Author: admin

ಮಂಗಳೂರು, ಜು.31: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ  ಇದರ ಸಹಯೋಗದೊಂದಿಗೆ ತುಳು ನಾಟಕ ಕಲಾವಿದರ  ಒಕ್ಕೂಟದ 21ನೇ ವಾರ್ಷಿಕ ಸಂಭ್ರಮ ಆ. 2,ಮಂಗಳವಾರ ಸಂಜೆ 5.30ಕ್ಕೆ   ನಗರದ ಕುದುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ ಹೇಳಿದರು. ಪತ್ರಿಕಾಭವನ ದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ತೌಳವ ಪ್ರಶಸ್ತಿ ಪ್ರಧಾನ. ಹಿರಿಯ ಕಲಾವಿದರಿಗೆ ಸನ್ಮಾನ, ಕೀರ್ತಿಶೇಷ ಕಲಾವಿದರ ನೆಂಪು ಕಾರ್ಯಕ್ರಮ, ಅಶಕ್ತ ಕಲಾವಿದರಿಗೆ ಗೌರವಧನ ವಿತರಣೆ ನಡೆಯಲಿದೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಅಧ್ಯಕ್ಷತೆ ವಹಿಸುವರು. ಮೇಯರ್‌ ಸುಧೀರ್ ಶೆಟ್ಟಿ ತೌಳವ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಹಿರಿಯನಾಟಕಕಾರ ಡಾ| ಸಂಜೀವ ದಂಡಕೇರಿ, ಉದ್ಯಮಿಗಳಾದ ಸಂತೋಷ್ ಪೂಂಜಾ, ರಾಜೇಶ್ ಶೆಟ್ಟಿ, ಪದವು ಫ್ರೆಂಡ್ಸ್ ಕ್ಲಬ್‌ ಅಧ್ಯಕ್ಷ ಕುಶಾಲ್ ಕುಮಾರ್, ನೀರುಮಾರ್ಗ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ…

Read More

ಮಂಗಳೂರು, ಜು.30 : ನಗರದ ನಂತೂರು ಪದವು ಎಂಬಲ್ಲಿ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟ್ ಸವಾರ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಶಿವಾನಂದ ಮೃತಪಟ್ಟ ಸ್ಕೂಟರ್ ಸವಾರ. ಶಿವಾನಂದ ಅವರು ಕೆಪಿಟಿಯಿಂದ ನಂತೂರು ಪದವು ರಸ್ತೆಯಾಗಿ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಇದರಿಂದ ಸ್ಕೂಟರ್ ಸವಾರಿ ಮಾಡುತ್ತಿದ್ದ ಶಿವಾನಂದರ ತಲೆಯ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Read More

ಮಂಗಳೂರು, ಜು.30 : ಮಂಗಳೂರು ಪತ್ರಿಕಾ ಭವನದಲ್ಲಿ ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ ಕಾರ್ಯಕ್ರಮ ಮಂಗಳವಾರ ನಡೆಯಿತು.ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ ಸ್ವೀಕರಿಸಿದ ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್ ಜಿ. ಅವರು ಮಾತನಾಡಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವುದು ಒಂದು ವಿಶಿಷ್ಟ ಅನುಭವ. ಸೇನೆಗೆ ಸೇರ ಬಯಸುವ ಯುವಕರು ದೇಶಪ್ರೇಮ, ಸೇವಾ ಮನೋಭಾವನೆ ಹಾಗೂ ದೃಢವಾದ ಮಾನಸಿಕ ಸಿದ್ಧತೆ ಹೊಂದಿರುವುದು ಅಗತ್ಯ ಎಂದು ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್ ಜಿ. ಅಮೀನ್ ಹೇಳಿದರು. ಭಾರತೀಯ ವಾಯು ಸೇನೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸುವ ಅವಕಾಶ ಲಭಿಸಿದ್ದು, ಅದರ ಅನುಭವ ವಿಭಿನ್ನ . ಪದವಿ ಮುಗಿದು ಪರೀಕ್ಷೆ ಫಲಿತಾಂಶ ಬರುವ ಮೊದಲೇ ವಾಯು ಸೇನೆಗೆ ಆಯ್ಕೆಯಾಗಿದ್ದೆ ಎಂದರು. ವಾಯು ಸೇನೆಯ ತರಬೇತಿಯ ನಂತರ ಗೌಹಾಟಿಯಲ್ಲಿ ವೃತ್ತಿ ಜೀವನ ಆರಂಭಗೊಂಡಿತು. ವಿವಿಧ ಕರ್ತವ್ಯಗಳನ್ನು ನಿರ್ವಹಿಸಿ…

Read More

ಮಂಗಳೂರು,ಜು.28 : ನಗರದ ಕುಲಶೇಖರ ಕೋಟಿಮುರ ಸಿಲ್ವರ್ ಗೇಟ್ ನ ಗ್ರಂಥಾಲಯದ ಬಳಿ ಇರುವ ನಾಗೇಶ್ ಎಂಬುವವರ ಮನೆ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ರವರು ಕುಟುಂಬಸ್ಥರಿಗೆ ಧೈರ್ಯ ತುಂಬಿ ಪರಿಹಾರ ಕಾರ್ಯದ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕರೆ ಮಾಡಿ ಸೂಚಿಸಿದರು. ಸ್ಥಳದಲ್ಲಿ ಅಜಯ್ ಕುಲಶೇಖರ, ನಿತಿನ್ ಕುಮಾರ್, ಅನಿಲ್, ಹರಿಣಿ ಪ್ರೇಮ್, ಪ್ರಶಾಂತ್, ಸುಶಾಂತ್ ಮೊದಲಾದವರು ಉಪಸ್ಥಿತರಿದ್ದರು.

Read More

ಮಂಗಳೂರು,ಜು.28 : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿಆಟಿಡೊಂಜಿ ದಿನ ಕಾರ್ಯಕ್ರಮ ಕದ್ರಿ  ಶ್ರೀ ಗೋರಕ್ಷಣಾಥ ಮಿನಿ ಹಾಲ್ ನಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಶ್ರೀ ನವೀನ್ ಶೆಟ್ಟಿಅವರು ಇತರ ಗಣ್ಯರೊಂದಿಗೆ ಸೇರಿ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ನಂತರ ಮಾತಾಡಿ ಹಿಂದಿನ ದಿನಗಳಲ್ಲಿ ಆಟಿ ದಿನಗಳು ಕಷ್ಟಕರವಾಗಿದ್ದವು. ಅಂದಿನ ದಿನಗಳನ್ನು ನೆನಪಿಸುವ ಸಲುವಾಗಿ ಈ ಆಟಿಡೊಂಜಿ ಕಾರ್ಯಕ್ರಮಗಳನ್ನು ಅಲ್ಲಲ್ಲಿಆಚರಿಸುತ್ತಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸನ್ಮಾನ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆದವು.ಸ್ವಾಗತ ಮತ್ತು ಪ್ರಸ್ತಾವಿಕ ಭಾಷಣವನ್ನು ಪ್ರಕಾಶ್ ಮೂಲತ್ವ ನೆರವೇರಿಸಿದರು. ಅತಿಥಿ ಗಳಿಗೆ ಶ್ರೀ ಲಕ್ಷ್ಮೀಶ ಕೋಟ್ಯಾನ್‌- ಶಾಲ್, ಶ್ರೀಮತಿ ಕಲ್ಲನಾ ಕೋಟ್ಯಾನ್- ಹೂವು, ಮಹೇಶ್ ಅಮೀನ್- ವೀಳ್ಯದೇಲೆ ಅಡಿಕೆ, ಶ್ರೀ ಪ್ರಶಾಂತ್ ರೈ- ಮುಟ್ಟಲೆ, ಶ್ರೀಮತಿ ಶೈನಿಕೈಲ್ – ಶ್ರೀಮತಿ ಜಯಶ್ರೀ -ಕುಡುಪು ಹಾಗೂ ಶ್ರೀ ರಾಮ್ ಪ್ರಸಾದ್- ಅಕ್ಕಿ ನೀಡಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಪ್ರಕಾಶ್ ಮೂಲತ್ವ, ಶ್ರೀ ಲಕ್ಷ್ಮೀಶ ಕೋಟ್ಯಾನ್‌, ಶ್ರೀಮತಿ ಕಲ್ಲನಾ ಕೋಟ್ಯಾನ್,…

Read More

ಬೈಂದೂರು, ಜು 27 : ಲಾರಿ ಚಾಸಿಸ್ ಪೇಂಟ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಪೈಂಟರೊಬ್ಬರು ಸಾವನ್ನಪ್ಪಿದ ಘಟನೆ ನಾವುಂದ ಎಂಬಲ್ಲಿ ಶುಕ್ರವಾರ ನಡೆದಿದೆ.ಗಂಗೊಳ್ಳಿ ನಿವಾಸಿ ಸಂದೀಪ್( 40 ) ಮೃತರು. ಸಂದೀಪ್ ಇವರು ಟ್ರಾನ್ಸ್ಪೋರ್ಟ್ ಸಂಸ್ಥೆಯೊಂದರ ಲಾರಿಗಳ ಪೇಂಟಿಂಗ್ ಮಾಡಲು ಆಗಮಿಸಿದ್ದು, ಈ ವೇಳೆ ಪೇಂಟಿಂಗ್ ಕಂಪ್ರೆಸರ್ ಯಂತ್ರದಲ್ಲಿ ವಿದ್ಯುತ್ ಹರಿದ ಪರಿಣಾಮ ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟರು ಎಂದು ಹೇಳಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯ ಕಾರ್ಯದರ್ಶಿಯಾಗಿರುವ ಡಾ.ರಜನೀಶ್ ಗೋಯಲ್ ಅವರು ಜು.31ಕ್ಕೆಸೇವಾ ನಿವೃತ್ತಿ ಹೊಂದಲಿದ್ದಾರೆ. ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಶುಕ್ರವಾರ (ಜು.26) ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಡಾ.ಶಾಲಿನಿ ರಜನೀಶ್ ಅವರ ಡಾ.ರಜನೀಶ್ ಗೋಯಲ್ ಪತ್ನಿ. 1989ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.ಆಗಸ್ಟ್ 1 ರಿಂದ ಶಾಲಿನಿ ರಜನೀಶ್ ಅವರು ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Read More

ಹರಿಯಾಣ, ಜು 25 : ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿ ಒಂದರ ಹಿಂದೊಂದರಂತೆ ಭೂಕಂಪನಗಳು ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಾದ್ಯಂತ ಕಂಪನದ ಅನುಭವವಾಗಿದೆ. ಫರಿದಾಬಾದ್ ಜಿಲ್ಲೆಯಲ್ಲಿ ಗುರುವಾರ 2 ಬಾರಿ ಭೂಮಿ ಕಂಪಿಸಿದೆ. ರಾಷ್ಟ್ರೀಯ ಭೂಕಂಪನ ಶಾಸ್ತ್ರದ ಕೇಂದ್ರದ ಮಾಹಿತಿಯ ಪ್ರಕಾರ, ಮೊದಲ ಕಂಪನವು ಬೆಳಗ್ಗೆ 10.54ಕ್ಕೆ ಸಂಭವಿಸಿದೆ, ಇದಾಗಿ ಒಂದು ಗಂಟೆಯೊಳಗೆ ಎರಡನೆಯ ಬಾರಿಗೆ 11.43ಕ್ಕೆ ಭೂಮಿ ಕಂಪಿಸಿದೆ. ದೇಶದ ರಾಜಧಾನಿ ದೆಹಲಿ-ಎನ್‌ಸಿಆರ್ನ ಹಲವಾರು ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ ಎಂಬ ಮಾಹಿತಿ ಇದೆ.

Read More

ಪತ್ರಿಕಾಭವನ, ಜು. 24: ದೇಶದ ಎಲ್ಲಾ ರಾಜ್ಯ ಹಾಗೂ ಭಾಷೆಗಳ ಜನರನ್ನು ಒಂದೇ ವೇದಿಕೆಯಡಿ ಸೇರಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಭಾರತ – ಭಾರತಿ ಸಂಸ್ಥೆಯ ಮಂಗಳೂರು ಶಾಖೆ ಅಸ್ತಿತ್ವಕ್ಕೆ ಬಂದಿದೆ ಎಂದು ಮಂಗಳವಾರ ಪತ್ರಿಕಾಭವನ ದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತ – ಭಾರತಿ. ಕರ್ನಾಟಕ ಪ್ರಾಂತ ಸಂಯೋಜಕಿ ಅನಿತಾ ಆಚಾರ್ಯ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಪ್ರೇರಣೆಯಿಂದ, ಸುಬ್ರಹ್ಮಣ್ಯನ್ ಸ್ವಾಮಿ ಅವರ ಪ್ರೋತ್ಸಾಹದಿಂದ ರಾಷ್ಟ್ರೀಯ ಏಕಾತ್ಮತೆ ಹಾಗೂ ಹಿಂದುತ್ವದ ಪುನರುತ್ಥಾನದ ಸಂಕಲ್ಪದ ಆಧಾರದಲ್ಲಿ ಸಂಸ್ಥೆ ಆರಂಭಗೊಂಡಿದೆ. ದೇಶಾದ್ಯಂತ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಇದೀಗ 60ನೇ ಶಾಖೆಯಾಗಿ ಮಂಗಳೂರು ಶಾಖೆ ಅಸ್ತಿತ್ವಕ್ಕೆ ಬಂದಿದೆ ಎಂದು ಅವರು ಹೇಳಿದರು. ಸಂಸ್ಥೆಯ ಸ್ಥಾಪನಾ ದಿನ, ರಕ್ಷಾ ಬಂಧನ, ರಾಜ್ಯೋತ್ಸವ, ಗಣರಾಜ್ಯೋತ್ಸವ ಮುಂತಾದ ಕಾರ್ಯಕ್ರಮಗಳನ್ನು ಸಂಸ್ಥೆ ಹಮ್ಮಿಕೊಳ್ಳುತ್ತಿದೆ. ರಾಷ್ಟ್ರೀಯ ಹಬ್ಬಗಳನ್ನು ಎಲ್ಲ ರಾಜ್ಯ, ಭಾಷೆಯ ಜನರು ಜತೆಗೂಡಿ ಆಚರಿಸುತ್ತಿದ್ದೇವೆ. ಡಿಸೆಂಬರ್ ಅಥವಾ ಜನವರಿಯಲ್ಲಿ ಮಂಗಳೂರಿನಲ್ಲಿ ನೆಲೆಸಿರುವ ವಿವಿಧ ರಾಜ್ಯಗಳ ಜನರಿಂದ ಆಹಾರ…

Read More

ಮಂಗಳೂರು, ಜು.  24 :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ   ಕಾನೂನು ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಂಸ್ಥೆ ವತಿಯಿಂದ  26ರಿಂದ 28ರ ತನಕ ರಾಷ್ಟ್ರಮಟ್ಟದ ಕಾನೂನು ಹಬ್ಬ ‘ಲೆಕ್ಸ್ ಅಲ್ಟಿ ಮಾ – 2024’ ಆಯೋಜಿಸಲಾಗಿದೆ ಎಂದು ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಲೇಜು ಪ್ರಾಂಶುಪಾಲ ಡಾ| ತಾರನಾಥ ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 26ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ವಿ.ವಿ.ಯ ಕುಲಪತಿ  ಪ್ರೊ. ಪಿ.ಎಲ್. ಧರ್ಮ ಅವರು ಉದ್ಘಾಟಿಸಲಿದ್ದಾರೆ. ಜು. 28ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಇಂಗಲಗುಪ್ಪೆ ಸೀತಾರಾಮಯ್ಯ   ಇಂದ್ರೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕಾನೂನು ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೆ.ದೇವರಾಜ್ ಹಾಗೂ ಪೋಷಕ ರಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ್ ಭಟ್ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಸುಮಾರು 43 ಕಾನೂನು ಶಾಲೆಗಳು, ಕಾಲೇಜುಗಳು  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 9 ರೀತಿಯ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ…

Read More