Subscribe to Updates
Get the latest creative news from FooBar about art, design and business.
Author: admin
ಕುಂದಾಪುರ, ಫೆ 09 : ಕುಂದಾಪುರ ನಗರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ರೊಬ್ಬರು ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್ ಬಳಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತ ಪೊಲೀಸ್ ಕಾನ್ಸ್ಟೇಬಲ್ ರಾಮ ನಾಗೇಶ ಗೌಡ ಅವರ ವಯಸ್ಸು 32 ವರ್ಷ ಎನ್ನಲಾಗಿದೆ . ಘಟನೆಗೆ ಅನಾರೋಗ್ಯ ಅಥವಾ ಆನ್ಲೈನ್ ಬೆಟ್ಟಿಂಗ್ನಿಂದಾಗಿ ಉಂಟಾದ ಆರ್ಥಿಕ ಸಂಕಷ್ಟ ಕಾರಣ ಎಂಬ ಶಂಕೆ ಮೂಡಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಫೆ 08 : ನಗರದ ಶಕ್ತಿನಗರದಲ್ಲಿರುವ ಪ್ರತಿಷ್ಠಿತ ಸಿಟಿ ಆಸ್ಪತ್ರೆ ಯ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ಕಲುಷಿತ ಆಹಾರ ಸೇವನೆಯಿಂದ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಈ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಅವರು ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ನಿರ್ಲಕ್ಷ್ಯತೆಯ ಕುರಿತು ದೂರು ನೀಡಿದ್ದು ಅದರಂತೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ್ದ ಕೆಲವು ವಿದ್ಯಾರ್ಥಿನಿಯರಲ್ಲಿ ಭಾನುವಾರ ದಿಢೀರ್ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಸೋಮವಾರ ಹಾಸ್ಟೆಲ್ ನ ಬಹುತೇಕ ವಿದ್ಯಾರ್ಥಿನಿಯರಲ್ಲಿ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಬಳಿಕ ಎ ಜೆ ಹಾಸ್ಪಿಟಲ್ , ಕೆ ಎಂ ಸಿ ಆಸ್ಪತ್ರೆ, ಸಿಟಿ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ
ಚಿತ್ರದುರ್ಗ, ಫೆ 07 : ಬಿಜೆಪಿಯವರು ಜಾತಿ, ಧರ್ಮದ ಹೆಸರಲ್ಲಿ ಮತ ಕೇಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚಿತ್ರದುರ್ಗದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ನೆಹರು ಮೈದಾನದಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಮೂರುವರೆ ವರ್ಷದಿಂದ ಆಪರೇಷನ್ ಲೋಟಸ್ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಈ ಆಪರೇಷನ್ ಲೋಟಸ್ ಮೂಲಕ ಬಿಜೆಪಿ ಸರಕಾರ ರಚನೆ ಮಾಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಕಾಂಗ್ರೆಸ್ ಸರ್ವರಿಗೂ ಸಮಬಾಳು, ಸಮಪಾಲು ಎಂಬ ತತ್ವ ಹೊಂದಿರುವ ಪಕ್ಷವಾಗಿದ್ದು, ಕಾಂಗ್ರೆಸ್ ಈ ದೇಶದ ಶಕ್ತಿ ಹಾಗೂ ದೇಶದ ಇತಿಹಾಸವಾಗಿದೆ. ನಮ್ಮ ಪಕ್ಷ ಎಲ್ಲಾ ಸಮುದಾಯದವರು ಒಂದು ಎನ್ನುತ್ತದೆ. ಆದರೆ ಬಿಜೆಪಿ ಹಿಂದೂ ಧರ್ಮದ ಮೇಲೆ ಮತಗಳನ್ನು ಕೇಳುತ್ತಿದೆ ಎಂದು ಹೇಳಿದರು. ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಲಾಗುತ್ತದೆ ಎಂದು ಈ ಡಬಲ್ ಇಂಜಿನ್ ಸರಕಾರ ಹೇಳಿಕೊಂಡು ಬಂದಿದೆ. ಆದರೆ ನಮ್ಮ ರಾಜ್ಯದಲ್ಲಿ ಎಸ್ಸಿ,…
ನವದೆಹಲಿ, ಫೆ. 06 : ದೇಶದ ಈಶಾನ್ಯ ಭಾಗದ ಹಿಂದುಳಿದ ಪ್ರದೇಶಗಳಿಗೆ ಕನಿಷ್ಠ ಸಂಖ್ಯೆಯ ಕಡ್ಡಾಯ ವಿಮಾನಗಳನ್ನು ನಿರ್ವಹಿಸಲು ವಿಫಲವಾಗಿರುವುದಕ್ಕಾಗಿ ವಿಸ್ತಾರ ಏರ್ ಲೈನ್ಸ್ ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ 70 ಲಕ್ಷ ದಂಡ ವಿಧಿಸಿದ್ದು, ಇದೀಗ ವಿಸ್ತಾರ ಏರ್ ಲೈನ್ಸ್ ಅದನ್ನು ಪಾವತಿಸಿದೆ ಎಂದು ವರದಿಯಾಗಿದೆ. ವಿಸ್ತಾರ ಸಂಸ್ಥೆ ಸರ್ಕಾರದ ಆದೇಶಗಳನ್ನು ಮತ್ತು ಕಾನೂನು ಪಾಲನೆ ಮಾಡುತ್ತಿದೆ. ಅದ್ದರಿಂದ ಸಂಸ್ಥೆ ದಂಡ ಪಾವತಿಸಿದೆ ಎಂದು ವಿಸ್ತಾರ ವಕ್ತಾರರು ತಿಳಿಸಿದ್ದಾರೆ.
ಬಂಟ್ವಾಳ, ಫೆ.4,: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಬಿ.ಸಿ.ರೋ ಡಿನ ಮುಖ್ಯ ವೃತ್ತದ ಬಳಿ ಫೆ.3, ಶುಕ್ರವಾರ ಪತ್ತೆಯಾ ಗಿದೆ ಎಂದು ವರದಿಯಾಗಿದೆ. ಮೃತರ ವಯಸ್ಸು ಸುಮಾರು 55 ವರ್ಷ ಎಂದು ಅಂದಾಜಿಸಲಾಗಿದೆ. ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು. ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು, ಫೆ.4 : ಜಪ್ಪಿನ ಮೊಗರು ಬಳಿಯ ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿರುವ ಘಟನೆ ಫೆ.3, ಶುಕ್ರವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ ಉರಿಯುತ್ತಿದ್ದು ಹತ್ತಾರು ವಾಹನಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ. ಘಟನೆ ಸಂಭವಿಸಿದ ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು, ಪೊಲೀಸ್ ಅಧಿಕಾರಿಗಳು ಅಗಮಿಸಿ ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ. ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ಫರ್ಮರ್ ಸ್ಪೋಟಗೊಂಡು ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಆರಂಭಿಕ ಮಾಹಿತಿ ಲಭ್ಹವಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪುತ್ತೂರು, ಫೆ 03 : ಕಾರಿಗೆ ಡಿಕ್ಕಿಯಾದ ನಾಯಿಯೊಂದು ಕಾರಿನ ಬಂಪರಿನೊಳಗೆ ಸಿಲುಕಿಕೊಂಡು ಸುಮಾರು 70 ಕಿ.ಮೀ. ಯಾವುದೇ ಗಾಯಗಳಾಗದೆ ಪ್ರಯಾಣಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಸುಬ್ರಹ್ಮಣ್ಯ ಟಿ.ಎಸ್. ಕುಟುಂಬ ಸುಬ್ರಹ್ಮಣ್ಯದಿಂದ ಪುತ್ತೂರಿಗೆ ಬರುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಬಳ್ಪ ಎಂಬಲ್ಲಿ ನಾಯೊಂದು ಚಲಿಸುವ ಕಾರಿಗೆ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿದ್ದು, ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಪತ್ತೆಯಾಗಿರಲಿಲ್ಲ. ಮನೆಗೆ ಬಂದ ಬಳಿಕ ಕಾರನ್ನು ಪರಿಶೀಲಿಸಿದಾಗ ಬಂಪರ್ನೊಳಗೆ ನಾಯಿ ಪತ್ತೆಯಾಗಿದೆ. ಕೂಡಲೇ ಸ್ಥಳೀಯ ಮೆಕ್ಯಾನಿಕ್ ಅವರನ್ನು ಕರೆಸಿ ನಾಯಿಯನ್ನು ಹೊರಕ್ಕೆ ತೆಗೆಯಲಾಗಿದೆ.
ಪುತ್ತೂರು, ಫೆ 03 : ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಪ. ಪೂ. ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಇಂದು ಮುಂಜಾನೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸುರತ್ಕಲ್, ಜ. 20 : ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಹಸ್ತಾಂತರಿಸಿದರು. ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಮೃತರಾಗಿದ್ದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಮೊಯಿದೀನ್ ಬಾವಾ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡೆಕೇರಿ, ಮಾಜಿ ಉಪಮೇಯರ್ ಬಶೀರ್ ಬೈಕಂಪಾಡಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬಳಿ, ಷರೀಫ್ ಚೊಕ್ಕಬೆಟ್ಟು, ಜಲೀಲ್ ಬದ್ರಿಯ, ಎಸ್ ಸಿ ಎಸ್ ಟಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಕೋಡಿಕಲ್, ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು, ಜ. 20 : ವಿಶ್ವ ಹಿಂದು ಪರಿಷತ್-ಬಜರಂಗದಳದಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬುದಾಗಿ ಅಳವಡಿಸಲಾಗಿದ್ದ ಬ್ಯಾನರನ್ನು ಪೊಲೀಸರು ಜ. 19 ಗುರುವಾರ ತೆರವುಗೊಳಿಸಿದ್ದಾರೆ. ಜನವರಿ 15ರಿಂದ 21ರವರೆಗೆ ಕದ್ರಿ ದೇವಸ್ಥಾನದಲ್ಲಿ ಜಾತ್ರೆ ನಡೆಯಲಿದೆ. ಆದರೆ ಜಾತ್ರೆಯಲ್ಲಿ ಸನಾತನ ಧರ್ಮದ ಹಾಗೂ ಆಚರಣೆಯಲ್ಲಿ ನಂಬಿಕೆ ಹಾಗೂ ವಿಶ್ವಾಸ ಉಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶವಿದೆ ಎಂದು ಗುರುವಾರ ಕ್ಷೇತ್ರದ ಬಳಿ ಬ್ಯಾನರ್ ಹಾಕಲಾಗಿದೆ. ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಮೊದಲು ಗುರಿ ಮಾಡಿದ್ದೇ ಕದ್ರಿ ಶ್ರೀ ಮಂಜುನಾಥ ದೇವಸ್ಥಾನವನ್ನು, ಅದ್ದರಿಂದ ಅಂತಹ ಮನಸ್ಥಿತಿ ಇರುವವರಿಗೆ ಹಾಗೂ ವಿಗ್ರಹಾರಾಧನೆಯನ್ನು ಹರಾಮ್ ಎಂದು ನಂಬಿರುವವರಿಗೆ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದೂ ಬ್ಯಾನರಲ್ಲಿ ಬರೆಯಲಾಗಿತ್ತು. ಕದ್ರಿ ದೇವಸ್ಥಾನವು ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವುದರಿಂದ ಬ್ಯಾನರ್ ಅಳವಡಿಕೆಗೆ ಆಡಳಿತ ಮಂಡಳಿಯ ಅನುಮತಿ ಇರಲಿಲ್ಲ. ಹೀಗಾಗಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬ್ಯಾನರನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಈ…