Subscribe to Updates
Get the latest creative news from FooBar about art, design and business.
Author: admin
ಮಂಗಳೂರು, ಅ.07 : ಮಂಜುನಾಥ್ ಎಜುಕೇಷನ್ ಟ್ರಸ್ಟ್ ರಿ., ಎಸ್ ಕೆ ಮನ್ಸಿಪಲ್ ಎಂಪ್ಲಾಯಿಸ್ ಅಸೋಸಿಯೇಷನ್ ರಿ. ಮತ್ತು ಹೃದಯವಾಹಿನಿ ಕರ್ನಾಟಕ ಮಂಗಳೂರು ಇವರ ಸಂಯುಕ್ತ ಆಶಯದಲ್ಲಿ ಹೊರನಾಡ ಹಾಗೂ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನುನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅಗಸ್ಟ್.9ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಂಜುನಾಥ್ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ಟ್ರಸ್ಟಿ ಕೆ.ಪಿ.ಮಂಜುನಾಥ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಅನಿವಾಸಿ ಕನ್ನಡಿಗರ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಆಯ್ಕೆ ಕುರಿತು ನಡೆದ ಪದಾಧಿಕಾರಗಳ ಸಭೆಯಲ್ಲಿ ದುಬೈ ಅನಿವಾಸಿ ಕನ್ನಡಿಗ ಯಶಸ್ವಿ ಉದ್ಯಮಿ ಲೆ.ಜ. ಅಂಬಾಸಿಡರ್ ಡಾ. ಡೇವಿಡ್ ಫ್ರಾಂಕ್ ಫೆರ್ನಾಂಡಿಸ್ ಅವರನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು ಸಮ್ಮೆಳನದ ಅಂಗವಾಗಿ ಅ.9ರಂದು ಬೆ.8ಗಂಟೆಗೆ ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದೆ.10ಗಂಟೆಗೆ ಕಾರ್ಯಕ್ರಮದೆ ಉದ್ಘಾಟನೆ, ಬಳಿಕ ಗೌರವ ಪುರಸ್ಕಾರ, ಕವಿಗೋಷ್ಠಿ,ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ಎಸ್ ಕೆ ಮುನ್ಸಿಪಲ್ ಅಸೋಸಿಯೇಷನ್ ಅಧ್ಯಕ್ಷ ಬಾಲರಾಜ್, ಪೂರ್ವಾಧ್ಯಕ್ಷ ಶಿವರಾಜ್ ಪಾಂಡೇಶ್ವರ, ಕರ್ನಾಟಕ ಕಾರ್ಯ…
ಪಡುಬಿದ್ರೆ,ಅ.06 : ಭಂಟರ ಸಂಘ ಪಡುಬಿದ್ರೆ, ಬಂಟ್ಸ್ ವೆಲ್ವೇರ್ ಟ್ರಸ್ಟ್ ಪಡುಬಿದ್ರೆ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ವೇ ಟ್ರಸ್ಟ್ ಪಡುಬಿದ್ರೆ ಸಹಭಾಗಿತ್ವದಲ್ಲಿ ಸದಾನಂದ ಕುಡ್ಡು ಶೆಟ್ಟಿ ಹವಾನಿಯಂತ್ರಿತ ಸ್ವಂತ ಕಟ್ಟಡದಲ್ಲಿ ಸ್ಥಾಪಿಸಿರುವ ಸಿರಿಮುಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ನಿ) ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ರವಿವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಸಹಕಾರಿ ಸಂಸ್ಥೆಗಳು ಜನರ ಅಭಿವೃದ್ಧಿಗೆ ಸಹಕಾರಿಯಾಗಿವೆ.ಸಹಕಾರಿ ಸಂಸ್ಥೆಗಳು ಜನರಿಗೆ ಸರಳೀಕೃತವಾಗಿ ಸಾಲ ನೀಡುವ ವ್ಯವಸ್ಥೆಯಿರುವ ಸಂಸ್ಥೆಯಾಗಿದೆ ಎಂದರು. ಎಮ್.ಆರ್.ಜಿ.ಗ್ರೂಪ್ ಆಡಳಿತ ನಿರ್ದೇಶಕ ಕೆ.ಪ್ರಕಾಶ್ ಶೆಟ್ಟಿ ಅವರು ಸಿರಿಮುಡಿ ದತ್ತಿನಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪಡುಬಿದ್ರಿ ಬಂಟರ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು. ಪುಣೆ ಉದ್ಯಮಿ ಕಲಾಯಿಬೆಟ್ಟು ಶಂಕರಿ ನಿವಾಸದ ಸದಾನಂದ ಕೆ.ಶೆಟ್ಟಿಯವರು ಸದಾನಂದ ಕುಡ್ಡು ಶೆಟ್ಟಿ ಸಂಕೀರ್ಣ ಉದ್ಘಾಟಿಸಿದರು. ಅವರು ವಿವಿಧ ಫಲಾನುಭವಿಗಳಿಗೆ ಆರ್ಥಿಕ ಸಹಾಯ ನಿತರಿಸಿದರು. ಭದ್ರತಾ ಕೊಠಡಿಯನ್ನು ಕಾಪು ಶಾಸಕ…
ಮಂಗಳೂರು, ಅ.05 : ರಚನಾ ಕೆಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ವತಿಯಿಂದ ನಗರದ ಮಿಲಾಗ್ರಿಸ್ ಸಭಾ ಭವನದಲ್ಲಿ ರವಿವಾರ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಮಾತಾಡಿ, ರಚನಾ ಸಂಸ್ಥೆಯು ಅರ್ಹ ಸಾಧಕರನ್ನುಆಯ್ದುಕೊಂಡು ಗೌರವಿಸಿದೆ. ಬದುಕಿನಲ್ಲಿ ಏನಾದರೊಂದು ಸಾಧನೆ ಮಾಡಲು ಅನೇಕ ಮಂದಿ ಪ್ರಯತ್ನಿಸುತ್ತಾರೆ. ಆದರೆ ಅದು ಎಲ್ಲರಿಗೂ ಕೈಗೂಡುವುದಿಲ್ಲ. ಯಾರ ಪ್ರೋತ್ಸಾಹವೂ ಇಲ್ಲದೆ ಸ್ವತಃ ಶಕ್ತಿಮೀರಿ ಪ್ರಯತ್ನಿಸಿ ಸಾಧಿಸುವವರೂ ಇದ್ದಾರೆ. ಅಂತಹವರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬೆಂಗಳೂರಿನ ಆಸ್ಟಿನ್ ರೋಚ್(ಉದ್ಯಮಿ), ಮಾಜಿ ಶಾಸಕ ಜೆ.ಆರ್.ಲೋಬೋ(ವೃತ್ತಿಪರ), ಮಂಗಳೂರಿನ ಡಾ.ಗಾಲ್ವಿನ್ ರೊಡ್ರಿಗಸ್ ಬೆಳ್ಳಾಯಿ (ಕೃಷಿಕ), ದುಬೈಯ ಪ್ರತಾಪ್ ಮೆಂಡೋನ್ಸಾ (ಅನಿವಾಸಿ ಉದ್ಯಮಿ), ಶೋಭಾ ಮೆಂಡೊನ್ಸಾ (ಮಹಿಳಾ ಸಾಧಕಿ) ಅವರಿಗೆ 2025ನೇ ಸಾಲಿನ ರಚನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಂಗಳೂರು ಬಿಷಪ್ ಅ.ವಂ.ಡಾ. ಪೀಟರ್ ಪಾವ್ ಸಲ್ದಾನ್ಹಾ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಹಾಗೆನೇ ಕಾರ್ಯಕ್ರಮದಲ್ಲಿ ಮಾಜಿ ಶಾಸಕ…
ಬೆಂಗಳೂರು,ಅ.04 :: ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗವು ತನ್ನ ಮೊದಲ ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ) ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿತು. ಸಪ್ಟೆಂಬರ್ 29ರಂದು ನಡೆದ ಈ ಕಾರ್ಯಕ್ರಮದಲ್ಲಿ ಎಂಸಿಎ ಹಂತದ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಜಗತ್ತಿನ ಸಮಸ್ಯೆಗಳಿಗೆ ಪರಿಹಾರ ನೀಡುವ ನಾವೀನ್ಯಕಾರಿ ಐಒಟಿ ಯೋಜನೆಗಳನ್ನು ಪ್ರದರ್ಶಿಸಿದರು. ಶ್ರೀ ಮುನೀನ್ ಪಾಷಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ರೂಪಿಸಿದ ಈ ಯೋಜನೆಗಳು ದೈನಂದಿನ ಜೀವನದ ಅಡಚಣೆಗಳನ್ನು ತೊಡೆದುಹಾಕಲು ಸ್ಮಾರ್ಟ್ ಪರಿಹಾರಗಳನ್ನು ನೀಡಿದವು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಭವಿಷ್ಯದ ಬೆಳವಣಿಗೆಗಳಿಗೆ ಸ್ಫೂರ್ತಿ ಪಡೆಯಲು ಎಂಸಿಎ ಹಂತದ ಪ್ರಥಮ ವರ್ಷದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಹಾಜರಿದ್ದ ಪ್ರೇಕ್ಷಕರು ವಿದ್ಯಾರ್ಥಿ ತಂಡಗಳೊಂದಿಗೆ ನೇರವಾಗಿ ಸಂವಾದ ನಡೆಸಿದರು ಮತ್ತು ಯೋಜನೆಗಳ ಕಾರ್ಯನಿರ್ವಹಣೆಯನ್ನು ಲೈವ್ ಪ್ರದರ್ಶನಗಳ ಮೂಲಕ ನೇರವಾಗಿ ಅನುಭವಿಸಿದರು. ಈ ಪ್ರದರ್ಶನದ ಮೂಲಕ ಐಒಟಿ ತಂತ್ರಜ್ಞಾನದ ಸೃಜನಾತ್ಮಕ ಮತ್ತು ಪ್ರಾಯೋಗಿಕ ಬಳಕೆಯನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಪ್ರೋಟೋಟೈಪ್ಗಳನ್ನು ಕಾರ್ಯರೂಪದಲ್ಲಿ ನೋಡುವ ಮತ್ತು ಅವುಗಳ…
ಮಂಗಳೂರು, ಅ.03 : :ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.22ರಂದು ನವರಾತ್ರಿಯ ಮಂಗಳೂರು ದಸರಾ ಆರಂಭಗೊಂಡಿದ್ದು, ಸೆ.2, ಗುರುವಾರ 4 ಗಂಟೆಗೆ ಕುದ್ರೋಳಿ ಶ್ರೀ ಕ್ಷೇತ್ರದಲ್ಲಿ ಶೋಭಾಯಾತ್ರೆಗೆ ಚಾಲನೆ ದೊರೆಯಿತು. ಶೋಭಾಯಾತ್ರೆಗೆ ಕೇಂದ್ರದ ಮಾಜಿ ವಿತ್ತ ಸಚಿವ ಕುದ್ರೋಳಿ ಶ್ರೀ ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ದನ ಪೂಜಾರಿಯವರ ಅವರ ಮಾರ್ಗದರ್ಶನದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು, ಶೋಭಾಯಾತ್ರೆಯು ಕ್ಷೇತ್ರದಿಂದ ಹೊರಟು ನಗರ ಪ್ರದಕ್ಷಿಣೆ ಯ ಬಳಿಕ ಚಿತ್ರಾ ಟಾಕೀಸ್ ಅಳಕೆಯಾಗಿ ಮತ್ತೆ ಶ್ರೀಕ್ಷೇತ್ರಕ್ಕೆ ಬಂದು ವಿಸರ್ಜನೆಗೊಂಡಿತು. ಕುದ್ರೋಳಿ ಕ್ಷೇತ್ರದಲ್ಲಿ ಪೂಜೆಗೊಂಡ ಗಣಪತಿ, ಆದಿಶಕ್ತಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಿನಿ, ಸ್ಕಂದಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ದಿಧಾತ್ರಿ ಮೂರ್ತಿಗಳು ನಗರದ ಬೀದಿಗಳಲ್ಲಿ ವಿದ್ಯುದ್ದೀಪಾಲಂಕೃತ ವಾಹನಗಳಲ್ಲಿ ಸಾಲಾಗಿ ಸಾಗಿತು. ವಿವಿಧ ಸ್ತಬ್ಧಚಿತ್ರಗಳು, ಹುಲಿವೇಷ ಕುಣಿತ ಟ್ರಕ್ಗಳು ಮೆರವಣಿಗೆಗೆ ಮೆರುಗು ತುಂಬಿದವು. ಇಂದು ಬೆಳಿಗ್ಗೆ 6.30ರ ಸುಮಾರಿಗೆ ಜಲಸ್ತಂಭನಗೊಳಿಸಲಾಯಿತು. ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಂದಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರಾಡಳಿತ ಮಂಡಳಿಯ ಅದ್ಯಕ್ಷರಾದ ಜೈರಾಜ್…
ಮನಿಲಾ, ಅ.02 : ಮಧ್ಯ ಫಿಲಿಪಿನ್ಸ್ ಪ್ರಾಂತ್ಯದಲ್ಲಿ ಮಂಗಳವಾರ ತಡರಾತ್ರಿ 6.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ ಕನಿಷ್ಠ 31 ಜನರು ಮೃತಪಟ್ಟಿದ್ದಾರೆ. ಹಲವಾರು ಮನೆಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಐದು ಕಿಲೋಮೀಟರ್ ಆಳದಲ್ಲಿ ಭೂಕಂಪವಾಗಿದೆ.ತೀವ್ರ ಕಂಪನದಿಂದಾಗಿ ವಿದ್ಯುತ್ ಕಡಿತಗೊಂಡು, ನಿವಾಸಿಗಳು ಕತ್ತಲೆಯಲ್ಲೇ ಕಾಲ ಕಳೆಯುವಂತಾಗಿದೆ. ಸೆಬು ಪ್ರಾಂತ್ಯದಲ್ಲಿ ಸುಮಾರು 90,000 ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ನಗರವಾದ ಬೊಗೊದಿಂದ ಸುಮಾರು 19 ಕಿಲೋಮೀಟರ್ ಈಶಾನ್ಯಕ್ಕೆ ಇದರ ಪರಿಣಾಮ ತಟ್ಟಿದೆ. ಭೂಕಂಪದಿಂದಾಗಿ ಸಂಭವಿಸಿದ ಭೂಕುಸಿತದಿಂದಾಗಿ ಅನೇಕರು ಅವಶೇಷಗಳಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬೊಗೊದಲ್ಲಿ ಕನಿಷ್ಠ 14 ನಿವಾಸಿಗಳು ಮೃತಪಟ್ಟಿದ್ದಾರೆ. ಬೊಗೊ ಬಳಿಯ ಮೆಡೆಲಿನ್ ಪಟ್ಟಣದಲ್ಲಿ ಮನೆಗಳ ಛಾವಣಿಗಳು ಮತ್ತು ಗೋಡೆಗಳು ಬಿದ್ದು 12 ಮಂದಿ ಸಾವನ್ನಪ್ಪಿದ್ದಾರೆ. ಕೆಲವರು ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಮಂಗಳೂರು ,ಅ.01 : : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕುಡ್ಲದ ಪಿಲಿಪರ್ಬ 2025 – 4 ನೇ ಆವೃತ್ತಿ ಕಾರ್ಯಕ್ರಮ ನಗರದ ಕೇಂದ್ರ ಮೈದಾನದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಅವರು ಇತರ ಗಣ್ಯರ ಉಪಸ್ಥಿತಿಯಲ್ಲಿ ಚಾಲನೆ ನೀಡಿದರು. ನಂತರ ಮಾತಾಡಿದ ಅವರು. ತುಳುನಾಡಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಸಾಂಪ್ರದಾಯಿಕ ಕಲೆಯಾಗಿರುವ ಹುಲಿವೇಷ ಸ್ಪರ್ಧಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ನಮ್ಮಸಂಸ್ಕೃತಿಯ ಭಾಗವಾದ ಪಿಲಿ ಪರ್ಬ ದಲ್ಲಿ ಯುವ ಜನಾಂಗ ಹೆಚ್ಚು ಆಸಕ್ತಿ ವಹಿಸಿ ಭಾಗವಹಿಸುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು. ಶಾಸಕ ವೇದವ್ಯಾಸ ಕಾಮತ್ ಪ್ರಸ್ತಾವಿಕ ಮಾತುಗಳನ್ನಾಡುತ್ತಾ,ನಾಲ್ಕನೇ ವರ್ಷದ ಪಿಲಿ ಪರ್ಬಕ್ಕೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆಗಳು ಎಂದರು. ಸಮಾರಂಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಉದ್ಯಮಿ ವಿಠಲ್, ಡಾ.ಅಣ್ಣಯ್ಯ ಕುಲಾಲ್,ಸಂಜಯ ಪ್ರಭು,ಸಂಘಟಕರಾದ ಗಿರಿಧರ ಶೆಟ್ಟಿ, ಯತೀಶ್ ಬೈಕಂಪಾಡಿ, ದಿವಾಕರ್, ,ನರೇಶ್ ಶೆಣೈ, ನರೇಶ್ ಪ್ರಭು,ಕಿರಣ್…
ಮಂಗಳೂರು, ಸೆ. 30 : ರೋಹನ್ ಕಾರ್ಪೊರೇಶನ್ ವತಿಯಿಂದ ಮಂಗಳೂರು ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯ ಉದ್ದೇಶದಿಂದ ಸೆ. 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಂಡಿತು. ಈ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀರವಿಚಂದ್ರ ನಾಯಕ್ ಉಪಸ್ಥಿತರಿದ್ದರು. ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಕಾರ್ಮಿಕರಿಗೆ ಪಾದರಕ್ಷೆಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಅವರು ಮಾತನಾಡಿ, ಪೌರ ಕಾರ್ಮಿಕರು ನಮ್ಮ ಸಮಾಜದ ಬೆನ್ನೆಲುಬು. ಅವರ ಶ್ರಮದಿಂದಲೇ ನಗರ ಸ್ವಚ್ಛವಾಗಿರುತ್ತದೆ. ಅವರ ಸುರಕ್ಷತೆಗಾಗಿ ನಾವು ಕೈಗೊಂಡಿರುವ ಈ ಉಪಕ್ರಮ ನಮ್ಮ ಸಾಮಾಜಿಕ ಜವಾಬ್ದಾರಿಯ ಭಾಗವಾಗಿದೆ ಎಂದು ಹೇಳಿದರು. ಪೌರ ಕಾರ್ಮಿಕರ ಸುರಕ್ಷತೆಯ ಕಡೆ ಗಮನ ಹರಿಸಿರುವ ರೋಹನ್ ಕಾರ್ಪೊರೇಶನ್ ನ ಸಮಾಜಮುಖಿ ಕಾರ್ಯವನ್ನು ಮೆಚ್ಚಿ, ಮುಂದೆಯೂ ಇಂತಹ ಸಮಾಜಮುಖಿ…
ಮಂಗಳೂರು, ಸೆ. 30 : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಚಾರಣೆಯನ್ನು ಅ.8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರ ರಜಾಕಾಲದ ನ್ಯಾಯಪೀಠದ ಮಂಗಳವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶ ಜಾರಿಗೆ ಅ. 8ರ ವರೆಗೆ ಮಧ್ಯಂತರ ತಡೆ ನೀಡಿತು. ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು
ಮಂಗಳೂರು, ಸೆ.29 ; ಪಿಲಿನಲಿಕೆ ಪ್ರತಿಷ್ಠಾನದ ವತಿಯಿಂದ ನಡೆಯಲಿರುವ ಪಿಲಿನಲಿಕೆ ಪಂಥಕ್ಕೆ ಹತ್ತನೇ ವರ್ಷದ ಸಂಭ್ರಮ. ಅ.1ರಂದು ನಡೆಯಲಿರುವ ಪಿಲಿನಲಿಕೆ ಪಂಥ-10 ಕ್ಕೆ ಕರಾವಳಿ ಉತ್ಸವ ಮೈದಾನ ಸಜ್ಜುಗೊಳ್ಳುತ್ತಿದೆ. ಈ ಪಿಲಿನಲಿಕೆ ಕಾರ್ಯಕ್ರಮದಲ್ಲಿ ಸಿನಿಮಾ, ಕ್ರಿಕೆಟ್ ತಾರೆಯರು ಭಾಗಿಯಾಗಲಿದ್ದಾರೆ. ಎಂದು ಪಿಲಿನಲಿಕೆ ಪ್ರತಿಷ್ಠಾನದ ಸಂಸ್ಥಾಪಕ ಎಂ. ಮಿಥುನ್ ರೈ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಆ.1ರಂದು ಬೆಳಗ್ಗೆ 10ಗಂಟೆಗೆ ಆರಂಭವಾಗುವ ಸ್ಪರ್ಧೆ ರಾತ್ರಿ 10ರವರೆಗೆ ನಡೆಯಲಿದೆ. ಪಿಲಿನಲಿಕೆಯಲ್ಲಿ ಭಾಗವಹಿಸುವ ಪ್ರತಿಯೊಂದು ತಂಡಗಳಿಗೂ 20 ನಿಮಿಷ ಕಾಲಾವಕಾಶ ನೀಡಲಾಗುವುದು. ಈ ಬಾರಿ 10ತಂಡಗಳನ್ನು ಪಿಲಿನಲಿಕೆ -10ಕ್ಕೆ ಆಯ್ಕೆ ಮಾಡಲಾಗಿದೆ. ಪಿಲಿನಲಿಕೆ ಪಂಥ ಸ್ಪರ್ಧೆಯಲ್ಲಿಅಗಸ್ಯ ಮಂಗಳೂರು, ಶ್ರೀ ವೈದ್ಯನಾಥೇಶ್ವರ ಫ್ರೆಂಡ್ಸ್ ಟೈಗರ್. ಮುಳಿಹಿತ್ತು ಗೇಮ್ಸ್ ಟೀಮ್, ಅನಿಲ್ ಕಡಂಬೆಟ್ಟು, ಜೂನಿಯರ್ ಬಾಯ್ಸ್ ಚಿಲಿಂಬಿ, ಎಮ್ಮೆಕೆರೆ ಫ್ರೆಂಡ್ಸ್ ಸರ್ಕಲ್, ಟ್ಯಾಲೆಂಟ್ ಟೈಗರ್ಸ್ ತುಳುನಾಡು, ಸೋಮೇಶ್ವರ ಫ್ರೆಂಡ್ಸ್ ಪೊಳಲಿ ಟೈಗರ್ಸ್, ಗೋಕರ್ಣ ನಾಥ ಹುಲಿ ತಂಡಗಳು ಭಾಗವಹಿಸಲಿವೆ ಎಂದರು. ಕಾರ್ಯಕ್ರಮವನ್ನು ರಾಜ್ಯದ…












