Subscribe to Updates
Get the latest creative news from FooBar about art, design and business.
Author: admin
ಮೂಡುಬಿದಿರೆ, ಏ 21 : ಮೂಲ್ಕಿ- ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಥುನ್ ರೈ ಅವರು ಪಕ್ಷದ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಏ. 17 ,ಸೋಮವಾರ ಮಧ್ಯಾಹ್ನ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಸ್ವರಾಜ್ಯ ಮೈದಾನದಲ್ಲಿ ಮಹಮ್ಮಾಯಿ ದೇವರ ದರ್ಶನ ಪಡೆದ ಮಿಥುನ್ ರೈ ಅವರು ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪಿನಲ್ಲಿ ಸಾಗಿ ಬಂದರು. ಬಳಿಕ ಚುನಾವಣೆ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಎಂಎಲ್ಸಿ ಹರೀಶ್ ಕುಮಾರ್, ಶಾಸಕ ಯು.ಟಿ ಖಾದರ್, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್, ಶಾಲೆಟ್ ಪಿಂಟೊ, ದೇವಿಪ್ರಸಾದ್ ಶೆಟ್ಟಿ, ಮಮತ ಗಟ್ಟಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೆರ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕಾನ್ ಬಂಟ್ವಾಳ್, ಸುಪ್ರಿಯಾ ಡಿ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ, ಏ. 21 : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಏ.20,ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವುದಕ್ಕೂ ಮುನ್ನಾ ಬಿ. ರಮಾನಾಥ ರೈಯವರು ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ,ಬಂಟ್ವಾಳದ ತಿರುಮಲ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮೊಡಂಕಾಪು ಚರ್ಚ್ ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಿತ್ತಬೈಲು ಮೊಯ್ದಿನ್ ಜುಮಾ ಮಸೀದಿ, ಕೆಳಗಿನಪೇಟೆ ಮಸೀದಿಯಲ್ಲೂ ಪ್ರಾರ್ಥಿಸಿದರು. ಬಂಟ್ವಾಳದ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಹೊರಟ ಹೆಚ್ಚಿನ ಸಂಖ್ಯೆಯ ಜನರ ಉತ್ಸಾಹಭರಿತ ಪಾದಯಾತ್ರೆ ಬಿ.ಸಿ.ರೋಡ್ ಬಸ್ ನಿಲ್ದಾಣದ ವರೆಗೆ ಸಾಗಿತು. ನಂತರ ಮಿನಿ ವಿಧಾನಸೌಧದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಪಕ್ಷದ ಪ್ರಮುಖರೊಂದಿಗೆ ತೆರಳಿದ ರೈಗಳು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಂಜೇಶ್ವರ ಶಾಸಕ…
ಸುರತ್ಕಲ್ ಏ. 21: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರು ಏ.20, ಗುರುವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಕಾವೂರು ಮೈದಾನದಲ್ಲಿ ಬಹಿರಂಗ ಸಮಾವೇಶ ನಡೆಸಿ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ರೋಡ್ ಶೋ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ರೋಡ್ ಶೋ ನಲ್ಲಿ ಮಿಥುನ್ ರೈ, ಸುಧೀರ್ ಕುಮಾರ್ ಮುರಳಿ, ಗಿರೀಶ್ ಆಳ್ವ, ಶಾಹುಲ್ ಹಮೀದ್, ನೀರೇಶ್ ಪಾಲ್, ಮಾಜಿ ಮೇಯರ್ ಕವಿತಾ ಸನಿಲ್, ಉಮೇಶ್ ದಂಡೆಕೇರಿ, ಕೆ. ಅಭಯಚಂದ್ರ ಜೈನ್, ಯು. ಪಿ ಇಬ್ರಾಹಿಂ, ಶಶಿಕಲಾ ಪದ್ಮನಾಭ, ಜೇಸನ್ ಸುರತ್ಕಲ್, ಚಂದ್ರಹಾಸ್ ಪೂಜಾರಿ, ಶ್ರೀನಿವಾಸ್ ಸಾಲಿಯಾನ್, ಮಂಗಳೂರು ಉತ್ತರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್ ಕಾಟಿಪಳ್ಳ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು, ಏ. 21 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವೇದವ್ಯಾಸ್ ಕಾಮತ್ ಅವರು ಏ. 17 ,ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಗಣ್ಯರ ಸಮ್ಮುಖದಲ್ಲಿ ನಾಮಪತ್ರನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ವೇದವ್ಯಾಸ್ ಕಾಮತ್ ಅವರು ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ಕಾರ್ ಸ್ಟ್ರೀಟ್ ನ ವೆಂಕಟರಮಣ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ವೇದವ್ಯಾಸ್ ಕಾಮತ್ ಅವರು ಹೆಚ್ಚಿನ ಸಂಖ್ಯೆಯ ಬೆಂಬಲಿಗರೊಂದಿಗೆ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಮೆರವಣಿಗೆಯಲ್ಲಿ ಆಗಮಿಸಿದರು. ಮೆರವಣಿಗೆಯಲ್ಲಿ ಮೇಯರ್ ಜಯಾನಂದ ಅಂಚನ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ರವಿಶಂಕರ್ ಮಿಜಾರ್, ಸುಧೀರ್ ಶೆಟ್ಟಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಮಂಗಳೂರು, ಏ. 21 : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ಡಾ.ಭರತ್ ವೈ ಶೆಟ್ಟಿ ಅವರು ಏ. 18, ಮಂಗಳವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪಕ್ಷದ ಪ್ರತಿನಿಧಿಗಳು ಮತ್ತು ಬೆಂಬಲಿಗರ ಸಮ್ಮುಖದಲ್ಲಿ ಡಾ. ಭರತ್ ಶೆಟ್ಟಿ ಅವರು ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ ದೇವಸ್ಥಾನದಿಂದ ಕಾವೂರು ಮೈದಾನದವರೆಗೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರ ಪಾದೆಯಾತ್ರೆಯ ಜತೆ ಸಾಗಿ ಬಂದು ಸುಮಾರು 2.20ಕ್ಕೆ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯಲ್ಲಿ ಮೇಯರ್ ಜಯಾನಂದ ಅಂಚನ್, ಉತ್ತರ ಮಂಡಲ ಬಿಜೆಪಿ ಅಧ್ಯಕ್ಷ ತಿಲಕ್ರಾಜ್ ಕೃಷ್ಣಾಪುರ, ಜಿಲ್ಲಾ ಉಪಾಧ್ಯಕ್ಷ ಗಣೇಶ್ ಹೊಸಬೆಟ್ಟು, ಭರತ್ ಶೆಟ್ಟಿ ಅವರ ಪತ್ನಿ ಡಾ| ಅಸಾವರಿ ವೈ. ಶೆಟ್ಟಿ, ಜಿಲ್ಲಾ ಮಾಧ್ಯಮ ಪ್ರಮುಖ್ ರಾಜೀವ್ ಕಾಂಚನ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು, ಏ 21 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಜೆ.ಆರ್.ಲೋಬೊ ಅವರು ಏ.21, ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಜೆ.ಆರ್.ಲೋಬೊ ಅವರು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಪಕ್ಷದ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಮಂಗಳೂರು ನಗರದ ವಿವಿಧ ದೇವಾಲಯಗಳು, ಚರ್ಚ್ ಗಳು,ಮಸೀದಿಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕುದ್ರೋಳಿ ದೇವಸ್ಥಾನದಿಂದ ಮಂಗಳೂರು ಮಹಾನಗರ ಪಾಲಿಕೆ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ವೇಳೆ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಭಾಸ್ಕರ್ ಮೊಯ್ಲಿ,ಶಶಿಧರ್ ಹೆಗ್ಡೆ,ವಿಶ್ವಾಸ್ ದಾಸ್, ಅಬ್ದುಲ್ ಸಲಿಂ, ಪ್ರಕಾಶ್ ಸಾಲ್ಯಾನ್, ಪ್ರವೀಣ್ ಆಳ್ವ, ಕೇಶವ ಮರೋಳಿ ಮತ್ತಿತರರು ಉಪಸ್ಥಿತರಿದ್ದರು.
ಉಳ್ಳಾಲ, ಎ.21 : ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನಸಭೆ ವಿಪಕ್ಷ ಉಪನಾಯಕ, ಶಾಸಕ ಯು.ಟಿ.ಖಾದರ್ ಎ.20, ಗುರುವಾರ ನಾಮಪತ್ರ ಸಲ್ಲಿಸಿದರು. ಭಾರೀ ಮೆರವಣಿಗೆಯಲ್ಲಿ ತೆರಳಿದ ಯು.ಟಿ. ಖಾದರ್ ಅವರು ಉಳ್ಳಾಲ ನಗರಸಭೆ ಕಾರ್ಯಾಲಯದಲ್ಲಿರುವ ಕ್ಷೇತ್ರ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ಅವರು ಸೋಮೇಶ್ವರ ದೇವಸ್ಥಾನ, ಉಳ್ಳಾಲ ದರ್ಗಾ ಸಹಿತ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿದರು. ಬಳಿಕ ಉಳ್ಳಾಲ ಬೈಲ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಯು.ಟಿ.ಖಾದರ್, ಇದು ಸತ್ಯ ಧರ್ಮದ, ಇದು ಜನವಿರೋದಿ, ತಾರತಮ್ಯ ಮಾಡುವ ಸರ್ಕಾರವನ್ನು ಕೆಳಗಿಸುವ ಚುನಾವಣೆಯಾಗಿದೆ ನಿಮ್ಮೆಲ್ಲರ ಪ್ರೀತಿ ವಿಶ್ವಾಸದಿಂದ ಮತ್ತೊಮ್ಮೆ ಗೆದ್ದು ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ ಎಂದರು. ಸಮಾವೇಶದ ಬಳಿಕ ಅಬ್ಬಕ್ಕ ಸರ್ಕಲ್ ವರೆಗೆ ಬೃಹತ್ ಮೆರವಣಿಗೆಯಲ್ಲಿ ತೆರಳಿದ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದರು. ಸಮಾವೇಶದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಇಬ್ರಾಹೀಂ ಕೋಡಿಜಾಲ್, ಡಾ.ಕಣಚೂರು ಮೋನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ…
ದಾವಣಗೆರೆ,ಏ. 08 :ಆನೆ ದಾಳಿಗೆ ಯುವತಿ ಯೊಬ್ಬಳು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೋಮ್ಲಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಸೋಮ್ಲಾಪುರದ ಕವನ (17) ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಕವನ ಅವರ ತಾಯಿ ಜೊತೆಯಲ್ಲಿ ಜಮೀನಿಗೆ ತೆರಳಿದ್ದಳು. ಜಮೀನಿನಲ್ಲಿ ಹೋಗಿ ಅವರೆಕಾಯಿ ಬಿಡಿಸುವ ವೇಳೆ ಏಕಾಏಕಿ ಹಿಂದಿನಿಂದ ಆನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ಕವನಾಳನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲೇ ಆಕೆ ಸಾವನ್ನಪ್ಪಿದ್ದಾಳೆ. ಗಾಯಗೊಂಡ ತಾಯಿ ಮಂಜುಳಾ ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ವರದಿಯಾಗಿದೆ.
ಮೂಡುಬಿದಿರೆ, ಏ. 05 :ಕೃಷಿ ತಜ್ಞ ‘ಕೃಷಿ ಋಷಿ’ಎಂದೇ ಗುರುತಿಸಿಕೊಂಡಿದ್ದ ಮೂಡುಬಿದಿರೆಯ ಬನ್ನಡ್ಕದ ಸೋನ್ಸ್ ಫಾರ್ಮ್ನ ಪ್ರಗತಿಪರ ಕೃಷಿಕ ಡಾ. ಎಲ್. ಸಿ. ಸೋನ್ಸ್ ಅವರು ಎ.5 ಬುಧವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. 1934ರ ಎಪ್ರಿಲ್ 4ರಂದು ಜನಿಸಿರುವ ಡಾ. ಎಲ್. ಸಿ. ಸೋನ್ಸ್ ಅವರು ತನ್ನ ಜೀವನವನ್ನು ಕೃಷಿಗಾಗಿ ಮುಡಿಪಾಗಿಟ್ಟವರು.ಕೃಷಿ ಕ್ಷೇತ್ರದಲ್ಲಿ ಅಸಾಮಾನ್ಯ ಸಾಧನೆ ಮಾಡಿರುವ ಸೋನ್ಸ್ ಅನಾನಸು ಕೃಷಿ, ಬಿದಿರಿನ ವಿವಿಧ ಪ್ರಬೇಧ, ದೇಶ-ವಿದೇಶಗಳ ಹಣ್ಣು-ತರಕಾರಿ ಪ್ರಬೇಧಗಳನ್ನು ಮೂಡುಬಿದಿರೆ ಬನ್ನಡ್ಕದ ಮಣ್ಣಿನಲ್ಲಿ ಬೆಳೆಸಿ, ಅದರಿಂದ ಫಸಲು ಹಾಗೂ ಲಾಭಗಳಿಸಿದವರಾಗಿದ್ದಾರೆ. ಜಲ ತಜ್ಞರಾಗಿಯೂ ವಿಶೇಷ ಪರಿಣಿತಿಯನ್ನು ಹೊಂದಿದ್ದರು. ಡಾ. ಎಲ್.ಸಿ . ಸೋನ್ಸ್ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಹಾಗೂ ತನ್ನೊಂದಿಗೆ ಕೃಷಿಯಲ್ಲಿ ತೊಡಗಿಸಿಕೊಂಡ ಸಹೋದರ ಐ.ವಿ. ಸೋನ್ಸ್ ಇವರನ್ನು ಅಗಲಿದ್ದಾರೆ.
ಬಂಟ್ವಾಳ, ಮಾ. 4 : ಶಂಕಿತ ರೇಬಿಸ್ಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮೃತ ಯುವಕನನ್ನು ಅಶೋಕ ಹೆಗ್ಡೆ ಎಂಬವರ ಪುತ್ರ ಪ್ರಶಾಂತ ಹೆಗ್ಡೆ(31)ಎಂದು ಗುರುತಿಸಲಾಗಿದೆ. ಪ್ರಶಾಂತ್ ಅವರಿಗೆ ಮೂರು ತಿಂಗಳ ಹಿಂದೆ ಅವರ ಮನೆಯ ಸಾಕು ನಾಯಿ ಕಚ್ಚಿದ್ದು,ಅವರು ನಾಯಿ ಕಚ್ಚಿರುವುದಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ. ಬಳಿಕ ತೀವ್ರ ಜ್ವರದಿಂದ ಒದ್ದಾಡಿದ್ದು, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ತೆರಳಿದ್ದಾರೆ.ಜ್ವರ ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಪ್ರಶಾಂತ್ ಸಾವನಪ್ಪಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ಅವರ ಕ್ಲಿನಿಕಲ್ ಪರೀಕ್ಷೆ ವರದಿಗಳು ರೇಬಿಸ್ ಲಕ್ಷಣ ಹೊಂದಿದ್ದವು. ಅವರು ಯಾವ ಕಾರಣದಿಂದ ಸಾವನಪ್ಪಿದ್ದಾರೆಂದು ನಿಖರವಾಗಿ ತಿಳಿದು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಅವರು ತಿಳಿಸಿದ್ದಾರೆ.