Subscribe to Updates
Get the latest creative news from FooBar about art, design and business.
Author: admin
ಮಂಗಳೂರು,ಆ.15 : ಟೈಲ್ಸ್ ಮತ್ತು ಸ್ಯಾನಿಟರಿ ಉತ್ಪನ್ನಗಳ ಯುವರ್ ಪ್ರೆಸ್ಟೀಜ್ ಶೋ ರೂಮ್ ನ ಉದ್ಘಾಟನಾ ಸಮಾರಂಭವು ಆಗಸ್ಟ್ 16, ಶುಕ್ರವಾರ ಜೆಪ್ಪಿನಮೊಗರುವಿನಲ್ಲಿ ನಡೆಯಲಿದೆ ಎಂದು ಸಂಸ್ಥಾಪಕರಾದ ಶಂಶುದ್ದೀನ್ ಅವರು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಯುವರ್ ಪ್ರೆಸ್ಟೀಜ್ ಮೊದಲ ಶೋ ರೂಮ್ ದೇರಳಕಟ್ಟೆಯಲ್ಲಿ ಪ್ರಾರಂಭವಾಯಿತು. ನಂತರ ಪಾಂಡೇಶ್ವರಕ್ಕೆ ವಿಸ್ತರಣೆಯಾಯಿತು. ತದನಂತರ ಮೂಡಬಿದ್ರಿ, ಪುತ್ತೂರಿನಲ್ಲಿ ಶೋ ರೂಮ್ ಪ್ರಾರಂಭವಾಯಿತು. ಯುವರ್ ಪ್ರೆಸ್ಟೀಜ್ ಶೋ ರೂಮ್ ನ ಸಂಸ್ಥಾಪಕರು ಶಂಶುದ್ದೀನ್, ಸಹ-ಸಂಸ್ಥಾಪಕರಾಗಿ ಬಶೀರ್. ಇತರ ಪಾಲುದಾರರು ; ಮಿಸ್ಟರ್ ಅದಿಲ್ ಮತ್ತು ಮಿಸ್ಟರ್ ಇಟ್ಬಾಲ್ (ಅಕ್ಕು ಪ್ರೆಜ್, ಮೂಡಬಿದ್ರಿ), ಮಿಸ್ಟರ್ ಸಲ್ಮಾನ್ ಮತ್ತು ಮಿಸೈಲ್ ಅಶ್ರಫ್ (ಡಿಪೋ), ಮಿಸ್ಟರ್ ಶಾಝ್ (ಪ್ರೋ ಪುಜ್, ಪುತ್ತೂರು), ಮಿಸ್ಟರ್ ರಶೀದ್ & ಮಿಸ್ಟರ್ ಫಜಲ್ ಆಗಿರುತ್ತಾರೆ ಎಂದು ಸಂಸ್ಥಾಪಕರಾದ ಶಂಶುದ್ದೀನ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಂಗಳೂರು, ಆ.15: ಉಳ್ಳಾಲ ನೂತನ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫ್ತಿ, ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಆ.17ರಂದು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ., ಉಳ್ಳಾಲ ಖಾಝಿಯಾಗಿದ್ದ ಸೈಯದ್ ಫಝಲ್ ಕೋಯಮ್ಮ ತಂಙಳ್ ಅವರ ನಿಧನದಿಂದ ತೆರವಾಗಿರುವ ಖಾಝಿ ಸ್ಥಾನಕ್ಕೆ ಎ.ಪಿ. ಉಸ್ತಾದ್ ರನ್ನು ಖಾಝಿಯಾಗಿ ಜುಲೈ 20ರಂದು ನೇಮಕ ಮಾಡಲಾಗಿತ್ತು. ಅದರಂತೆ ಖಾಝಿ ಸ್ವೀಕಾರ ಕಾರ್ಯಕ್ರಮ ಆ.17ರಂದು ಬೆಳಗ್ಗೆ 9:30ಕ್ಕೆ ದರ್ಗಾ ವಠಾರದಲ್ಲಿರುವ ಮದನಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಉಳ್ಳಾಲ ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ಅವರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿ ಮತ್ತು ಸೈಯದ್ ಮದನಿ ಅರಬಿಕ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳಿಗಾಗಿ ನೂತನ ಸುಸಜ್ಜಿತ ಹಾಸ್ಟೆಲ್ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮವೂ ಈ ಸಂದರ್ಭ ಜರುಗಲಿದೆ ಎಂದರು. ಎ.ಪಿ. ಉಸ್ತಾದ್ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸೈಯದ್ ಕೆ.ಎಸ್.ಆಟಕ್ಕೋಯ ತಂಙಳ್ ಕಾರ್ಯಕ್ರಮ ಉದ್ಘಾಟಿಸುವರು. ಇ.ಸುಲೈಮಾನ್ ಉಸ್ತಾದ್,…
ಬೆಂಗಳೂರು, ಆ.14 : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೆ ಆಗಸ್ಟ್ 28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಗುರುವಾರ ಆದೇಶ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆ ಇಂದು ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿ ನಟ ದರ್ಶನ್ ಮತ್ತು ಪ್ರಕರಣದ ಇತರೆ ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಈ ಸಂದರ್ಭ ಪೊಲೀಸರ ರಿಮ್ಯಾಂಡ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು, ಪ್ರಕರಣದ ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಸ್ತರಿಸಿ ತೀರ್ಪು ನೀಡಿದ್ದಾರೆ. ಬೆಂಗಳೂರು ಜೈಲಿನಲ್ಲಿರುವ ಆರೋಪಿಗಳು ಹಾಗೂ ತುಮಕೂರು ಜೈಲಿನಲ್ಲಿರುವ ಆರೋಪಿಗಳನ್ನು ಪೊಲೀಸರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ಪೊಲೀಸರು, ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮನವಿ ಪುರಸ್ಕರಿಸಿದ ನ್ಯಾಯಾಧೀಶರು ಪ್ರಕರಣದ ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದರು. ಕೋರ್ಟ್ ಎಲ್ಲಾ ಆರೋಪಿಗಳ…
ಬೆಂಗಳೂರು, ಆ. 14 : ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ಎಐಸಿಸಿ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಸೌಮ್ಯ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಜೊತೆಗೆ ಚಂಡೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಮಾಡಲಾಗಿದೆ. ಪುಷ್ಪಾ ಅಮರನಾಥ್ ಹಾಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದರು. ಇದೀಗ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಸೌಮ್ಯ ರೆಡ್ಡಿ ಅವರು 2018 ರಲ್ಲಿ ಜಯನಗರದಿಂದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಆದಾಗ್ಯೂ, ಅವರು ಮೇ 2023 ರಲ್ಲಿ ಕರ್ನಾಟಕದಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕೇವಲ 16 ಮತಗಳಿಂದ ಸೋತರು. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ…
ಮಂಗಳೂರು,ಆ.13 : ತುಳು ರಂಗಭೂಮಿ ನಟ ಅಶೋಕ್ ಶೆಟ್ಟಿ ಅಂಗ್ಲಮೊಗರು ಆ. 12, ಸೋಮವಾರ ನಿಧನರಾದರು. ಅವರಿಗೆ 53ವರ್ಷ ವಯಸ್ಸಾಗಿತ್ತು. ಅಂಬ್ಲಮೊಗರುವಿನ ಮನೆಯಲ್ಲಿ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ. ವೃತ್ತಿಪರ ಕಲಾವಿದರಾದ ಅಶೋಕ್ ಇವರು ವಿಜಯ ಕುಮಾರ್ ಕೊಡಿಯಾಲ್ ಬೈಲ್ ಸಾರಥ್ಯದ ಕಲಾಸಂಗಮ ನಾಟಕ ತಂಡದಲ್ಲಿ ಸುದೀರ್ಘ ಕಾಲ ಕಲಾ ಸೇವೆ ಸಲ್ಲಿಸಿದ್ದರು. ಇವರು ಒರಿಯರ್ದೊರಿ ಅಸಲ್ ತುಳು ಸಿನಿಮಾದಲ್ಲಿ ನಿರ್ವಹಿಸಿದ ತೆಂಗಿನ ಕಾಯಿ ಕೀಳುವ ನಾಥುವಿನ ಪಾತ್ರ ಜನಮನ್ನಣೆ ಗಳಿಸಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು, ಮಿತ್ರರನ್ನು ಅಗಲಿದ್ದಾರೆ.
ಉಡುಪಿ, ಆ.12 : ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಗೆ ರಾಷ್ಟ್ರೀಯ ಸಹಕಾರಿ ನೀತಿ ಆಯೋಗದ ಅಧ್ಯಕ್ಷ ಸುರೇಶ್ ಪಿ. ಪ್ರಭು ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ಅವರು ಶನಿವಾರ ವಿದ್ಯುಕ್ತ ಚಾಲನೆ ನೀಡಿದರು. ನಂತರ ಮಾತನಾಡಿ ಸುರೇಶ್ ಪಿ. ಪ್ರಭು ಅವರು ಸಹಕಾರಿ ವ್ಯವಸ್ಥೆಯಿಂದ ಭಾರತದ ಆರ್ಥಿಕತೆಯ ಉತ್ತೇಜನ ಸಾಧ್ಯ. ಇಂದಿನ ದಿನಮಾನದಲ್ಲಿ ಡಿಜಿಟಲ್ ಆರ್ಥಿಕತೆ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕ. ಈ ನಿಟ್ಟಿನಲ್ಲಿ ಸಣ್ಣ ಸಹಕಾರಿ ಸಂಘಗಳೂ ಹೊರಗುತ್ತಿಗೆ ಆಧಾರದಲ್ಲಿ ಬಳಸಲು ಸಾಧ್ಯವಾಗುವಂಥ ಸಾಮಾನ್ಯ ತಂತ್ರಜ್ಞಾನವೊಂದನ್ನು ಕೇಂದ್ರ ಸರಕಾರ ಜಾರಿಗೊಳಿಸಬೇಕಾದ ಆವಶ್ಯಕತೆ ಇದೆ ಎಂದು ಹೇಳಿದರು. ನೂತನ ಮಹಾಲಕ್ಷ್ಮಿ ಪವರ್ ಲೋನ್ ಮಂಜೂರಾತಿ ಪತ್ರಗಳನ್ನು ವಿತರಿಸಿದ ಮೀನುಗಾರಿಕಾ ಸಚಿವ ಮಾಂಕಳ ಎಸ್ ವೈದ್ಯ ಮಾತನಾಡಿ, ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಜಿಲ್ಲೆಯ ಮೀನುಗಾರರು ಬದುಕು ಕಟ್ಟಿಕೊಳ್ಳಲು ಅರ್ಥಿಕ ಸಹಾಯ ಮಾಡುತ್ತಿರುವ ಕಾರ್ಯಕ್ಕೆ ಶ್ಲಾಘನೀಯ ಎಂದು ಹೇಳಿದರು. ಡಿಜಿಟಲ್ ಬ್ಯಾಂಕಿಂಗ್ ವಿಡಿಯೋ ಅನಾವರಣವನ್ನು ಸಂಸದ ಕೋಟ ಶ್ರೀನಿವಾಸ…
ಮಂಗಳೂರು, ಆ. 11 : ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಅವರ ಶಿಷ್ಯವೃಂದದಿಂದ ನಗರದ ಉರ್ವ ಸ್ಟೋರ್ ಡಾ|| ಬಿ.ಆರ್. ಅಂಬೇಡ್ಕರ್ ಸಭಾ ಭವನದಲ್ಲಿ ಶನಿವಾರ ಹಾಗೂ ರವಿವಾರ ಯಕ್ಷ ಸಿದ್ದಿ ದಶಯಾನ ಕಾರ್ಯಕ್ರಮ ನಡೆಯಿತು. ಯಕ್ಷ ಸಿದ್ದಿ ದಶಯಾನ ಕಾರ್ಯಕ್ರಮವನ್ನು ಯಕ್ಷಗಾನ ವಿದ್ವಾಂಸ ವಾಸುದೇವ ರಂಗಾ ಭಟ್ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು , ರಕ್ಷಿತ್ ಶೆಟ್ಟಿ ಪಡ್ರೆ ಅವರು ಬೇರೆ ಬೇರೆ ಕಡೆಯ ಶಿಷ್ಯವೃಂದವನ್ನು ಒಟ್ಟುಗೂಡಿಸಿ ಸಿದ್ಧಿ ದಶಯಾನ ಕಾರ್ಯಕ್ರಮ ಆಯೋಜಿಸಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಸಿದ್ಧಿ ದಶಯಾನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಇಂದಿನ ಯುವಜನತೆಗೆ ಕರಾವಳಿಯ ಸಾಂಸ್ಕೃತಿಕ ಕಲೆಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಯಕ್ಷಗಾನ ತಂಡಗಳಿಂದ ಆಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಯಕ್ಷ ಸಾಧಕರನ್ನು ಸನ್ಮಾನಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಗಣೇಶ್ ಕುಲಾಲ್, ಕದ್ರಿ…
ಮಂಗಳೂರು, ಅ. 11: ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಶನ್ ಮಂಗಳಾದೇವಿ ವಲಯ ವತಿಯಿಂದ ಸಿಎಸ್ಐ ಕಾಂತಿ ಚರ್ಚ್ ಜಪ್ಪುವಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆ, 11 ರವಿವಾರ ಜರಗಿತು. ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿಅಧ್ಯಾಪಕರು ಮತ್ತು ನಿರೂಪಕರು ಮಂಜುಳಾ ಶೆಟ್ಟಿ ಅವರು ಆಟಿ ತಿಂಗಳ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು. ಸಮಾರಂಭದಲ್ಲಿ ತಣ್ಣೀರುಬಾವಿ, ನಂದಿಗುಡ್ಡೆ ರುದ್ರಭೂಮಿ ಸೇವಕರು ಆನಂದ್ ಗಿರಿ ಅವರನ್ನು ಸನ್ಮಾನಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಟೈಲರ್ ಅಸೋಸಿಯೇಶನ್ ಮಂಗಳಾದೇವಿ ವಲಯ ಉಪಾಧ್ಯಕ್ತರು ಅನಂತರಾಮ್ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಸಿಎಸ್ಐ ಕಾಂತಿ ಚರ್ಚ್ನ ವಂ| ಗ್ಯಾಬ್ರಿಯಲ್ ರೋನಿತ್ ಸಾಮುವೇಲ್ ,ಅಸೋಸಿಯೇಶನ್ ರಾಜ್ಯಾಧ್ಯಕ್ಷ ನಾರಾಯಣ ಬಿ.ಎ., ಟೈಲರ್ ಅಸೋಸಿಯೇಶನ್ ಮಂಗಳೂರು ಇದರ ಕ್ಷೇತ್ರ ಸಮಿತಿ ಅಧ್ಯಕ್ಷ ಹರೀಶ್ ರೈ , ವಿದ್ಯಾ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ಹೊಸದಿಲ್ಲಿ : ಕೇಂದ್ರ ಸರಕಾರವು ನೂತನ ಸಂಪುಟ ಕಾರ್ಯದರ್ಶಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ ಟಿ.ವಿ.ಸೋಮನಾಥನ್ ಅವರನ್ನು ಶನಿವಾರ ನೇಮಕಗೊಳಿಸಿದೆ. ಅವರು ಪ್ರಸ್ತುತ ಹಣಕಾಸು ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಸಂಪುಟ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸೋಮನಾಥನ್ ಅವರು ಆಗಸ್ಟ್ 30 ರಂದು ಸಂಪುಟ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಸೋಮನಾಥನ್ ಅವರನ್ನು ಎರಡು ವರ್ಷಗಳ ಅವಧಿಗೆ ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ವಿಟ್ಲ ಆ. 9 : ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿ ವತಿಯಿಂದ ಒಡಿಯೂರು ಶ್ರೀಗಳ ಜನ್ಮದಿನೋತ್ಸವ – ಗ್ರಾಮೋತ್ಸವ ಕಾರ್ಯಕ್ರಮವು ಗುರುವಾರ ಜರಗಿತು. ಈ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀಗಳು ಆಶೀರ್ವಚನ ನೀಡಿ, ಆಧ್ಯಾತ್ಮದ ಜತೆ ಲೋಕಹಿತದ ಕಾರ್ಯ ಮಾಡಿದಾಗ ಆನಂದ ಲಭ್ಯವಾಗುತ್ತದೆ. ಗುರುಸೇವೆಯೆಂದರೆ ತತ್ವದ ಆರಾಧನೆ. ಜನ, ಧನ ಶಾಶ್ವತವಲ್ಲ. ಜನಸೇವೆ, ಸಮಾಜಸೇವೆ ಮೂಲಕ ಜೀವನ ಸಾರ್ಥಕಗೊಳಿಸಬೇಕು ಎಂದು ಸ್ವಾಮೀಜಿ ನುಡಿದರು. ಮಾಣಿಲ ಶ್ರೀಧಾಮ – ಶ್ರೀ ದುರ್ಗಾ ಮಹಾಲಕ್ಷ್ಮಿ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ಒಡಿಯೂರು ಶ್ರೀಗಳ ಗ್ರಾಮವಿಕಾಸ ಆದರ್ಶವಾಗಿದೆ. ಸಮಾಜಕ್ಕೆ ಉಪಯುಕ್ತವಾಗಿದೆ. ಯೋಜನೆಯಿಂದ ಅನೇಕ ಬಡ ದೀನ ದಲಿತರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಆಗುತ್ತಿದೆ ಎಂದು ಸ್ವಾಮೀಜಿ ಹೇಳಿದರು. ಶ್ರೀ ಗುರುದೇವದತ್ತ ಸಂಸ್ಥಾನಮ್ ಇಲ್ಲಿನ ಸಾಧ್ವೀ ಶ್ರೀ ಮಾತಾನಂದಮಯೀ ಅವರು ಆಶೀರ್ವಚನ ನೀಡಿ, ಒಡಿಯೂರು ಶ್ರೀಗಳವರು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಸಹಕಾರ ಕ್ಷೇತ್ರದಲ್ಲಿ…












