲಿರಿಸಿ ಆಗಸ್ಟ್ 27ರಂದು ಚುನಾವಣೆ ನಿಗದಿಪಡಿಸಲಾಗಿತ್ತು. ಅದರಂತೆ ಮಂಗಳವಾರ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಚುನಾವಣೆ ನಡೆಯಿತು. ಒಟ್ಟು ಸಾಲಿಗ್ರಾಮ ಪಟ್ಟಣ ಪಂಚಾಯತ್ ನಲ್ಲಿ 16 ಸದಸ್ಯರಿದ್ದು, ಆ ಪೈಕಿ ಬಿಜೆಪಿ 10, ಕಾಂಗ್ರೆಸ್ 5 ಸದಸ್ಯರು ಮತ್ತು 1 ಪಕ್ಷೇತರ ಸದಸ್ಯರನ್ನು ಹೊಂದಿದೆ. ಚುನಾವಣೆಯಲ್ಲಿ ಶಾಸಕರಿಗೆ ಮತದಾನದ ಅವಕಾಶವಿರುವುದರಿಂದ ಇಂದು ನಡೆದ ಚುನಾವಣೆಯಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿಯವರೂ ಮತ ಚಲಾಯಿಸಿದರು. ಆದರೆ ಪಕ್ಷೇತರ ಸದಸ್ಯೆ ರತ್ನಾ ನಾಗರಾಜ್ ಗಾಣಿಗ ಮತದಾನ ನಿರಾಕರಿಸಿದರು. ಚುನಾವಣೆಯ ಬಳಿಕ…
ಕುಂದಾಪುರ, ಆ.26 : ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಕಟ್ಟಿದ್ದ ದನ ಹಾಗೂ ಅದನ್ನು ಬಿಡಿಸಲು ಹೋಗಿದ್ದ ಮಹಿಳೆ ಮೃತಪಟ್ಟಿದ್ದ ಘಟನೆ ಕುಂದಾಪುರ ತಾಲೂಕಿನ ಕೆಂಚನೂರು ನೀರಿನ ಟ್ಯಾಂಕಿ ಬಳಿ ರವಿವಾರ ನಡೆದಿದೆ. ಕೆಂಚನೂರು ಗ್ರಾಮದ ಮೈಲಾರಿ ನಿವಾಸಿ ಅಣ್ಣಪ್ಪಯ್ಯ ಆಚಾರಿ ಎಂಬುವರ ಪತ್ನಿ ಸುಜಾತ ಆಚಾರ್ತಿ (53) ಮೃತರು. ರವಿವಾರ ಸುಜಾತಾ ಆಚಾರ್ತಿ ತಮ್ಮ ಮನೆಯ ಹಾಲು ಕರೆಯುವ ಹಸುವನ್ನು ಮನೆ ಸಮೀಪದ ರಸ್ತೆ ಬದಿಯಲ್ಲಿ ಮೇಯಲೆಂದು ಕಟ್ಟಿದ್ದು, ವಿಪರೀತ ಗಾಳಿ ಮಳೆ ಬೀಸುತ್ತಿರುವ ಹಿನ್ನೆಲೆಯಲ್ಲಿ ಅಂದು ಸಂಜೆ ದನವನ್ನು ಬಿಡಿಸಿ ಕೊಟ್ಟಿಗೆಗೆ ತರಲೆಂದು ಹೋಗಿದ್ದರು. ಈ ವೇಳೆ ಸುಜಾತಾ ಆಚಾರ್ತಿ ಅವರ ಮೇಲೆ ಮರ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಕುಂದಾಪುರದ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ಅಲ್ಲಿ ಸುಜಾತ ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಆ. 25: ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಬಗ್ಗೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿ ಸುತ್ತಿದ್ದೇನೆ. ತುಳು ಭಾಷೆಗೆ ಅಧಿಕೃತ ಸ್ಥಾನಮಾ ನ ನೀಡುವ ಬಗ್ಗೆ ಶ್ರಮಿಸುವುದಾಗಿ ಸ್ಪೀಕರ್ ಯು.ಟಿ. ಖಾದರ್ ತುಳುನಾಡ ಜಾನಪದ ಉಚ್ಚಯ 2024 ಕಾರ್ಯಕ್ರಮದಲ್ಲಿ ಹೇಳಿದರು. ಕುದ್ದುಲ ರಂಗರಾವ್ ಪುರಭವನದಲ್ಲಿ ಅಖಿಲ ಭಾರತ ತುಳು ಒಕ್ಕೂಟ ಮಂಗಳೂರು ವತಿಯಿಂದ ಶನಿವಾರ ಜರಗಿದ ತುಳುನಾಡ ‘ಜಾನಪದ ಉಚ್ಚಯ 2024’ರ ಸಮಾರೋಪದಲ್ಲಿ ಹಿರಿಯ ನಟ ನಿರ್ಮಾಪಕ ತೋನ್ಸೆ ವಿಜಯ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಮಾತನಾಡಿ, ವಿಧಾನಸಭೆಯಲ್ಲಿ ತುಳು ಭಾಷೆಯ ಬಗ್ಗೆ ಚರ್ಚೆ ನಡೆದಿದೆ. ಲೋಕ ಸಭೆಯಲ್ಲೂ ತುಳು ಭಾಷೆಯ ಬಗ್ಗೆ ಚರ್ಚೆ ನಡೆಯಬೇಕು. ರಾಜಕೀಯ ಮರೆತು ಎಲ್ಲರೂ ಒಂದಾಗಿ ಭಾಷೆಯ ಸ್ಥಾನಮಾನಕ್ಕೆ ಶ್ರಮಿಸಬೇಕು ಎಂದರು. ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ.ಭಂಡಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ…
ಮಂಗಳೂರು, ಆ. 24 : ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದ ಹರ್ಷಿತ್ ಸೋಮೇಶ್ವರ ನಿರ್ದೆಶನದ ಅನರ್ಕಲಿ ತುಳು ಸಿನೆಮಾ ಶುಕ್ರವಾರ ಬಿಡುಗಡೆಗೊಂಡಿದೆ. ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಚಿತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ನಂತರ ಮಾತಾನಾಡಿ ಒಳ್ಳೆಯ ಸಿನೆಮಾ ಹಾಗೂ ಒಳ್ಳೆಯ ಪ್ರಯತ್ನವನ್ನು ತುಳುನಾಡಿನ ಪ್ರೇಕ್ಷಕರು ಖಂಡಿತ ಬೆಂಬಲಿಸುತ್ತಾರೆ. ಅನರ್ಕಲಿ ಸಿನೆಮಾ ನೋಡಿ ಪ್ರೋತ್ಸಾಹಿಸಿ ಎಂದರು. ಚಿತ್ರದ ನಟ ಅರವಿಂದ್ ಬೋಳಾರ್ ಮಾತನಾಡಿ , ಪ್ರೇಕ್ಷಕರು ಥಿಯೇಟರ್ಗೆ ಬಂದು ಸಿನೆಮಾಗಳನ್ನು ನೋಡಿದಲ್ಲಿ ನಿರ್ಮಾಪಕ ಹಾಕಿದ ಬಂಡವಾಳ ಬಂದುಬಿಡುತ್ತದೆ. ಇದರಿಂದ ನಿರ್ಮಾಪಕ ಲಾಸ್ ಆಗಲ್ಲ ಎಂದರು. ಕಾರ್ಯಕ್ರಮದಲ್ಲಿ ಕಿಶೋರ್ ಡಿ.ಶೆಟ್ಟಿ, ಪ್ರಕಾಶ್ ಪಾಂಡೇಶ್ವರ್, ನವನೀತ್ ಶೆಟ್ಟಿ ಆರ್. ಧನರಾಜ್, ಭೋಜರಾಜ ವಾಮಂಜೂರು, ಚಂದ್ರಶೇಖರ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಲಂಚುಲಾಲ್, ವಿಜಯ್ ಶೋಭರಾಜ್ ಪಾವೂರು, ಮಧುರಾ ಆರ್.ಜೆ., ಪುರುಷೋತ್ತಮ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಭಂಡಾರಿ…
ಉಡುಪಿ, ಆ.23 : ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿಯ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ ಚಂದ್ರ ಈ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಈ ಎರಡು ಸ್ಥಾನಗಳಿಗೆ ಕ್ರಮವಾಗಿ ಗುಂಡಿಬೈಲು ವಾರ್ಡ್ ನ ಪ್ರಭಾಕರ ಪೂಜಾರಿ ಹಾಗೂ ಒಳಕಾಡು ವಾರ್ಡ್ ನ ರಜನಿ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದರು. ಯಾವುದೇ ಪ್ರತಿಸ್ಪರ್ಧಿ ಇಲ್ಲದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಚುನಾವಣಾಧಿಕಾರಿ ಘೋಷಿಸಿದರು. ಈ ಸಂದರ್ಭದಲ್ಲಿ ಡಾ. ರಾಯಪ್ಪ ಹಾಜರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು.
ಕಾಸರಗೋಡು, ಆ.22 : ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ಚೆರ್ಕಳ ಕೆ .ಕೆ ಪುರದಲ್ಲಿ ನಡೆದಿದೆ. ಕುಂಬಳೆ ಮೊಗ್ರಾಲ್ ಖುತುಬಿ ನಗರದ ಅಹಮ್ಮದ್ ಕಬೀರ್ ( 30) ಮೃತರು. ಸಂಬಂಧಿಕರೊಬ್ಬರ ವಿವಾಹ ಆಮಂತ್ರಣಕ್ಕೆ ತೆರಳಿ ಮರಳುತ್ತಿದ್ದಾಗ ಅಪಘಾತ ನಡೆದಿದ್ದು,ಗಂಭೀರ ಗಾಯಗೊಂಡ ಕಬೀರ್ ರನ್ನು ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ . ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಟ್ವಾಳ , ಆ.21 : ಯಕ್ಷಗಾನ ಸಂಘಟಕ ಕಲಾಪೋಷಕ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ( 65) ಅವರು ಅ. 21ರಂದು ಹೃದಯಾಘಾತದಿಂದ ನಿಧನರಾದರು. ಕುರಿಯ ಹವ್ಯಕ ಘಟಕದ ಗುರಿಕ್ಕಾರರಾಗಿ, ಸ್ವರ್ಣ ಭಿಕ್ಷಾ ಉತ್ಸವದ ಗೌರವಾಧ್ಯಕ್ಷರಾಗಿ,ಕೋಳ್ಯೂರ ಹವ್ಯಕ ವಲಯ ಅಧ್ಯಕ್ಷರಾಗಿ ಹತ್ತು ಹಲವು ಜವಾಬ್ದಾರಿಯನ್ನು ಹೊತ್ತು ಯಶಸ್ವಿಯಾಗಿ ನಿರ್ವಹಿಸಿದ್ದರು.












