Subscribe to Updates
Get the latest creative news from FooBar about art, design and business.
Author: admin
ಕೋಲ್ಕತ್ತ, ಮಾ.06: ದೇಶದ ಮೊದಲ 520 ಮೀಟರ್ ಉದ್ದದ ಜಲ ಸುರಂಗದ ಮೆಟ್ರೊ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಚಾಲನೆ ನೀಡಿದರು. ಬಳಿಕ ಜಲ ಸುರಂಗ ಮಾರ್ಗದಲ್ಲಿ ಶಾಲಾ ವಿದ್ಯಾರ್ಥಿಗಳ ಜೊತೆ ಪ್ರಯಾಣಿಸುವ ಮೂಲಕ ಪ್ರಧಾನಿ ಮೋ ದಿ ಅವರು ನೂತನ ಮೆಟ್ರೊ ಯೋಜನೆಯನ್ನು ಲೋಕಾರ್ಪಣೆ ಮಾಡಿದರು. ಕೋಲ್ಕತ್ತ ಮೆಟ್ರೊದ ಪೂರ್ವ -ಪಶ್ಚಿಮ ಕಾರಿಡಾರ್ ವ್ಯಾಪ್ತಿಯ ಈ ಯೋಜನೆಗೆ ಸುಮಾರು 4,965 ಕೋಟಿ ರೂ. ವೆಚ್ಚವಾಗಿದೆ.ಹೂಗ್ಲಿ ನದಿಯೊಳಗಿನ ಸುರಂಗಮಾರ್ಗದ ಮೂಲಕ ಹೌರಾ ಮತ್ತು ಎಸ್ಪ್ಲೇ ನೇಡ್ ನಡುವೆ ಮೆಟ್ರೊ ರೈಲು ಸಂಚರಿಸಲಿದೆ. 520 ಮೀ. ಉದ್ದದ ಈ ಸುರಂಗದೊಳಗೆ ಮೆಟ್ರೊ ರೈ ಲಿನ ಸರಾಸರಿ ಪ್ರಯಾಣದ ಅವಧಿ 45 ಸೆಕೆಂಡುಗಳು. ರೈಲುಗಳು ಸುರಂಗದಲ್ಲಿ ಗಂಟೆಗೆ 80 ಕಿ.ಮೀ ವೇಗದಲ್ಲಿ ಚಲಿಸಬಹುದು ಎಂದು ಮೆಟ್ರೊ ಅಧಿಕಾರಿಗಳು ತಿಳಿಸಿದ್ದಾರೆ.
ಉಳ್ಳಾಲ, ಮಾ. 05: ದೇರಳಕಟ್ಟೆಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜಿನ ರಜತ ಮಹೋತ್ಸವದ ಲಾಂಛನವನ್ನು ಯೆನೆಪೊಯ ಪರಿಗಣಿತ ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ವೈ.ಅಬ್ದುಲ್ಲ ಕುಂಞಿ ಅವರು ಸೋಮವಾರ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು,ಯೆನೆಪೋಯ ಮೆಡಿಕಲ್ ಕಾಲೇಜು 1999 ರಲ್ಲಿ ಸ್ಥಾಪನೆಯಾಗಿ,ಇದೀಗ 2024 ರಲ್ಲಿ ತನ್ನ ರಜತ ಮಹೋತ್ಸವ ವರ್ಷಾಚರಣೆ ನಡೆಸಲಿದೆ.ಮಂಗಳೂರಿನ ದೇರಳಕಟ್ಟೆಯ ಯೆನೆಪೊಯ ಪರಿಗಣಿತವ ವಿಶ್ವವಿದ್ಯಾ ಲಯದ ಘಟಕ ಸಂಸ್ಥೆಗಳಲ್ಲಿ ಒಂದಾದ ಯೆನೆಪೊಯ ವೈದ್ಯಕೀಯ ಕಾಲೇಜು ತನ್ನ 25ನೇ ವರ್ಷದ ಸಂದರ್ಭದಲ್ಲಿ ಬೆಳ್ಳಿಹಬ್ಬದ ಆಚರಣೆಯನ್ನು ಪ್ರಾರಂಭಿಸಲು ಸಂಸ್ಥೆ ವಿವಿಧ ಪಾಲುದಾ ರರಿಗಾಗಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಬೆಳ್ಳಿ ಹಬ್ಬದ ಪ್ರಯುಕ್ತ ನಡೆಯುವ ಕಾರ್ಯಕ್ರಮ ಗಳು ಯಶಸ್ವಿಯಾಗಲಿ ಎಂದು ಡಾ. ವೈ.ಅಬ್ದುಲ್ಲಾ ಕುಂಞ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯೆನೆಪೊಯ ವಿಶ್ವ ವಿದ್ಯಾನಿಲಯದ ಕುಲಸಚಿವ ಡಾ.ಎಂ. ಡಾ.ಗಂಗಾಧರ ಸೋಮಯಾಜಿ, ಯೆನೆಪೊಯ ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಡಾ.ಎಂ. ವಿಜಯ ಕುಮಾರ್ ಡಾ.ಅಖ್ತರ್ ಹುಸೈನ್, ಯೆನೆಪೊಯ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್ ಮೂಸಬ್ಬ,ಯೆನೆಪೊಯ ವೈದ್ಯಕೀಯ…
ಬೆಳ್ತಂಗಡಿ, ಮಾ 04 : ಕೊಕ್ಕಡದಲ್ಲಿ ನೀರಿನ ಟ್ಯಾಂಕರ್ ಪಲ್ಟಿಯಾಗಿ ಕಾರ್ಮಿಕನೊರ್ವ ಟ್ಯಾಂಕರ್ ನ ಅಡಿಗೆ ಸಿಲುಕಿ ಮೃತಪಟ್ಟ ಘಟನೆ ಮಾ.1 ರಂದು ನಡೆದಿದೆ. ಹಾವೇರಿ ನಿವಾಸಿಯಾಗಿರುವ ಸುರೇಶ್ ಮಲ್ಲಪ್ಪ ಹೊಸಮನಿ ಮೃತರು. ಕೊಕ್ಕಡ ಗ್ರಾಮದ ಮೈಪಾಳದಲ್ಲಿ ಸೇತುವೆ ಮತ್ತು ಡ್ಯಾಮ್ ಕಾಮಗಾರಿ ನಡೆಯುತ್ತಿದ್ದು,ಟ್ಯಾಂಕರ್ ನಲ್ಲಿ ನೀರು ತುಂಬಿಕೊಂಡು ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಮಗುಚಿ ಬಿದ್ದಿದೆ. ಈ ವೇಳೆ ಟ್ಯಾಂಕರ್ ಅಡಿಗೆ ಸಿಲುಕಿದ ಸುರೇಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಫೆ. 27 :ಕರ್ನಾಟಕ ಜಾನಪದ ಪರಿಷತ್ ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಸಾರಥ್ಯದಲ್ಲಿ ರೋಹನ್ ಕಾರ್ಪೊರೇಶನ್ ಸಹಯೋಗದಲ್ಲಿ ಮಾ.1ರಿಂದ 3ರವರೆಗೆ ಪಣಂಬೂರು ಬೀಚ್ನಲ್ಲಿ ಜಾನಪದ ಕಡಲೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ರಾಜೇಶ್ ಆಳ್ವ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾ.1ರಂದು ಸಂಜೆ 6:30ಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಜಾನಪದ ಕಡಲೋತ್ಸವ ಉದ್ಘಾಟಿಸಲಿದ್ದಾರೆ .ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ವಿವಿಧ ಪ್ರದರ್ಶನ ಉದ್ಘಾಟಿಸುವರು.ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿರುವರು. ಇದೇ ವೇಳೆ ಜಾನಪದ ಕಡಲೋತ್ಸವ ಪ್ರಶಸ್ತಿ ಮತ್ತು 13ಮಂದಿ ಜಾನಪದ ಕಲಾವಿದರಿಗೆ ಗೌರವಾರ್ಪಣೆ ನಡೆಯಲಿದೆ. ಮಾ.2ರಂದು ಸಂಜೆ 5:30ರಿಂದ ವಿಚಾರ ಸಂಕೀರ್ಣ ಮತ್ತು ಜಾನಪದ ಪರಿಷತ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಲಿದೆ ಎಂದು ಹೇಳಿದ್ದಾರೆ
ಸುರಪುರ, ಫೆ. 26: ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಫೆ. 25 ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜಾ ವೆಂಕಟಪಟ್ಟ ನಾಯಕ ಅವರು ಕಳೆದ 15 ದಿನಗಳ ಹಿಂದೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಆದರೆ, ಇಂದು ದಿಢೀರನೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರು, ಫೆ. 25: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ (ಸಿಜೆ) ನಿಲಯ್ ವಿಪಿನ್ಚಂದ್ರ ಅಂಜಾರಿಯ ಅವರು ರವಿವಾರ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ವಕೀಲರು, ಗಣ್ಯರು, ಸೇರಿದಂತೆ ಹಿರಿಯ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು
ಬೆಂಗಳೂರು, ಫೆ. 24: ಕರ್ನಾಟಕದ ಕ್ರಿಕೆಟ್ ತಂಡದ ಆಟಗಾರ ಪಂದ್ಯದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಕರ್ನಾಟಕ ತಂಡದ ಆಟಗಾರ ಕೆ. ಹೊಯ್ಸಳ(34) ಮೃತರು. ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ ಮತ್ತು ಅಕೌಂಟ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಹೊಯ್ಸಳ ಪ್ರತಿನಿಧಿಸುತ್ತಿದ್ದರು. ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಮಣಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿತ್ತು. ಈ ಸಂದರ್ಭ ತಂಡದೊಂದಿಗೆ ಸಂಭ್ರಮಾಚರಣೆ ಮಾಡಿದ್ದ ಹೊಯ್ಸಳಗೆ ಮೈದಾನದಲ್ಲೇ ಎದೆಯಲ್ಲಿ ನೋವು ಕಾಣಿಸಿಕೊಂಡು ಪ್ರಜ್ಞೆ ತಪ್ಪಿದ್ದಾರೆ. ಬಳಿಕ ಅವರನ್ನು ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲೇ ಅವರು ಸಾವನ್ನಪ್ಪಿದ್ದಾರೆ.
ಉಡುಪಿ, ಫೆ 23 : ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ದೋಣಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮುಳುಗಡೆಯಾಗಿದೆ, ದೋಣಿಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪ್ರಕಾಶ್ ದೇವಾಡಿಗ ಅವರಿಗೆ ಸೇರಿದ್ದು, ಆನಂತಕೃಷ್ಣ ಬೋಟು ರತ್ನಗಿರಿ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಬೋಟಿನ ಒಳಗೆ ನೀರು ಬರಲಾರಂಭಿಸಿದ್ದು, ಕೂಡಲೇ ಸಮೀಪದಲ್ಲಿದ್ದ ಮೀನಾಕ್ಷಿ ಮತ್ತು ಗಾಯತ್ರಿ ರಕ್ಷಾ ಬೋಟಿನವರು ಬೋಟಿನಲ್ಲಿದ್ದ 7 ಮಂದಿಯನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ.
ಮಂಗಳೂರು, ಫೆ. 22: ಬಂಟರ ಸಂಘ ಕಾವೂರು ವತಿಯಿಂದ ಮಾಲಾಡಿ ಕೋರ್ಟ್ ಮುಖ್ಯ ರಸ್ತೆಯಲ್ಲಿ ಕಾವೂರು ಬಂಟರ ಸಮುದಾಯ ಭವನದ ಭೂಮಿ ಪೂಜೆ ಮತ್ತು ಬಂಟರ ಸಂಘದ ಆಡಳಿತ ಕಚೇರಿ ಹಾಗೂ ಬಯಲು ರಂಗಮಂದಿರದ ಉದ್ಘಾಟನೆ ಬುಧವಾರ ನೆರವೇರಿತು. ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಬಂಟರ ಯಾನೆ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ಮಾಲಾಡಿ, ಸಂಸದ ನಳಿನ್ ಕುಮಾರ್ ಕಟೀಲು ,ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎಂಆರ್ಜಿ ಗ್ರೂಪ್ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ,ಹೇರಂಬ ಇಂಡಸ್ಟ್ರೀಸ್ ಮುಂಬಯಿಯ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಸಾಯಿರಾಧಾ ಗ್ರೂಪ್ನ ಆಡಳಿತ ನಿರ್ದೇಶಕ ಮನೋಹರ ಎಸ್. ಶೆಟ್ಟಿ, ಮಾಜಿ ಸಚಿವರಾದ ಬಿ.ನಾಗರಾಜ ಶೆಟ್ಟಿ ಬಿ.ರಮಾನಾಥ ರೈ, ಮನಪಾಸದಸ್ಯರಾದ ಅನಿಲ್ ಕುಮಾರ್, ಸುಮಂಗಲಾ ರಾವ್,ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ತಾಲೂಕು ಸಮಿತಿ…
ಬೆಂಗಳೂರು, ಫೆ 22: ಶಾಲೆ- ಕಾಲೇಜ್ಗಳಿಂದ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟು ಮಾರಾಟ ಮಾಡುವವರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿಂದು ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿಧೇಯಕ ಅಂಗೀಕರಿಸಲಾಯಿತು. ಸದನದಲ್ಲಿ ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಶಾಲೆಗಳಿಂದ 100 ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ಹಾಗೂ ಸಿಗರೇಟ್ ಸೇದುವಂತಿಲ್ಲ. ಇದನ್ನು ಮೀರಿ ಮಾರಾಟ ಮಾಡುವವರಿಗೆ ದಂಡದ ಪ್ರಮಾಣ 100 ರೂ. ನಿಂದ 1000 ರೂ. ಗೆ ಏರಿಕೆ ಮಾಡಿದ್ದೇವೆ ಎಂದರು.












