Subscribe to Updates
Get the latest creative news from FooBar about art, design and business.
Author: admin
ಸುರಪುರ, ಫೆ. 26: ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಫೆ. 25 ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜಾ ವೆಂಕಟಪಟ್ಟ ನಾಯಕ ಅವರು ಕಳೆದ 15 ದಿನಗಳ ಹಿಂದೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಆದರೆ, ಇಂದು ದಿಢೀರನೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರು, ಫೆ. 25: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ (ಸಿಜೆ) ನಿಲಯ್ ವಿಪಿನ್ಚಂದ್ರ ಅಂಜಾರಿಯ ಅವರು ರವಿವಾರ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ವಕೀಲರು, ಗಣ್ಯರು, ಸೇರಿದಂತೆ ಹಿರಿಯ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು
ಬೆಂಗಳೂರು, ಫೆ. 24: ಕರ್ನಾಟಕದ ಕ್ರಿಕೆಟ್ ತಂಡದ ಆಟಗಾರ ಪಂದ್ಯದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಕರ್ನಾಟಕ ತಂಡದ ಆಟಗಾರ ಕೆ. ಹೊಯ್ಸಳ(34) ಮೃತರು. ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ ಮತ್ತು ಅಕೌಂಟ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಹೊಯ್ಸಳ ಪ್ರತಿನಿಧಿಸುತ್ತಿದ್ದರು. ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಮಣಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿತ್ತು. ಈ ಸಂದರ್ಭ ತಂಡದೊಂದಿಗೆ ಸಂಭ್ರಮಾಚರಣೆ ಮಾಡಿದ್ದ ಹೊಯ್ಸಳಗೆ ಮೈದಾನದಲ್ಲೇ ಎದೆಯಲ್ಲಿ ನೋವು ಕಾಣಿಸಿಕೊಂಡು ಪ್ರಜ್ಞೆ ತಪ್ಪಿದ್ದಾರೆ. ಬಳಿಕ ಅವರನ್ನು ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲೇ ಅವರು ಸಾವನ್ನಪ್ಪಿದ್ದಾರೆ.
ಉಡುಪಿ, ಫೆ 23 : ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ದೋಣಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮುಳುಗಡೆಯಾಗಿದೆ, ದೋಣಿಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪ್ರಕಾಶ್ ದೇವಾಡಿಗ ಅವರಿಗೆ ಸೇರಿದ್ದು, ಆನಂತಕೃಷ್ಣ ಬೋಟು ರತ್ನಗಿರಿ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಬೋಟಿನ ಒಳಗೆ ನೀರು ಬರಲಾರಂಭಿಸಿದ್ದು, ಕೂಡಲೇ ಸಮೀಪದಲ್ಲಿದ್ದ ಮೀನಾಕ್ಷಿ ಮತ್ತು ಗಾಯತ್ರಿ ರಕ್ಷಾ ಬೋಟಿನವರು ಬೋಟಿನಲ್ಲಿದ್ದ 7 ಮಂದಿಯನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ.
ಮಂಗಳೂರು, ಫೆ. 22: ಬಂಟರ ಸಂಘ ಕಾವೂರು ವತಿಯಿಂದ ಮಾಲಾಡಿ ಕೋರ್ಟ್ ಮುಖ್ಯ ರಸ್ತೆಯಲ್ಲಿ ಕಾವೂರು ಬಂಟರ ಸಮುದಾಯ ಭವನದ ಭೂಮಿ ಪೂಜೆ ಮತ್ತು ಬಂಟರ ಸಂಘದ ಆಡಳಿತ ಕಚೇರಿ ಹಾಗೂ ಬಯಲು ರಂಗಮಂದಿರದ ಉದ್ಘಾಟನೆ ಬುಧವಾರ ನೆರವೇರಿತು. ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಬಂಟರ ಯಾನೆ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ಮಾಲಾಡಿ, ಸಂಸದ ನಳಿನ್ ಕುಮಾರ್ ಕಟೀಲು ,ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎಂಆರ್ಜಿ ಗ್ರೂಪ್ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ,ಹೇರಂಬ ಇಂಡಸ್ಟ್ರೀಸ್ ಮುಂಬಯಿಯ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಸಾಯಿರಾಧಾ ಗ್ರೂಪ್ನ ಆಡಳಿತ ನಿರ್ದೇಶಕ ಮನೋಹರ ಎಸ್. ಶೆಟ್ಟಿ, ಮಾಜಿ ಸಚಿವರಾದ ಬಿ.ನಾಗರಾಜ ಶೆಟ್ಟಿ ಬಿ.ರಮಾನಾಥ ರೈ, ಮನಪಾಸದಸ್ಯರಾದ ಅನಿಲ್ ಕುಮಾರ್, ಸುಮಂಗಲಾ ರಾವ್,ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ತಾಲೂಕು ಸಮಿತಿ…
ಬೆಂಗಳೂರು, ಫೆ 22: ಶಾಲೆ- ಕಾಲೇಜ್ಗಳಿಂದ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟು ಮಾರಾಟ ಮಾಡುವವರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿಂದು ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿಧೇಯಕ ಅಂಗೀಕರಿಸಲಾಯಿತು. ಸದನದಲ್ಲಿ ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಶಾಲೆಗಳಿಂದ 100 ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ಹಾಗೂ ಸಿಗರೇಟ್ ಸೇದುವಂತಿಲ್ಲ. ಇದನ್ನು ಮೀರಿ ಮಾರಾಟ ಮಾಡುವವರಿಗೆ ದಂಡದ ಪ್ರಮಾಣ 100 ರೂ. ನಿಂದ 1000 ರೂ. ಗೆ ಏರಿಕೆ ಮಾಡಿದ್ದೇವೆ ಎಂದರು.
ಬೆಂಗಳೂರು, ಫೆ. 21 : ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಫೆ. 09 ರಂದು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. 1991ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಈ ವರ್ಷದ ಜೂನ್ ಕೊನೆಯ ವಾರದಲ್ಲಿ ನಿವೃತ್ತರಾಗಲಿದ್ದರು. ಹೀಗಿರುವಾಗಲೇ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದರು.
ನೆಲ್ಯಾಡಿ, ಫೆ 21 : ಮರದಿಂದ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ. ಮೃತರು ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ (48ವ) ಎಂದು ಗುರುತಿಸಲಾಗಿದೆ. ರಮೇಶ್ ಅವರು ಫೆ.18ರಂದು ಸಂಜೆ ಹೊಸಮಜಲುನಲ್ಲಿ ಮನೆ ಸಮೀಪದ ಮಾವಿನ ಮರಕ್ಕೆ ಮಾವಿನ ಮಿಡಿ ಕೊಯ್ಯಲೆಂದು ಹತ್ತಿದ್ದವರು ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದು. ತಕ್ಷಣ ಅವರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಸರಗೋಡು, ಫೆ. 18 : ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದುಇಬ್ಬರು ಸಾವನ್ನಪ್ಪಿದಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರಿಯದಲ್ಲಿ ನಡೆದಿದೆ. ಇಂದು ಮುಂಜಾನೆ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ತಾಯನ್ನೂರಿನ ರಾಜೇಶ್ (35) ಮತ್ತು ರಘುನಾಥ್ (52) ಮೃತಪಟ್ಟಿದ್ದಾರೆ. ರಾಹುಲ್ ಮತ್ತು ರಾಜೇಶ್ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಾಗಿದೆ.
ಕಜ್ಕೆಫೆ.,17 : ಶ್ರೀ ವಿಶ್ವಕರ್ಮ ಜಗದ್ಗುರು ಪೀಠ ಅರೇಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಕಜ್ಕೆ ಶಾಖಾ ಮಠದ ಶ್ರೀ ಶ್ರೀ ಅನ್ನಪೂರ್ಣೇಶ್ವರಿ, ಶ್ರೀ ಗಣಪತಿ ಮತ್ತು ಶ್ರೀಆದಿ ಶಂಕರಾಚಾರ್ಯರ ಶಿಲಾಮಯ ದೇವಸ್ಥಾನದಲ್ಲಿ ಶ್ರೀ ನಾಗದೇವರ ಪ್ರತಿಷ್ಠೆ ಗುರುವಾರ ನೆರವೇರಿತು. ಪರಮಪೂಜ್ಯ ಶ್ರೀಶ್ರೀ ಶಿವಸುಜ್ಞಾನತೀರ್ಥ ಮಹಾ ಸ್ವಾಮೀಜಿ ಮಾರ್ಗದರ್ಶನ ನೀಡಿದರು. ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿಯ ಶಿಲಾಮಯ ದೇವಸ್ಥಾನದ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ಹೆಬ್ರಿ ಮಠದಬೆಟ್ಟು ರಾಜೇಶ ಆಚಾರ್ಯ ಲೀಲಾವತಿ ಆಚಾರ್ಯ ದಂಪತಿಗಳು ಪೂಜೆ ನೇರವೇರಿಸಿದರು. ತಂತ್ರತಿಗಳಾದ ವೇದಮೂರ್ತಿ ಉದ್ಯಾವರ ವಿಶ್ವನಾಥ ಪುರೋಹಿತ್, ವೇದಮೂರ್ತಿ ಕೇಶವ ಪುರೋಹಿತ್ ಮೂಡಬಿದರೆ ನೇತ್ರತ್ವದಲ್ಲಿ ನಾರಾಯಣ ಆಚಾರ್ಯ ಪೂರೋಹಿತ್, ವಿದ್ವಾನ್ ಚಂದ್ರಕಾಂತ್ ಶರ್ಮಾ ಹೆಬ್ರಿ, ರವೀಂದ್ರ ಪುರೋಹಿತ್ ಹೆಬ್ರಿ, ಸೀತಾರಾಮ ಪುರೋಹಿತ್ ಮಿಯ್ಯಾರು ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದರು. ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿಯ ಶಿಲಾಮಯ ದೇವಸ್ಥಾನ ಸಮಿತಿಯ ಗೌರವ ಪ್ರಧಾನ ಮಾರ್ಗದರ್ಶಕ ಕರುಣಾಕರ ಶೆಟ್ಟಿ ಕಜ್ಕೆ, ಸ್ವಾಗತ ಸಮಿತಿಯ ಅಧ್ಯಕ್ಷ ಕಜ್ಕೆ ಕಾಶಿನಾಥ ಶೆಣೈ, ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿಯ ಶಿಲಾಮಯ ದೇವಸ್ಥಾನ…












