Author: admin

ಬಜಾಲ್, ಜು. 14 : ಕಂಕನಾಡಿ ವಲಯ ಬಂಟರ ಸಂಘದ ಆಶ್ರಯದಲ್ಲಿ 15ನೇ ವಾರ್ಷಿಕ ಮಹಾಸಭೆ ಹಾಗೂ ಬಂಟ ಸಮ್ಮಿಲನ ಕಾರ್ಯಕ್ರಮವು  ರವಿವಾರ ಜು. 14ರಂದು ಬಜಾಲ್ ಸಂತ ಜೋಸೆಫ್‌ ಹೈಸ್ಕೂಲ್‌ನಲ್ಲಿ  ನಡೆಯಿತು. ಕಾರ್ಯಕ್ರಮವನ್ನುಮಂಗಳೂರು ಬಂಟರ ಯಾನೆ ನಾಡವರ ಮಾತೃ  ಸಂಘದ  ಖಜಾಂಜಿ  ಸಿಎ ರಾಮ್ ಮೋಹನ್ ರೈ ಅವರು ಇತರ ಗಣ್ಯರೊಂದಿಗೆ ಸೇರಿ ಉದ್ಘಾಟಿಸಿದರು. ವಿಮರ್ಶಕ ತಮ್ಮಣ್ಣ ಶೆಟ್ಟಿ ಅವರು  ದಿಕ್ಕೂಚಿ ಭಾಷಣವನ್ನುಮಾಡಿದರು. ಸಿಎ ರಾಮ್ ಮೋಹನ್ ರೈ, ಮ.ನ.ಪಾ. ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಅವರುಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾಡಿದರು. ಸಂಘದ ಅಧ್ಯಕ್ಷ ಬಿ. ನಾಗೇಶ್ ಶೆಟ್ಟಿ ಬಜಾಲ್ ಕಾರ್ಯಕ್ರಮದ  ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭ ದಲ್ಲಿಸಾಧಕರ ಸಮ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ  ಕಾರ್ಯಕ್ರಮ ನಡೆಯಿತು.ಹಸಿರುದಳದ ಸಂಯೋಜಕ ನಾಗರಾಜ್ ಬಜಾಲ್ ಅವರನ್ನು ಸಮ್ಮಾನಿಸಲಾಯಿತು. ಕಾರ್ಯಕ್ರಮದ್ದಲ್ಲಿ ಸಿಎ ರಾಮ್ ಮೋಹನ್ ರೈ, ಮಂಗಳೂರು ಇಂಟ‌ ನ್ಯಾಶನಲ್ ಬಂಟ್ಸ್ ವೆಲ್ವೇರ್ ಟ್ರಸ್ಟಿನ ಸಂಘಟನ ಕಾರ್ಯದರ್ಶಿ ದೇವಿಚರಣ್ ಶೆಟ್ಟಿ, ಮನಪಾ ವಿಪಕ್ಷ…

Read More

ನೈಜೀರಿಯಾ, ಜು 14 : ತರಗತಿ ನಡೆಯುತ್ತಿರುವಾಗ  2 ಅಂತಸ್ತಿನ ಶಾಲೆಯೊಂದು ಕುಸಿದು 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ ದಾರುಣ ಘಟನೆ ಉತ್ತರ-ಮಧ್ಯ ನೈಜೀರಿಯಾದಲ್ಲಿ ನಡೆದಿದೆ. ಅವಶೇಷಗಳಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗಾಗಿ ಶೋಧ ನಡೆಯುತ್ತಿದೆ. ಪರಿಹಾರ ಮತ್ತು ರಕ್ಷಣಾ ತಂಡಗಳನ್ನು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಪ್ರಸ್ಥಭೂಮಿ ರಾಜ್ಯದ ಬುಸಾ ಬುಜಿ ಸಮುದಾಯದ ಸೇಂಟ್ಸ್ ಅಕಾಡೆಮಿ ಕಾಲೇಜಿಗೆ ವಿದ್ಯಾರ್ಥಿಗಳು ಎಂದಿನಂತೆ ತರಗತಿಗಳಿಗೆ ಬಂದಿದ್ದರು. ಶಾಲೆ ಆರಂಭವಾದ ಕೆಲ ಸಮಯದಲ್ಲೇ ಶಾಲಾ ಕಟ್ಟಡ ಕುಸಿದಿದೆ ಎನ್ನಲಾಗಿದೆ. ಒಟ್ಟು 154 ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು ಈ ಪೈಕಿ 132 ಮಂದಿಯನ್ನು ರಕ್ಷಿಸಲಾಗಿದೆ. 22 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪ್ರಸ್ಥಭೂಮಿ ಪೊಲೀಸ್ ವಕ್ತಾರ ಆಲ್ಫ್ರೆಡ್ ಅಲಾಬೊ ತಿಳಿಸಿದ್ದಾರೆ.

Read More

ಉಪ್ಪಿನಂಗಡಿ, ಜು. 13: ಬೈಕ್‌ ಮತ್ತುಪಿಕಪ್‌ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್‌ ಸವಾರ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ನಡೆದಿದೆ. ಮೃತರನ್ನು ಮಂಗಳೂರು ಕೋಡಿಕ್ಕಲ್‌ ನಿವಾಸಿ ಪ್ರಣಮ್‌ ಕೋಟ್ಯಾನ್‌ (23) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಪ್ರಣಮ್ ಅವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ ಪ್ರಣಮ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇವರು ಮೆಡಿಕಲ್‌ ರೆಪ್‌ ಆಗಿದ್ದರು .

Read More

ಬೆಂಗಳೂರು, ಜು 12: ಕನ್ನಡ ನಿರೂಪಕಿ ಅಪರ್ಣಾ ವಸ್ತಾರೆ ಅವರು ಜು. 11 ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿ ದ್ದಾರೆ. ಹಲವು ದಿನಗಳಿಂದ ಕ್ಯಾನ್ಸರ್‌ ಕಾಯಿಲೆಯಿಂದ ಅಪರ್ಣ ಅವರು ಬಳಲುತ್ತಿದ್ದರು. ಗುರುವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ನಿರೂಪಕಿಯಾಗಿದ್ದ ಅಪರ್ಣಾ ಅವರು ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್‌ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ನಟಿ ಅಪರ್ಣಾ ಮುಕ್ತ-ಮುಕ್ತ, ಮೂಡಲ ಮನೆ ಸೇರಿ ಹಲವು ಧಾರಾವಾಹಿಗಳಲ್ಲೂ ಕಾಣಿಸಿಕೊಂಡಿದ್ದರು.

Read More

ಮಂಗಳೂರು, ಜು. 12: ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಕಚೇರಿ ಜುಲೈ 12 ರಂದು ಶುಕ್ರವಾರ ಉದ್ಘಾಟನೆಗೊಂಡಿತು. ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಸಂಕೀರ್ಣದಲ್ಲಿ ಆರಂಭಿಸಲಾಗಿರುವ ಈ ಕಾರ್ಯಾಲಯವನ್ನು ಆರೆಸ್ಸೆಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್‌ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್‌ಎಸ್‌ಎಸ್ನ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್ ಗಡಿಯಲ್ಲಿ ಸೈನಿಕರು ಹೇಗೆ ಕೆಲಸ ಮಾಡುತ್ತಾರೆಯೋ ಅದೇ ರೀತಿ ಜನರ ಹಕ್ಕುಗಳಿಗಾಗಿ ಚೌಟ ಕೆಲಸ ಮಾಡುತ್ತಾರೆ . ಸಂಸದರ ಸ್ಥಾನವು ಕೇವಲ ಕುಳಿತುಕೊಳ್ಳುವುದು ಮಾತ್ರವಲ್ಲ, ಅವರು ಪ್ರಾಮಾಣಿಕ ಸಂಸದರಾಗಿ ಕೆಲಸ ಮಾಡುತ್ತಾರೆ ಮತ್ತು ಶ್ರಮಿಸುತ್ತಾರೆ ಎಂದು ನಾನು ನಂಬುತ್ತೇನೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ನಾನು ಜನರ ಹಕ್ಕುಗಳಿಗಾಗಿ ಕೆಲಸ ಮಾಡಲು ಬಯಸುತ್ತೇನೆ. ನರೇಂದ್ರ ಮೋದಿಯವರ ‘ವಿಕಸಿತ ಭಾರತ್’ ನ ಅದೇ ಕನಸಿನೊಂದಿಗೆ ನಾವು ‘ವಿಕಸಿತ ದಕ್ಷಿಣ ಕನ್ನಡ’ ಮಾಡುವುದನ್ನು ಖಚಿತಪಡಿಸಿಕೊಳ್ಳುತ್ತೇನೆ. ಜನರ ಸಮಸ್ಯೆಗಳನ್ನು ಆಲಿಸಲು…

Read More

ಶ್ರೀನಗರ, ಜು. 12: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಕ್ಕೆ ಓಡಿ ಬಂದಿದ್ದಾರೆ ಎಂದು ವರದಿಯಾಗಿದೆ. ಬಾರಾಮುಲ್ಲಾ ಪ್ರದೇಶದಲ್ಲಿ ಜು. 12 ರಂದು ಮಧ್ಯಾಹ್ನ 12.26ಕ್ಕೆಸಂಭವಿಸಿರುವ ಭೂಕಂಪಕ್ಕೆ ಜನ ಮನೆಯಿಂದ ಹೊರಕ್ಕೆ ಓಡಿ ಬಂದಿದ್ದಾರೆ. ಭೂಕಂಪದಿಂದಾಗಿ ಪ್ರಾಣಾಪಾಯ ಸೇರಿ ಯಾವುದೇ ದುರಂತ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಭೂಮಿಯ 10 ಕಿಲೋಮೀಟರ್‌ ಆಳದಲ್ಲಿ ಕಂಪನ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಬೈಂದೂರು, ಜು 11: ತೆಂಗಿನಕಾಯಿ ಹೆಕ್ಕಲು ಹೋದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಜು.10ರಂದು ನಡೆದಿದೆ. ಬಡಾಕೆರೆ ನಿವಾಸಿ ಮಂಜುನಾಥ (85) ಮೃತ  ವ್ಯಕ್ತಿ ತೋಟದ ಬಾವಿಯ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮಂಜುನಾಥ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಜು. 10: ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಮ.ನ.ಪಾ. ಸದಸ್ಯ ಕಾಂಗ್ರೆಸ್ನ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ನಡುವೆ, ಬಿಜೆಪಿ ಶಾಸಕ  ಭರತ್ ಶೆಟ್ಟಿ ಹೇಳಿಕೆ ಖಂಡಿಸಿ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆ ಮುಗಿದ ಬೆನ್ನಲ್ಲೇ ಏಕಾಏಕಿ ರಸ್ತೆಗೆ ನುಗ್ಗಿದ ಕಾರ್ಯಕರ್ತರು ರಸ್ತೆ ತಡೆ ಮಾಡಿದ್ದಾರೆ. ರಸ್ತೆ ತಡೆಯಿಂದ ಲಾಲ್ ಭಾಗ್ ಸರ್ಕಲ್ ಬಳಿ ಟ್ರಾಫಿಕ್ ಜಾಂ ಉಂಟಾಯಿತು. ಬಳಿಕ ರಸ್ತೆ ತಡೆ ನಡೆಸಿದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಪಕ್ಕಕ್ಕೆ ಸರಿಸಿದರು.

Read More

ಉಡುಪಿ, ಜು. 09 : ರಸ್ತೆಯಲ್ಲಿ ಹರಿಯುತ್ತಿದ್ದ ನೆರೆ ನೀರಿನಿಂದ ಕಾರೊಂದು ಕೊಚ್ಚಿಕೊಂಡು ಹೋಗಿದ್ದು, ಕಾರೊಳಗೆ ಇದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜು. 08ರಂದು ಕನ್ನರ್ಪಾಡಿ-ಕಡೆಕಾರು ಎಂಬಲ್ಲಿ ನಡೆದಿದೆ. ಕನ್ನರ್ಪಾಡಿ- ಕಡೆಕಾರು ರಸ್ತೆ ಸಂಪೂರ್ಣ ಜಲಾವೃತಗೊಂಡಿತ್ತು, ಈ ರಸ್ತೆಯಲ್ಲಿಯೇ ಕಾರನ್ನು ಚಲಾಯಿಸಿದ ಪರಿಣಾಮ ನೀರಿನ ರಭಸಕ್ಕೆ ಕಾರು ನೆರೆಯ ನೀರಿನಲ್ಲಿ ಕೊಚ್ಚಿಕೊಂಡು ಹೋಯಿತು. ತಕ್ಷಣ ಅಪಾಯ ಅರಿತ ಕಾರಿನೊಳಗಿದ್ದ ನಾಲ್ವರು ಕಾರಿನ ಡೋರ್ ತೆರೆದು ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಸ್ಥಳೀಯರೊಂದಿಗೆ ಸೇರಿ ನೆರೆಯಿಂದ ಕೊಚ್ಚಿ ಕಾರನ್ನು ಮೇಲಕ್ಕೇತ್ತಿದ್ದಾರೆ ಎಂದು ಹೇಳಲಾಗಿದೆ.

Read More

ಹಾವೇರಿ, ಜು. 08 : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (41) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ಸೋಮವಾರ ನಡೆದಿದೆ. ಹಿರೇಕೆರೂರ್ ನಿಂದ ಶಿವಮೊಗ್ಗಕ್ಕೆ ತೆರಳುತ್ತಿ ದ್ದ ಅವರು ಹೊನ್ನಾಳಿ ಸಮೀಪದ ಅರಕೆರೆ ಗ್ರಾಮದ ಬಳಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ವಿಷ ಸೇವಿಸಿದ ಅಸ್ವಸ್ಥರಾಗಿದ್ದ ಅವರನ್ನು ಕಂಡಂತಹವರು  ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Read More