Subscribe to Updates
Get the latest creative news from FooBar about art, design and business.
Author: admin
ಬೆಂಗಳೂರು,ಫೆ.15 : ಕಲರ್ಸ್ ಕನ್ನಡ ಟಿವಿ ಚಾನೆಲ್ ಎರಡು ಹೊಸ ರಿಯಾಲಿಟಿ ಶೋಗಳನ್ನು ಶುರುಮಾಡುತ್ತಿದೆ. ‘ಬಾಯ್ಸ್ V/S ಗರ್ಲ್ಸ್’ ಎಂಬ ಗೇಮ್ ಶೋ ಮತ್ತು ನಕ್ಕು ನಗಿಸುವ ‘ಮಜಾ ಟಾಕೀಸ್’ ಶೋಗಳು ಫೆಬ್ರವರಿ 1ರಿಂದ ಪ್ರಸಾರ ಆರಂಭಿಸಲಿವೆ. ಪ್ರತಿ ಶನಿವಾರ ಮತ್ತು ಭಾನುವಾರ ಏಳೂವರೆಗೆ ‘ಬಾಯ್ಸ್ V/S ಗರ್ಲ್ಸ್’ ಹಾಗೂ 9 ಗಂಟೆಗೆ ʼಮಜಾ ಟಾಕೀಸ್ʼ ಕಾರ್ಯಕ್ರಮಗಳು ನಿಮ್ಮನ್ನು ರಂಜಿಸಲಿವೆ. ಬಾಯ್ಸ್ V/S ಗರ್ಲ್ಸ್ :- ಹೊಸ ರೀತಿಯ ರಿಯಾಲಿಟಿ ಶೋಗಳಿಗೆ ಹೆಸರಾಗಿರುವ ಕಲರ್ಸ್ ಕನ್ನಡ ಶುರುಮಾಡುತ್ತಿರುವ ‘ಬಾಯ್ಸ್ V/S ಗರ್ಲ್ಸ್’ ಕನ್ನಡ ಕಿರುತೆರೆಗೆ ಹೊಸದೆನಿಸುವ ಥ್ರಿಲ್ ಅನ್ನು ಹೊತ್ತು ತರಲಿದೆ. ಬಾಯ್ಸ್ ತಂಡವನ್ನು ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮುನ್ನಡೆಸಿದರೆ, ಹುಡುಗಿಯರ ಗುಂಪಿನ ನಾಯಕಿ ನಟಿ ಶುಭಾ ಪೂಂಜಾ. ಇನ್ನು ಸ್ಪರ್ಧಿಗಳ ಪಟ್ಟಿಯೂ ಅಷ್ಟೇ ರೋಚಕವಾಗಿದೆ. ಈಗಷ್ಟೇ ಬಿಗ್ ಬಾಸ್ ಗೆದ್ದಿರುವ ಹನುಮಂತ ಲಮಾಣಿ, ಬಿಗ್ ಬಾಸ್ ಧನರಾಜ್ ಆಚಾರ್, ಐಶ್ವರ್ಯಾ ಶಿಂದೊಗಿ, ಶೋಭಾ ಶೆಟ್ಟಿ, ಚೈತ್ರಾ ಕುಂದಾಪುರ…
ಬೆಂಗಳೂರು, ಫೆ.14 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ 2024-25ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ವಿಶ್ರಾಂತ ಕುಲಪತಿ, ಜಾನಪದ ವಿದ್ವಾಂಸ, ಡಾ. ಬಿ.ಎ. ವಿವೇಕ ರೈ ಆಯ್ಕೆಯಾಗಿದ್ದಾರೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ವಿಭಾಗದಲ್ಲಿ ಕುಂ. ವೀರಭದ್ರಪ್ಪ ಅಧ್ಯಕ್ಷರಾಗಿರುವ ಆಯ್ಕೆ ಸಮಿತಿಯು ಡಾ. ಬಿ.ಎ. ವಿವೇಕ ರೈಯವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು ಐದು ಲಕ್ಷ ರೂ. ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಡಾ. ಬಿ.ಎ. ವಿವೇಕ ರೈ ಮೂಲತಃ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಅಗ್ರಾಳದವರು. ಇವರು ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ, ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಜರ್ಮನಿಯ ವ್ಯೂತ್ ಬರ್ಗ್ ವಿಶ್ವವಿದ್ಯಾನಿಲಯದ ಅತಿಥಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರಿಗೆ ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಗೌರವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ, ಸಮ್ಮಾನಗಳು…
ಮಂಗಳೂರು, ಫೆ.13 : ನಗರ ಸಂಚಾರ ಪೊಲೀಸ್ ಮತ್ತು ಸಾರಿಗೆ ಇಲಾಖೆಯ ವತಿಯಿಂದ ಫಿಜಾ ಬೈ ನೆಕ್ಸಸ್ ಮಾಲ್ನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ -2025 ಗುರುವಾರ, ಫೆ. 13 ರಂದು ನಡೆಯಿತು. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಉದ್ಘಾಟಿಸಿ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್ ಅವರು, ಪ್ರತಿ ವರ್ಷ ರಸ್ತೆ ಸುರಕ್ಷತಾ ಮಾಸಾಚರಣೆ ಮಾಡಲಾಗುತ್ತದೆ. ರಸ್ತೆ ಅಪಘಾತದಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ರಸ್ತೆ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿಯನ್ನು ಈ ಸಂದರ್ಭದಲ್ಲಿ ನೀಡಲಾಗುತ್ತದೆ. ವಾಹನ ಚಲಾಯಿಸುವಾಗ ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಅಪಘಾತವನ್ನು ಕಡಿಮೆ ಮಾಡಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅರವಿಂದ್ ಬೋಳಾರ್ ಅವರು, ಹೆಚ್ಚಿನ ರಸ್ತೆ ಅಪಘಾತಗಳು ವಾಹನ ಚಾಲಕರ ನಿರ್ಲಕ್ಷ್ಯದಿಂದ ಸಂಭವಿಸುತ್ತವೆ. ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಅಪಘಾತವನ್ನು ತಪ್ಪಿಸಬಹುದು ಎಂದು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದಲ್ಲಿ ಡಿಸಿಪಿ (ಅಪರಾಧ ಮತ್ತು ಸಂಚಾರ) ರವಿಶಂಕರ್, ಡಿಸಿಪಿ ಸಿದ್ಧಾರ್ಥ್ ಗೋಯಲ್,…
ಮಂಗಳೂರು, ಫೆ.12 : ಆಕಾಶ್ ಎಜುಕೇಷನ್ ಸರ್ವಿಸ್ ಲಿಮಿಟೆಡ್ನಲ್ಲಿ ತರಬೇತಿ ಪಡೆದ ನಾಲ್ವರು ವಿದ್ಯಾರ್ಥಿಗಳು 2025ರ ಜೆಇಇ ಮೇನ್ಸ್ (ಸೆಷನ್ 1) ನಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಪೈಕಿ ಅನಿಕೇತಿ ಡಿ.ಶೆಟ್ಟಿ ಮತ್ತು ವಿಟ್ಟಲ್ ದಾಸ್ ಎ. ಇಬ್ಬರೂ 99.90 ಪರ್ಸೆಂಟೈಲ್ ಗಳಿಸಿದರೆ, ರೇಮಂಡ್ ಎಲಿಜಾ ಪಿಂಟೊ 99.62 ಪರ್ಸೆಂಟ್ ಮತ್ತು ಆಯುಷಿ ನಾಯಕ್ 99.34 ಪರ್ಸೆಂಟ್ ಗಳಿಸಿದ್ದಾರೆ. ವಿದ್ಯಾರ್ಥಿಗಳು ಶೇಕಡ 99ಕ್ಕಿಂತ ಹೆಚ್ಚು ಅಂಕ ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ. ಈ ಫಲಿತಾಂಶಗಳು ವಿದ್ಯಾರ್ಥಿಗಳ ಶೈಕ್ಷಣಿಕ ಉತ್ಕೃಷ್ಟತೆಯನ್ನು ಪ್ರತಿಬಿಂಬಿಸುತ್ತವೆ. ಸವಾಲಿನ ಪರೀಕ್ಷೆಯಲ್ಲಿ ದೊರೆತ ಯಶಸ್ಸು ಇದಾಗಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ಟಿಎ) ನಿನ್ನೆ ಈ ಫಲಿತಾಂಶಗಳನ್ನು ಪ್ರಕಟಿಸಿದೆ ಎಂದು ಆಕಾಶ್ ಎಜುಕೇಶನ್ ಸರ್ವಿಸಸ್ ಲಿಮಿಟೆಡ್ನ ಮುಖ್ಯ ಅಕಾಡೆಮಿ ಮತ್ತು ಬ್ಯುಸಿನೆಸ್ ಆಫೀಸರ್ ಶ್ರೀಧೀರ್ ಕುಮಾರ್ ಮಿಶ್ರಾ ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಅವರು , ನಮ್ಮ ವಿದ್ಯಾರ್ಥಿಗಳು ಜೆಇಇ ಮೇನ್ಸ್ 2025 ಪರೀಕ್ಷೆಯಲ್ಲಿ…
ಮಂಗಳೂರು,ಫೆ. 11 :ನಗರದ ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕರ ನಿಧಿಯಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ 41ನೇ ಸೆಂಟ್ರಲ್ ವಾರ್ಡಿನ ವ್ಯಾಪ್ತಿಯ ಈ ಆಟೋ ಪಾರ್ಕ್ ಜಿಲ್ಲೆಯ ಅತೀ ಹಳೆಯ ನಿಲ್ದಾಣಗಳಲ್ಲಿ ಒಂದಾಗಿದೆ. ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ ಕಾಳಜಿ ಹೊಂದಿರುತ್ತಾರೆ. ತಾವು ಬಿಸಿಲಲ್ಲಿದ್ದರೂ ತಮ್ಮ ಆಟೋಗಳು ನೆರಳಲ್ಲಿ ಇರಬೇಕು ಎಂದು ಬಯಸುವ ಅವರ ಪಾಲಿಗೆ ಈ ಮೇಲ್ಛಾವಣಿಯ ಅಭಿವೃದ್ಧಿಯು ಸಹಜವಾಗಿ ಸಂತಸ ಮೂಡಿಸಿರುತ್ತದೆ ಎಂದರು. ಈ ಸಂದರ್ಭದಲ್ಲಿ ಮ.ನ.ಪಾ ಸದಸ್ಯೆ ಪೂರ್ಣಿಮಾ, ಬಿಜೆಪಿ ಪ್ರಮುಖರಾದ ರಮೇಶ್ ಹೆಗ್ಡೆ, ಪೂರ್ಣಿಮಾ ರಾವ್, ಭಾಸ್ಕರ ಚಂದ್ರ ಶೆಟ್ಟಿ, ಸೇರಿದಂತೆ ಶೆಟ್ಟಿ ರಿಕ್ಷಾ ಪಾರ್ಕ್ ಎಸೋಸಿಯೇಶನ್ ನ ಅನೇಕರು ಉಪಸ್ಥಿತರಿದ್ದರು.
ಮಂಗಳೂರು, ಫೆ. 10 : ಕೇಂದ್ರ ಸರಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ‘ಮಿಷನ್ ಉತ್ವಾನ್’ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳ ಸಹಯೋಗದಲ್ಲಿ 8 ‘ಇನ್ ಕ್ಯುಬೇಷನ್ ಸೆಂಟರ್’ಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಈ ಯೋಜನೆಯನ್ನು ದಕ್ಷಿಣದ ರಾಜ್ಯಗಳಲ್ಲಿ ಮುನ್ನಡೆಸಲಿರುವ ‘ಸೆಕ್ಷನ್ ಇನ್ಫಿನ್-8 ಫೌಂಡೇಶನ್’ನ ಸ್ಥಾಪಕ ನಿರ್ದೇಶಕ ವಿಶ್ವಾಸ್ ಯು.ಎಸ್. ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ, ಉದ್ಯಮ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಉದ್ಯಮಿಶೀಲತೆಗೆ ಸಂಬಂಧಿಸಿದಂತೆ ಸಂಶೋಧನೆ ಪ್ರೋತ್ಸಾಹಿಸುವುದು ಮಿಷನ್ ಉತ್ಪಾನ್ ಯೋಜನೆಯ ಮುಖ್ಯ ಉದ್ದೇಶ ವಾಗಿದೆ. ಗ್ರಾಮೀಣ ಕೇಂದ್ರಿತ ಸೆಂಟರ್ಗಳನ್ನು ಸ್ಥಾಪಿಸುವುದು ಉದ್ಯಮಶೀಲತೆಯ ಸಂಶೋಧನೆ, ಆರ್ಥಿಕ ಸಬಲೀಕರಣಕ್ಕಾಗಿ ಈ ‘ಇನ್ಕ್ಯುಬೇಷನ್ ಸೆಂಟರ್’ಗಳನ್ನು ಆರಂಭಿಸಲಾಗುವುದು. ಇದಕ್ಕಾಗಿ ಐಐಟಿಯಿಂದ ಉಚಿತವಾಗಿ ತಾಂತ್ರಿಕ ಸೇವೆಯನ್ನು ಪಡೆದುಕೊಳ್ಳಲಾಗುವುದು ಎಂದರು. ಮಿಷನ್ ಉತ್ಪಾನ್ ಯೋಜನೆಯ ಅನುಷ್ಠಾನ ಕುರಿತಂತೆ ಮಂಗಳೂರಿನ ಕೆನರಾ ಎಂಜಿನಿಯರಿಂಗ್ ಕಾಲೇಜು, ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು ಮತ್ತು ಉಡುಪಿಯ ಮಧ್ಯ ವಾದಿರಾಜ…
ಪುತ್ತೂರು, ಫೆ.10 : ಕಾರು ಹಾಗೂ ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಯಲ್ಲಿ ಫೆ.8 ರಂದು ನಡೆದಿದೆ. ಮೃತರನ್ನು ಶಿರಾಡಿ ಗ್ರಾಮದ ಮಿತ್ತನಾಜೆ ಕೊಟ್ಟಾಯಿಲ್ ನಿವಾಸಿ ಕೆ.ಜೆ.ಜಾನ್ (59) ಎಂದು ಗುರುತಿಸಲಾಗಿದೆ. ಶಿರಾಡಿ ಪೇಟೆಗೆ ಬಂದಿದ್ದ ಜಾನ್ ಅವರು ಮನೆಗೆ ಹಿಂತಿರುಗುತ್ತಿದ್ದ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರು ಹಿಂದಿನಿಂದ ಢಿಕ್ಕಿ ಹೊಡೆದಿದ್ದು,ಗಂಭೀರ ಗಾಯಗೊಂಡಿದ್ದ ಜಾನ್ ಅವರನ್ನು ನೆಲ್ಯಾಡಿಯ ಆಸ್ಪತ್ರೆಗೆ ಕರೆದೊಯ್ಯಲಾ ಯಿತಾದರೂ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಂಗಳೂರು,ಫೆ. 9 : ಬಲ್ಯಾಯ ಯಾನೆ ಕಣಿಶನ್ ಮಹಾಜನ ಸಂಘ ಮತ್ತು ಯುವವೇದಿಕೆ ಹಾಗೂ ಮಹಿಳಾವೇದಿಕೆ ಸಹಯೋಗದೊಂದಿಗೆ 70ನೇ ವರ್ಷದ ಸವಿನೆನಪಿನ ಸಮುದಾಯ ಸಂಭ್ರಮ 2025 ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಫೆ. 9 ಭಾನುವಾರ ಜರಗಿತು. ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದ ಅತಿಥಿ ಮಂಗಳೂರು ಮಹಾನಗರಪಾಲಿಕೆಯ ನಗರ ಯೋಜನಾಭಿವೃದ್ಧಿ ಸ್ಥಾಯಿ ಸಮಿತಿಯ ಅಧ್ಯಕ್ಷರು ವೀಣಾ ಮಂಗಳ ಅವರು ಮಾತಾನಾಡಿ ಬಲ್ಯಾಯ ಯಾನೆ ಕಣಿಶನ್ ಮಹಾಜನ ಸಂಘದಿಂದ ನಡೆಯುವ ಸೇವಾ ಕಾರ್ಯಕ್ಕೆ ಶ್ಲಾಘನೀಯ. ಈ ಸಂಘದ ಮೂಲಕ ಇನ್ನೂ ಹೆಚ್ಚು ಸಾಮಾಜಿಕ ಸೇವಾ ಕಾರ್ಯಗಳು ನಡೆಯಲಿ ಎಂದರು. ಮಂಗಳೂರು ಹಸಿರು ದಳ ಇದರ ಸಂಚಾಲಕರು ನಾಗರಾಜ್ ಬಜಾಲ್ ಮಾತಾನಾಡಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡುವುದರಿಂದ ಸ್ವಚ್ಚ ಮತ್ತು ಸ್ವಸ್ತ ಸಮಾಜ ನಿರ್ಮಾಣ ಸಾದ್ಯ ಎಂದರು. ಕಾಸರಗೋಡು ಕೇರಳ ರಾಜ್ಯ ಸರಕು ಮತ್ತು ಸೇವಾ ತೆರಿಗೆ ಅಸ್ಟೆಂಟ್ ಕಮಿಷನರ್ ರಾಜೇಂದ್ರ ಕುಂಟಾರು ಮಾತಾನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಂಗಳೂರು ಬಲ್ಯಾಯ ಯಾನೆ ಕಣಿಶನ್…
ಜಪ್ಪಿನಮೊಗರು, ಫೆ. 9 : ಜಯ್ – ವಿಜಯ್ ಜೋಡುಕರೆ ಕಂಬಳ ಸಮಿತಿ ವತಿಯಿಂದ ಕೀರ್ತಿಶೇಷ ಜೆ.ಜಯಗಂಗಾಧರ ಶೆಟ್ಟಿ ಮಗ್ಗುತೋಟಗುತ್ತು ಹಾಗೂ ನಾಡಾಜೆ ಗುತ್ತು ಸ್ಮರಣಾರ್ಥ 15ನೇ ವರ್ಷದ ಹೊನಲು ಬೆಳಕಿನ ಜಯ – ವಿಜಯ ಜೋಡುಕರೆ ಕಂಬಳಕ್ಕೆ ಜಪ್ಪಿನಮೊಗರು ನೇತ್ರಾವತಿ ತೀರದಲ್ಲಿ ಶನಿವಾರ ಚಾಲನೆ ದೊರೆಯಿತು. ವೇ। ಮೂ। ಬ್ರಹ್ಮಶ್ರೀ ವಿಟ್ಠಲದಾಸ ತಂತ್ರಿ ದೇರೆಬೈಲು ಅವರು ಕಂಬಳ ಉದ್ಘಾಟಿಸಿದರು. ಕಂಬಳ, ಸಮಿತಿ ಗೌರವಾಧ್ಯಕ್ಷ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ರಾಜ್ಯ ಸರಕಾರದ 5 ಲಕ್ಷ ರೂ. ಮಾತ್ರವಲ್ಲದೆ, ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಕಂಬಳಕ್ಕೆ ಪಾಲಿಕೆಯಿಂದ ಆರ್ಥಿಕ ನೆರವು ನೀಡಲಾಗುತ್ತಿದೆ.ಜಾನಪದ ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಎಸ್.ಗಣೇಶ್ ರಾವ್ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಕಂರ್ಭಿಸ್ಥಾನ ಶ್ರೀ ವೈದ್ಯನಾಥ ದೈವಸ್ಥಾನ ಆಡಳಿತ ಮೊಕ್ತಸರ ಜೆ, ಅನಿಲ್ ಶೆಟ್ಟಿ ಮನುತೋಟಗುತ್ತು, ಪ್ರಮುಖರಾದ ಮಂಜುನಾಥ ಭಂಡಾರಿ ಮೂಡುಶೆಡ್ಡೆ ಜಪ್ಪುಗುಡ್ಡೆ…
ಬಂಟ್ವಾಳ, ಫೆ.08 : ಫ್ಯಾನ್ ರಿಪೇರಿ ಮಾಡುತ್ತಿದ್ದ ಸಂದರ್ಭ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಘಟನೆ ನಡೆದಿದೆ. ಮೃತರನ್ನುಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಎಂದು ಗುರುತಿಸಲಾಗಿದೆ. ಮಾರ್ನಬೈಲು ರಾಜೇಶ್ ನ ತಂಗಿ ಮನೆಯಲ್ಲಿ ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ರಾಜೇಶ್ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.