Subscribe to Updates
Get the latest creative news from FooBar about art, design and business.
Author: admin
ಬಂಟ್ವಾಳ : ಕಾಂಗ್ರೆಸ್ ಅಭ್ಯರ್ಥಿ, ಮಾಜಿಸಚಿವ ಬಿ.ರಮಾನಾಥ ರೈ ಅವರ ಚುನಾವಣಾ ಪ್ರಚಾರದ ಭಾಗವಾಗಿ ಸೋಮವಾರ ಸಂಜೆ ರೋಡ್ ಶೋ ಜರಗಿತು. ಸ್ಟಾರ್ ಪ್ರಚಾರಕರಿಲ್ಲದ ರೋಡ್ ಶೋನಲ್ಲಿ ಹೆಚ್ಚಿನ ಜನ ಸೇರಿದ್ದರು. ಬಂಟ್ವಾಳದ ಕೇಂದ್ರ ಸ್ಥಾನ ಬಿ.ಸಿ.ರೋಡ್ ನಲ್ಲಿ ಕೇಸರಿ, ಬಿಳಿ, ಹಸಿರು ಬಣ್ಣದ ಕಾಂಗ್ರೆಸ್ನ ತ್ರಿವರ್ಣ ಧ್ವಜಗಳನ್ನು ಹಿಡಿದ ಕಾರ್ಯಕರ್ತರು, ರೈಯವರ ಅಭಿಮಾನಿಗಳು ಮುಖ್ಯರಸ್ತೆಯಲ್ಲಿ ಹೆಜ್ಜೆ ಹಾಕಿದರು. ಪೊಳಲಿ ದ್ವಾರದ ಕೈಕಂಬ ಬಳಿ ಹಾಕಿದ್ದ ವೇದಿಕೆಯಲ್ಲಿ ಕೊನೆಯ ಚುನಾವಣಾ ಪ್ರಚಾರಸಭೆ ನಡೆಯಿತು. ಐಶಾರಾಮಿ ಜೀವನ ನಡೆಸುವ ಆಸೆಯಿಂದ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಿಲ್ಲ. ಕ್ಷೇತ್ರದಲ್ಲಿ ಆರು ಬಾರಿ ಗೆಲ್ಲಿಸಿ ಶಾಸಕ, ಸಚಿವನನ್ನಾಗಿ ಮಾಡಿದ್ದೀರಿ. ಮತ್ತೆ 9ನೇ ಬಾರಿಗೆ ಸ್ಪರ್ಧಿಸುವ ಅವಕಾಶವನ್ನು ನೀಡಿದ್ದೀರಿ. ಈ ಋಣವನ್ನು ನಾನು ನನ್ನ ಜನ್ಮಜನ್ಮಾಂತರಕ್ಕೂ ಮರೆಯಲು ಸಾಧ್ಯವಿಲ್ಲ. ಈ ಋಣವನ್ನು ತೀರಿಸುವುದಕ್ಕಾಗಿ ಮತ್ತು ನಿಮ್ಮೆಲ್ಲರ ಸೇವೆಗಾಗಿ ಹಾಗೂ ಕ್ಷೇತ್ರದ ಜನರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಡುವುದಕ್ಕಾಗಿ ಮತ್ತೊಮ್ಮೆ ಸ್ಪರ್ಧಿಸಿದ್ದೇನೆ ಎಂದರು. ಕಳೆದ ಚುನಾವಣೆಯಲ್ಲಿ ಸತತವಾಗಿ ಅಪಪ್ರಚಾರದ ಮೂಲಕ ನನ್ನನ್ನು…
ಮಂಗಳೂರು,ಮೇ.07: ದೇರೆಬೈಲ್ ದಕ್ಷಿಣ ವಾರ್ಡಿನ ವ್ಯಾಪ್ತಿಗೆ ಬರುವ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊರವರು ಮೇ.3, ಬುಧವಾರದಂದು ಮನೆ ಮನೆಗೆ ಭೇಟಿ ನೀಡಿ ಮತ ಯಾಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಉಪ ಮೇಯರ್ ರಜನೀಶ್,ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಜಿಲ್ಲಾ ಒಬಿಸಿ ಅಧ್ಯಕ್ಷ ವಿಶ್ವಾಸ್ ದಾಸ್, ವಾರ್ಡ್ ಅಧ್ಯಕ್ಷ ರಾಜೇಂದ್ರ ಚಿಲಿಂಬಿ,ಶೇ ಲಿಯಾಕತ್ ಶಾಹ, ಜಗದೀಶ್, ಪ್ರದೀಪ್ ಕಾಪಿಕಾಡ್, ಮೆಲ್ವಿನ್ ಲೋಬೊ ಮೊದಲಾದವರು ಉಪಸ್ಥಿತರಿದ್ದರು.
ಉಳ್ಳಾಲ,ಮೇ. 07: ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಅವರೊಂದಿಗೆ ಚರ್ಚೆ ನಡೆಸಿ , ಉಳ್ಳಾಲ ವಿಧಾಸನಭಾ ಕ್ಷೇತ್ರಕ್ಕೆ ಅವಶ್ಯಕವಿರುವ ಉದ್ದೇಶದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದ್ದಾರೆ. ಅವರು ಪಂಡಿತ್ ಹೌಸ್ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿ ಎಲ್ಲಾ ಮನೆಗಳಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು, ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು, ಎಲ್ಲಾ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡಲು ಸಮರ್ಪಕ ಕ್ರಮ ಕೈಗೊಂಡು ಸ್ವಚ್ಛ ಉಳ್ಳಾಲ ನಿರ್ಮಾಣಕ್ಕೆ ಸಂಕಲ್ಪ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಉಳ್ಳಾಲ ತಾಲೂಕಿನ ಸಾರ್ವಜನಿಕರ ಬೇಡಿಕೆಯಂತೆ ಕಾಲೇಜು ನಿರ್ಮಾಣ, ನಿವೇಶನ ರಹಿತರಿಗೆ ಪ್ರತೀ ಗ್ರಾಮ ಪಂಚಾಯಿತಿಗಳಲ್ಲಿ ಸರಕಾರಿ ಜಮೀನನ್ನು ಕಾಯ್ದಿರಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ರಚಿಸಿ ಹಂಚುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದರು. ಸುದ್ಧಿಗೋಷ್ಠಿಯಲ್ಲಿ ಅಭ್ಯರ್ಥಿ ಸತೀಶ್ ಕುಂಪಲ, ಚುನಾವಣಾ ಉಸ್ತುವಾರಿ ರವೀಂದ್ರ ಶೆಟ್ಟಿ…
ಮಂಗಳೂರು, ಮೇ. 06 : ಉತ್ತರ ಕ್ಷೇತ್ರದಲ್ಲಿ ಹಿಂದೂ ಭವನ ಸ್ಥಾಪನೆ ಮಾಡಿ ಅಲ್ಲಿ ಬಡವರ ಮದುವೆಗೆ ಕಡಿಮೆ ವೆಚ್ಚದಲ್ಲಿ ಸಭಾಂಗಣ ಒದಗಿಸುವುದು, ಮೀನುಗಾರರಿಗೆ ಕೋಲ್ಡ್ ಸ್ಟೋರೇಜ್ ಸ್ಥಾಪನೆ, ಐಟಿ ಹಬ್ ನಿರ್ಮಾಣ, ಆಯುಷ್ ವನ ನಿರ್ಮಾಣ, ಅಲೆಮಾರಿ ಗೋವುಗಳಿಗೆ ಗೋಶಾಲೆ, ಕಡಲಕಿನಾರೆಯಲ್ಲಿ ಜಲಕ್ರೀಡೆ, ಆಹಾರ ಮಳಿಗೆ, ಧಾರ್ಮಿಕ ಮತ್ತು ಸಾಂಸ್ಕೃತಿಕ ಪ್ರವಾಸೋದ್ಯಮಕ್ಕೆ ಒತ್ತು ಸಹಿತ ದೂರದೃಷ್ಟಿ, ಅಭಿವೃದ್ಧಿ, ರಾಷ್ಟ್ರೀಯತೆಗೆ ಆದ್ಯತೆ ನೀಡಿ ಮುಂದಿನ ಅವಧಿಗೆ ಕ್ಷೇತ್ರದಲ್ಲಿ ಸರ್ವಾಂಗೀಣ ಬೆಳವಣಿಗೆಯನ್ನು ಒಳಗೊಂಡ 30 ಅಂಶಗಳ ಪ್ರಣಾಳಿಕೆಯನ್ನು ಬಿಜೆಪಿ ಅಭ್ಯರ್ಥಿ, ಡಾ. ಭರತ್ ಶೆಟ್ಟಿ ವೈ ಬಿಡುಗಡೆಗೊಳಿಸಿದರು. ಡಾ. ಭರತ್ ಶೆಟ್ಟಿ ಅವರು ಕಾವೂರು ಸೊಸೈಟಿ ಸಭಾಂಗಣದಲ್ಲಿರುವ ಪಕ್ಷದ ಚುನಾವಣಾ ಕಾರ್ಯಾಲಯದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳ ಉನ್ನತೀಕರಣ, ಆಡಳಿತ/ ಐಐಟಿ, ಐಐಎಂ ವ್ಯಾಸಂಗ ಮಾಡುವವರಿಗೆ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು, ಗ್ರಾಮೀಣ ಭಾಗದಲ್ಲಿ ಕ್ಯಾಂಪ್ಕೊ ಮಾದರಿಯಲ್ಲಿ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಹಕಾರಿ…
ಬಂಟ್ವಾಳ ಮೇ. 07 : ಮಹಿಳೆಯರಿಗೆ ಸುರಕ್ಷಿತ, ಸುಭದ್ರ ಮತ್ತು ಸಮೃದ್ಧಿದಾಯಕ ಪ್ರಣಾಳಿಕೆಯನ್ನು ಕಾಂಗ್ರೆಸ್ ಘೋಷಿಸಿದೆ. ಇಂತಹ ದೂರದೃಷ್ಟಿಯುಳ್ಳ ಕಾಂಗ್ರೆಸ್ ಗೆ ಭರ್ಜರಿ ಬಹುಮತ ನೀಡುವ ಮೂಲಕ ರಾಜ್ಯದಲ್ಲಿ ಸುಸ್ಥಿರ ಸರಕಾರ ರಚಿಸಲು ನೆರವಾಗುವಂತೆ ಬಂಟ್ವಾಳ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಮನವಿ ಮಾಡಿದ್ದಾರೆ. ಬಂಟ್ವಾಳ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಐದು ಪ್ರಮುಖ ಗ್ಯಾರಂಟಿಗಳನ್ನು ಘೋಷಿಸಿದೆ. ಬೆಲೆ ಏರಿಕೆ ಗಗನಕ್ಕೇರಿರುವ ಇಂತಹ ಸಂದರ್ಭದಲ್ಲಿ ಮನೆ ನಿರ್ವಹಿಸಲು ಮಹಿಳೆಯರಿಗೆ ಅನುಕೂಲವಾಗುವಂತಹ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಈ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂಬುದಾಗಿ ನಮ್ಮ ನಾಯಕರು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು. ಮನೆ ಯಜಮಾನಿಗೆ ತಿಂಗಳಿಗೆ ರೂ. 2,000, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ, ಪದವೀಧರ ನಿರುದ್ಯೋಗಿಗಳಿಗೆ ಯುವನಿಧಿ, ಪ್ರತಿ ಸದಸ್ಯನಿಗೆ ತಲಾ 10 ಕೆ.ಜಿ. ಅಕ್ಕಿ, ಮಹಿಳೆಯರಿಗೆ ಸರಕಾರಿ…
ಬಂಟ್ವಾಳ, ಮೇ. 07 ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಪರವಾಗಿ ಶನಿವಾರ ಸಂಜೆ ಬಿ.ಸಿ.ರೋಡಿನಲ್ಲಿ ರೋಡ್ ಶೋ ನಡೆಯಿತು. ಬಸ್ ತಂಗುದಾಣದ ಮುಂಭಾಗ ರಾ.ಹೆ.ಯ ಮಧ್ಯದಲ್ಲೇ ತೆರೆದ ವಾಹನದಿಂದಲೇ ಯೋಗಿ ಅದಿತ್ಯನಾಥ್ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತಾಡಿ ಕರ್ನಾಟಕ ರಾಜ್ಯವು ಉತ್ತರ ಪ್ರದೇಶದ ಮಾದರಿಯಲ್ಲೇ ಮುನ್ನಡೆಯಲು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕು ,ಬಂಟ್ವಾಳದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರನ್ನು ಮತ್ತೊಮ್ಮೆ ಭರ್ಜರಿ ಬಹುಮತದಿಂದ ಗೆಲ್ಲಿಸಬೇಕು ಎಂದು ಕರೆ ನೀಡಿದರು. ಕಾಂಗ್ರೆಸ್ ರಾಷ್ಟ್ರವಿರೋಧಿ ಹಾಗೂ ನಕಾರತ್ಮಕ ವಿಷಯಗಳ ಮೂಲಕ ಚುನಾವಣೆ ಎದುರಿಸುತ್ತಿದೆ. ಭಾರತ ಪ್ರಧಾನಿ ನರೇಂದ್ರ ಮೋದಿಯುವರ ನೇತೃತ್ವದಲ್ಲಿಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು,ಅಭಿವೃದ್ಧಿ ಮತ್ತು ರಾಷ್ಟ್ರವಾದ ಗೆಲ್ಲಲು ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಸಿ.ಎಂ.ಯೋಗಿಯವರೊಂದಿಗೆ ತೆರದ ವಾಹನದಲ್ಲಿ ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿ,ಬಿಜೆಪಿ ರಾಜ್ಯಾಧ್ಯಕ್ಷ ,ಸಂಸದ ನಳಿನ್ ಕುಮಾರ್ ,ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ.…
ಮಂಗಳೂರು, ಮೇ.೦5 : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ವೈ ಶೆಟ್ಟಿ ಅವರು ಬಡಗ ಎಡಪದವು ಪಂಚಾಯತ್ ವ್ಯಾಪ್ತಿಯಲ್ಲಿನ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, , ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಂಟ್ವಾಳ, ಮೇ.೦5 : ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಅವರು ಕರೋಪಾಡಿ ಮತ್ತು ಕನ್ಯಾನ ಗ್ರಾಮದ ವಿವಿಧ ಭಾಗಗಳಿಗೆ ಮತ್ತು ಎಸ್.ಸಿ.ಕಾಲೋನಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭ್ಡದಲ್ಲಿ ಸದಸ್ಯರಾದ ರಘನಾಥ ಶೆಟ್ಟಿ ಪಟ್ಟ ರಘುರಾಮ ಶೆಟ್ಟಿ, ಧರ್ಣಮ್ಮ ಜೆ.ಪಿ.ಗೌಡ, ಮನೋಜ್ ಬನಾರಿ, ಪ್ರಮುಖರಾದ ಯೋಗೀಶ್ ಕುಳ, ಶಿವಪ್ರಸಾದ್ ಶೆಟ್ಟಿ, ವಿನೋದ್ ಶೆಟ್ಟಿ ಹರೀಶ್ ಬೇಡಗುಡ್ಡೆ, ಉದಯರಮಣ ಭಟ್,ಕುಮಾರ್ ಭಟ್, ರಮೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು. ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಅವರು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಕನ್ಯಾನ ಭಾರತಿ ಸೇವಾಶ್ರಮ, ಶ್ರೀ ಕ್ಷೇತ್ರ ಕಣಿಯೂರು ಗೆ ಬೇಟಿ ನೀಡಿ ಶ್ರೀ ಮಹಾಬಲ ಸ್ವಾಮೀಜಿ ಯವರ ಆಶೀರ್ವಾದ ಪಡೆದರು.
ಬಂಟ್ವಾಳ, ಮೇ.4: ರಮಾನಾಥ ರೈ ಅವರು ಕಕ್ಯಪದವಿನಲ್ಲಿ ನಡೆದ ಪ್ರಚಾರಸಭೆಯಲ್ಲಿ ಮಾತನಾಡಿ ಬಿಜೆಪಿಯವರ ಆಡಳಿತ ಅವಧಿಯಲ್ಲಿ ಅಂಬಾನಿ, ಅದಾನಿಯಂತಹ ಶ್ರೀಮಂತರಿಗೆ ಅಚ್ಛೇದಿನ್ ಬಂದಿದೆಯೇ ಹೊರತು, ಬಡವರಿಗೆ ಅಚ್ಛೇದಿನ್ ಬಂದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಕಾಂಗ್ರೆಸ್ ಗ್ಯಾರಂಟಿಗಳು ಬೋಗಸ್ ಎಂದು ಬಿಜೆಪಿಯವರು ಅಪಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ಹಿಂದೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಬಡವರಿಗೆ ಏಳು ಕೆಜಿ ಅಕ್ಕಿ ಕೊಟ್ಟದ್ದು ಕಾಂಗ್ರೆಸ್. ರೈತರಿಗೆ ಉಚಿತ ವಿದ್ಯುತ್ ಅನ್ನು ಈಗಾಗಲೇ ನೀಡಲಾಗುತ್ತಿದೆ. ಇವತ್ತು ರೈತರು ಉಚಿತವಾಗಿ ವಿದ್ಯುತ್ ಪಡೆದು ಹಲವು ಪಂಪ್ ಗಳನ್ನು ಅಳವಡಿಸಿ ತಮ್ಮ ತೋಟಗಳಿಗೆ ನೀರು ಹರಿಸುತ್ತಿದ್ದಾರೆ ಎಂದರೆ ಅದಕ್ಕೆ ಕಾಂಗ್ರೆಸ್ ಸರಕಾರ ಕಾರಣ. ಇದು ಸಾಧ್ಯವಿರುವಾಗ ಬಡವರಿಗೆ 200 ಯೂನಿಟ್ ಉಚಿತವಾಗಿ ಕೊಡುವುದಕ್ಕೆ ಯಾಕೆ ಸಾಧ್ಯವಾಗುವುದಿಲ್ಲ. ಕಾಂಗ್ರೆಸ್ ಖಚಿತವಾಗಿ ಈ ಯೋಜನೆಯನ್ನು ಜಾರಿಗೊಳಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. ವಿದೇಶದಿಂದ ಕಪ್ಪು ಹಣ ತಂದು ಬಡವರಿಗೆ 15 ಲಕ್ಷ ಹಂಚುತ್ತೇವೆ ಎಂದಿದ್ದರು. ನಿರುದ್ಯೋಗಿಗಳಿಗೆ…
ಸುರತ್ಕಲ್, ಮೇ. 01: ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ರೈತರ ಸಾಲವನ್ನು ಮನ್ನಾ ಮಾಡಲಾಯಿತು. ಜೆಡಿಎಸ್ ಸರಕಾರದ ಅವಧಿಯಲ್ಲಿ ಮಹಿಳೆಯರಿಗೆ ಸ್ವಾವಲಂಬನೆ ಸಿಕ್ಕಿತು, ರೈತರ ಸಾಲ ಮನ್ನಾ ಆಗಿ ರೈತರಿಗೆ ನೆಮ್ಮದಿಯ ಜೀವನ ಸಿಕ್ಕಿತು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಹಿಂದಿನ ಶಾಸಕ ಮೊಯ್ದಿನ್ ಬಾವ ಅವರ ಅವಧಿಯಲ್ಲಿ ಆಗಿವೆ. ಭತ್ತದ ತೆನೆ ಹೊತ್ತ ಚಿಹ್ನೆ ಗೆ ಮತ ಕೊಟ್ಟು ಹರಸಿ. ಜೆಡಿಎಸ್ ಪಕ್ಷದ ಅಭ್ಯರ್ಥಿ ಮೊಯ್ದಿನ್ ಬಾವಾ ಅವರನ್ನು ಗೆಲ್ಲಿಸಿ ಎಂದರು.