Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಜೂ. 20 : ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದೇವಿಕಾ ಯೋಗ ಕ್ಲಾಸ್ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ಇವರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಶುಕ್ರವಾರ ನಡೆಯಿತು. ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ದಯಾ ಕುಕ್ಕಾಜೆ, ಹಿರಿಯ ಪತ್ರಕರ್ತರಾದ ವಿದ್ಯಾಧರ ಶೆಟ್ಟಿ, ಗಿರಿಧರ ಶೆಟ್ಟಿ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು.
ಮಂಗಳೂರು, ಜೂ. 20 : ಟೆಂಪೋ ಢಿಕ್ಕಿ ಹೊಡೆದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿ ಸಾವನಪ್ಪಿದ ಘಟನೆ ಮಂಗಳೂರಿನ ಕುಚಿಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ರಾಧಾಕೃಷ್ಣ ರಾವ್ (65) ಎಂದು ಗುರುತಿಸಲಾಗಿದೆ. ಬಿಕರ್ನಕಟ್ಟೆ ನಿವಾಸಿ ರಾಧಾಕೃಷ್ಣ ರಾವ್ ಅವರು ಸಂಜೆ ಕಲ್ಪನೆ ಕಡೆಯಿಂದ ಬಿಕರ್ನಕಟ್ಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕುಚಿಕಾಡು ಎನ್ನುವಲ್ಲಿ ಟೆಂಪೋ ಢಿಕ್ಕಿ ಹೊಡೆದಿ ದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ 7.45ರ ಸುಮಾರಿಗೆ ಸಾವನಪ್ಪಿದ್ದಾರೆ.
ಸುಳ್ಯ, ಜೂ. 19 :ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗಲಿ ವಿದ್ಯುತ್ ಕಂಬದಲ್ಲೇ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಜೂನ್ 17ರಂದು ಸುಳ್ಯದ ಅಲೆಕ್ಕಾಡಿ ಬಳಿಯ ಪಾರ್ಲ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಪ್ರಕಾಶ (29) ಮೃತ ವ್ಯಕ್ತಿ. ಕಡಬ ಮೂಲದ ಸಂಸ್ಥೆಯ ವತಿಯಿಂದ ಸುಳ್ಯ, ಮುರುಳ್ಯದ ಅಲೆಕ್ಕಾಡಿಯ ಪಾರ್ಲ ಎಂವಲ್ಲಿ ಕಾರ್ಮಿಕರು ಮೆಸ್ಕಾಂ ಪಂಜ ಸೆಕ್ಷನ್ ವ್ಯಾಪ್ತಿಯ ವಿದ್ಯುತ್ ಲೈನ್ ದುರಸ್ತಿ ಕಾರ್ಯ ಮಾಡುತ್ತಿದ್ದರು. ಈ ವೇಳೆ ಪ್ರಕಾಶ ಎಂಬವರು ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗಲಿ ವಿದ್ಯುತ್ ಕಂಬದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಜೂ. 18 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಜೂನ್ 18 ಮಂಗಳವಾರದಂದು ಮ.ಮ.ಪಾ. ಕಟ್ಟಡದಲ್ಲಿರುವ ಕೊಂಕಣಿ ಸಾಹಿತ್ಯ ಅಕಾಡಮಿಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಂಡು ಅವರು ಮಾತನಾಡಿದ ಅವರು ನಾನು ಕಳೆದ 35 ವರ್ಷಗಳಿಂದ ಮಂಡ್ ಸೊಭಾನ್ ಮೂಲಕ ಕೊಂಕಣಿ ಭಾಷೆಯ ಬೆಳವಣಿಗೆಗೆ ಶ್ರಮಿಸಿದ್ದೇನೆ. ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷನಾಗಿ, ಕೊಂಕಣಿ ಭಾಷೆಗೆ ಉತ್ತೇಜನ ನೀಡುವ ಹೆಚ್ಚಿನ ಜವಾಬ್ದಾರಿ ಈಗ ನನ್ನ ಮೇಲಿದೆ. ಕೊಂಕಣಿ ಭಾಷೆ, ಸಾಹಿತ್ಯ, ಸಂಶೋಧನೆಗೆ ಸಂಬಂಧಿಸಿದ ಕೆಲಸಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದರೊಂದಿಗೆ, ಅಕಾಡೆಮಿ ಸದಸ್ಯರೊಂದಿಗೆ ಚರ್ಚಿಸಿ, ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರು ಮಾತನಾಡಿ, ಕಳೆದ ೩೦ ವರ್ಷಗಳಿಂದ ಕೊಂಕಣಿ ಅಕಾಡೆಮಿಯಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದು, ಭಾಷೆಯ ಸೊಗಡನ್ನು ಇನ್ನಷ್ಟು ಎತ್ತರಕ್ಕೇರಿಸುವ ಜವಾಬ್ದಾರಿ ಅಧ್ಯಕ್ಷರ ಮೇಲಿದೆ.…
ಪುತ್ತೂರು,ಜೂ. 17 : ಕುಂಬ್ರದ ಶೇಖಮಲೆ ಎಂಬಲ್ಲಿ ಆಲ್ಟೋ ಕಾರು ಮತ್ತು ಬೊಲೆರೊ ನಡುವೆ ಡಿಕ್ಕಿ ಸಂಭವಿಸಿ, ಆಲ್ಟೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟ ಘಟನೆ ಕುಂಬ್ರದ ಶೇಖಮಲೆ ಎಂಬಲ್ಲಿ ನಡೆದಿದೆ. ಮಡಿಕೇರಿ ಮೂಲದ ರವೀಂದ್ರ ಹಾಗೂ ಲೊಕೇಶ್ ಮೃತಪಟ್ಟವರು. ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರು ಕುಂಬ್ರದ ಶೇಖಮಲೆ ಬಳಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ್ದ ಕಾರು ಪುತ್ತೂರು ಕಡೆ ಬರುತ್ತಿದ್ದ ಬೊಲೆರೋ ಕಾರಿಗೆ ಡಿಕ್ಕಿ ಹೊಡೆದಿದೆ . ಪರಿಣಾಮ ಆಲ್ಟೋ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಬೈಕ್ ಸವಾರ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ನವದೆಹಲಿ, ಜೂ. 09 : ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಮೋದಿಯವರ ಕ್ಯಾಬಿನೆಟ್ ಸಚಿವರಾಗಿ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಜೆ ಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಜೈಶಂಕರ್ ಪ್ರಸಾದ್, ಇಂಗ್ಲೀಷ್ ನಲ್ಲಿ ಸುಬ್ರಮಣ್ಯಂ ಜೈಶಂಕರ್, ಮನೋಹರ್ ಲಾಲ್ ಕಟ್ಟರ್, ಜೆ ಡಿ ಎಸ್ ನಾಯಕ ಎಚ್ ಡಿ ಕುಮಾರ ಸ್ವಾಮಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿ ಎಸ್ ಯಡಿಯೂರಪ್ಪ, ಮುರುಳಿ ಮನೋಹರ್ ಜೋಷಿ, ಚಿತ್ರ ನಟರಾದ ರಜಿನಿಕಾಂತ್, ಉದ್ಯಮಿಗಳಾದ ಮುಖೇಶ್ ಅಂಬಾನಿ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ, ಜೂ. 08: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಮೃತಪಟ್ಟ ಘಟನೆ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಶನಿವಾರ ನಡೆದಿದೆ. ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ (47) ಮೃತಪಟ್ಟ ವ್ಯಕ್ತಿ. ರಾಮನಾಯ್ಕ ಅವರು ಸ್ಕೂಟರ್ನಲ್ಲಿ ಬಿಸಿರೋಡಿನಿಂದ ಮುಡಿಪು ಕಡೆಗೆ ತೆರಳುತ್ತಿದ್ದ ವೇಳೆ ಅತೀ ವೇಗದಲ್ಲಿ ಬಂದ ಲಾರಿ ಸ್ಕೂಟರ್ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದಿದ್ದು, ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾಸ್ಕೋ, ಜೂ. 07 : ರಷ್ಯಾದ ಸೈಂಟ್ ಪೀಟರ್ಸ್ ಬರ್ಗ್ ಬಳಿ ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.ನಾಲ್ವರು ವಿದ್ಯಾರ್ಥಿಗಳಲ್ಲಿ ಒಬ್ಬ ಸಾಯುವ ಹೊತ್ತಿನಲ್ಲಿ ಮನೆಯವರಿಗೆ ವಿಡಿಯೊ ಕರೆ ಮಾಡಿದ್ದ ಎಂದು ವರದಿಯಾಗಿದೆ. ರಷ್ಯಾದ ವಿಲಿಕಿ ನವ್ಗೊರೊಡ್ನಲ್ಲಿರುವ ನವ್ಗೊರೊಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ಹರ್ಷಲ್ ಅನಂತ್ರಾವ್ ದೆಸಾಲೆ, ಜಿಯಾ ಫಿರೋಜ್ ಪಿಂಜಾರಿ, ಜಿಶಾನ್ ಅಷ್ಪಕ್ ಪಿಂಜಾರಿ ಮತ್ತು ಮಲಿಕ್ ಗುಲಾಮ್ಗೌಸ್ ಮೊಹಮ್ಮದ್ ಯಾಕುಬ್ ಅವರು ಸೇಂಟ್ ಪೀಟರ್ಸ್ ಬರ್ಗ್ ಸಮೀಪದ ವೊಲ್ಖೊವ್ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.. ವಿದ್ಯಾರ್ಥಿನಿ ನಿಶಾ ಭೂಪೇ ಶ್ ಸೋನವಾನೆ ಎಂಬವರನ್ನು ರಕ್ಷಿಸಲಾಗಿದೆ ಮತ್ತು ಅವರಿಗೆ ಚಿಕಿತ್ಸೆ ನೀ ಡಲಾಗುತ್ತಿದೆ ಎಂ ದು ಭಾರತೀ ಯ ರಾಯಭಾರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
ಬಂಟ್ವಾಳ, ಜೂ 06 : ಮನೆಯೊಂದರ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಕಾರ್ಮಿಕರೋರ್ವರು ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ಬುಧವಾರ ನಡೆದಿದೆ. ಮೃತರನ್ನು ಅಮ್ಟಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ ( 45) ಎಂದು ಗುರುತಿಸಲಾಗಿದೆ. ಪ್ರಕಾಶ್ ಅವರು ಬಡಾಜೆ ಎಂಬಲ್ಲಿ ಮನೆಯೊಂದರ ಎರಡನೇ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ನವದೆಹಲಿ ಜೂ. 05: ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ದೆಹಲಿಯಲ್ಲಿ ಇಂದು ಎನ್ಡಿಎ ನಾಯಕರುಗಳು ಸಭೆ ಸೇರಿದ್ದು, ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಎನ್ಡಿಎ ನಾಯಕರ ಸಭೆ ಕರೆಯಲಾಗಿತ್ತು. ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಸಭೆಗೆ ಬಿಹಾರ ಸಿಎಂ ನಿತೀಶ್ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲಾ ಎನ್ಡಿಎ ನಾಯಕರು ಸಭೆಯಲ್ಲಿ ಹಾಜರಿದ್ದರು. ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಎನ್ಡಿಎ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ನರೇಂದ್ರ ಮೋದಿ ಪ್ರಧಾನಿಯಾಗಲಿ. ನಮ್ಮ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಾಧ್ಯವಾದಷ್ಟು ಬೇಗ ಸರ್ಕಾರ ರಚನೆಯಾಗಲಿ ಎಂದು ನಿತೀಶ್ ಕುಮಾರ್ ಸಲಹೆ ನೀಡಿದ್ದಾರೆ. ಎನ್ಡಿಎ ಸರ್ಕಾರ ರಚನೆಗೆ ಚಂದ್ರಬಾಬು ನಾಯ್ಡು ,ಎನ್ಡಿಎ ಒಕ್ಕೂಟದ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದಾರೆ.












