Author: admin

ಬೆಳ್ತಂಗಡಿ, ಮೇ.9 :ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಕೆ. ಬಂಗೇರ (79) ಮೇ 8, ಬುಧವಾರ ನಿಧನರಾಗಿದ್ದಾರೆ. ದೀರ್ಘ ಕಾಲದ ಆನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ  ವಸಂತ ಬಂಗೇರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1972 ರಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ನ ಚುನಾವಣೆಯಲ್ಲಿ ಅವಿರೋಧವಾಗಿ ಸದಸ್ಯರಾಗಿ ಆಯ್ಕೆಯಾಗಿ ನಂತರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ವಿಧಾನಸಭೆಗೆ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1983 ಮತ್ತು 1985ರಲ್ಲಿ ವಸಂತ ಬಂಗೇರ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. 2013ರಲ್ಲಿ ವಸಂತ ಬಂಗೇರ ಕಾಂಗ್ರೆಸ್ನಿಂದ ಸ್ಪರ್ಧಿಸಿ  ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. ತಮ್ಮ ರಾಜಕೀಯ ಜೀವನದಲ್ಲಿ ಅವರು ಬಿಜೆಪಿ, ಜನತಾದಳ ಹಾಗೂ ಕಾಂಗ್ರೆಸ್ ಸೇರಿದಂತೆ ಮೂರು ಪಕ್ಷದಲ್ಲಿಗುರುತಿಸಿಕೊಂಡಿದ್ದರು.

Read More

ಸಿದ್ದಾಪುರ, ಮೇ. 8.: ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ 2 ಅಂಗಡಿಗಳು ಸುಟ್ಟು ಕರಕಲಾದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಕುಂದಾಪುರದ ಸಿದ್ದಾಪುರದಲ್ಲಿ ಸೋಮವಾರ ನಡೆದಿದೆ. ಅಗ್ನಿ ಅವಘಡದಿಂದ ಸ್ಪೇರ್ ಪಾರ್ಟ್ಸ್ ಅಂಗಡಿ ಮತ್ತು ಮಿಲ್ಕ್ ಪಾರ್ಲರ್ ಸುಟ್ಟು ಕರಕಲಾಗಿದೆ. ಸ್ಪೇರ್ ಪಾರ್ಟ್ಸ್ ಅಂಗಡಿಯಲ್ಲಿದ್ದ ಬಿಡಿಭಾಗಗಳು, ಆಯಿಲ್ ಡಬ್ಬಗಳು ಸೇರಿ ಹಲವು ವಸ್ತುಗಳ ಸುಟ್ಟುಹೋಗಿವೆ. ಮಿಲ್ಕ್ ಪಾರ್ಲರ್ ನಲ್ಲಿದ್ದ ಉತ್ಪನ್ನಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲಾಗಿದೆ.

Read More

ಕಾಸರಗೋಡು, ಮೇ.7: ಅಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ತೃಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ . ಅಂಬ್ಯುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

Read More

ಬೆಳ್ತಂಗಡಿ, ಮೇ. 06: ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕರೊಬ್ಬರು ದೇವಸ್ಥಾನದ ಹಿಂಭಾಗದಲ್ಲಿ ತಾನು ವಾಸವಿಗಿದ್ದ ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 4ರಂದು ನಡೆದಿದೆ. ಶಿರಸಿ ಮೂಲದ ವಿಜಯ್ ಹೆಗಡೆ (33) ಅವರು ಆತ್ಮಹತ್ಯೆಗೆ ಶರಣಾದ ಅರ್ಚಕರು. ವಿಜಯ್ ಹೆಗಡೆ ಅವರು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ಮುಂಜಾನೆ ಭಕ್ತರು ಆಗಮಿಸುವ ವೇಳೆ ವಿಜಯ್ ಬರದಿರುವುದನ್ನು ಕಂಡ ದೇವಸ್ಥಾನದ ಸಿಬ್ಬಂದಿ ಹಾಗೂ ಭಕ್ತರು ಅವರು ತಂಗುತ್ತಿದ್ದ ವಸತಿಗೃಹಕ್ಕೆ ವಿಚಾರಿಸಲು ತೆರಳಿದಾಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಕಾಸರಗೋಡು,  ಮೇ.1 : ಕಣ್ಣೂರು ಕಣ್ಣಾ ಪುರ ದಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ  ಅಪಘಾತದಲ್ಲಿ ಐವರು ಕಾಸರಗೋಡು ನಿವಾಸಿಗಳು ಸಾವನ್ನಪ್ಪಿದ  ಘಟನೆ ಸೋಮವಾರ ರಾತ್ರಿ ನಡೆದಿದೆ. ಕಣ್ಣೂರು ಕಡೆಯಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕಾರು ಮತ್ತು ಕಣ್ಣೂರು ಕಡೆಗೆ ತೆರಳು ತ್ತಿದ್ದ ಅಡುಗೆ ಅನಿಲ ಸಿಲಿಂಡರ್ ಸಾಗಾಟ ಲಾರಿ ನಡುವೆ ಅಪಘಾತ ಸಂಭವಿಸಿ, ಕಾರಲ್ಲಿದ್ದ ಮೂವರು ಪುರುಷರು, ಓರ್ವ ಮಹಿಳೆ ಹಾಗೂ 10 ವರ್ಷದ ಬಾಲಕ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕಾರ ಲ್ಲಿದ್ದವರು ಚಿತ್ತಾರಿಕಾಲ್ ಬೀಮನಡಿ ನಿವಾಸಿಗಳು ಎಂದು ಹೇಳಲಾಗಿದೆ.

Read More

ಮಂಗಳೂರು,ಏ.30. ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಶುಕ್ರವಾರ ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರ ಮಂದಿರಗಳಲ್ಲಿ ಗಬ್ಬರ್ ಸಿಂಗ್’ ಸಿನಿಮಾ ತೆರೆ ಕಾಣಲಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.. ಸಿನಿಮಾದಲ್ಲಿ ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ…

Read More

ಮಂಗಳೂರು,ಏ.30 : ವಾಮಂಜೂರಿನ ಹತ್ತಿರವಿರುವ ಗ್ಲೊಬಲ್ ಬ್ಯಾಡ್ ಮಿಂಟನ್ ಅರೆನ ಎಂಬಲ್ಲಿರುವ ಮೆಂಡೊನ್ಸಾ ಗಾರ್ಡನ್ ನಲ್ಲಿ ಲಿಟ್ಲ್ ವಿಂಗ್ಸ್ ಎಂಬ ಎಲ್ ಕೆ ಜಿ. ಯು.ಕೆ.ಜ಼ಿ. ನರ್ಸರಿ ಶುಭಾರಂಭಗೊಂಡಿತು. ಸಂತ ಜೊಸೆಫ್ ದಿ ವರ್ಕರ್ ಚರ್ಚ್ ವಾಮಂಜೂರು ಇಲ್ಲಿನ ಧರ್ಮ ಗುರುಗಳು ರೆ.ಫಾ. ಜೇಮ್ಸ್ ಡಿ.ಸೋಜ, ಮೂಡಬಿದರೆ ಶಾಸಕರಾದ ಉಮಾನಾಥ ಕೊಟ್ಯಾನ್ ಮತ್ತು ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ಮಾಜಿ ಮ.ನ.ಪಾ. ಸದಸ್ಯರು ಜಯಪ್ರಕಾಶ್ ವಾಮಂಜೂರು, ಸಂತ ಜೊಸೆಫ್ ದಿ ವರ್ಕರ್ ಚರ್ಚ್ ವಾಮಂಜೂರು ಇಲ್ಲಿನ ಧರ್ಮ ಗುರುಗಳು ರೆ.ಫಾ. ಜೇಮ್ಸ್ ಡಿ.ಸೋಜ,ಮಂಗಳೂರು ಮ.ನ.ಪಾ. ಸದಸ್ಯರು ಹೇಮಲತ ರಘು ಸಾಲಿಯಾನ್, ನರ್ಸರಿಯ ಮಾಲಕಿ ನಿಖಿತ, ಮಾಲಕ ಕಿಶಾನ್ ಕುಮಾರ್ ಉಪಸ್ಟಿತರಿದ್ದರು.

Read More

ಮಾಣಿ, ಏ 29 : ಕೆಎಸ್ಸಾರ್ಟಿಸಿ ಬಸ್  ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಹಿಂದಿರುಗುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಸಾವನ್ನಪ್ಪಿದ ಘಟನೆ ಶನಿವಾರ ತಡರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಕ್ರಂಪಾಡಿ ಬಳಿ ನಡೆದಿದೆ. ಮೃತ ರನ್ನು ಜೈಸನ್ (30)ಎಂದು ಗುರುತಿಸಲಾಗಿದೆ. ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ಆಟೋ ರಿಕ್ಷಾ ನಡುವೆ ನಸುಕಿನ ಜಾವ ಢಿಕ್ಕಿ ಸಂಭವಿಸಿ, ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಬಳಿಕ ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಜೈಸನ್ ಅವರನ್ನು ಹೊರತೆಗೆದಿದ್ದಾರೆ. ಈ ವೇಳೆಗಾಗಲೇ ಜೈಸನ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Read More

ಮೂಡುಬಿದಿರೆ, ಏ.28 : ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘ ಉಜಿರೆ ಇದರ ಎರಡನೇ ಶಾಖೆಯು ಮೂಡುಬಿದಿರೆಯ ಜೈನಪೇಟೆ ಬಡಗು ಬಸದಿ ಎದುರಿನ ಫಾರ್ಚೂನ್ ಹೈವೇ-2 ಕಟ್ಟಡದ ಮೊದಲ ಮಹಡಿಯಲ್ಲಿ ಏ. 27, ಆದಿತ್ಯವಾರ ಉದ್ಘಾಟನೆಗೊಂಡಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅವರು ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ನೂತನ ಶಾಖೆಯ ಕಚೇರಿಯನ್ನು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭಕೋರಿದರು. ನಂತರ ವಲೇರಿಯನ್ ಮೊರಾಸ್ ಅವರಿಗೆ ಮೊದಲ ಪಾಲು ಬಂಡವಾಳ ಪ್ರಮಾಣಪತ್ರ ವಿತರಿಸಿದರು. ಆಶೀರ್ವಚನವಿತ್ತ ಅಲಂಗಾರು ಹೋಲಿ ರೋಸರಿ ಚರ್ಚ್ನ ಧರ್ಮಗುರು ವಂ ವಾಲ್ಟರ್ ಡಿ’ಸೋಜಾ ಅವರು ದೇವರ ಅನುಗ್ರಹದಿಂದ ಆಡಳಿತದ ಪ್ರಾಮಾಣಿಕತೆ, ಆಸಕ್ತಿ, ಸಿಬಂದಿಗಳ ಸೌಜನ್ಯಪೂರ್ಣ ಸೇವೆಯಿಂದ ಸಹಕಾರ ಸಂಘವು ಪ್ರಗತಿ ಹೊಂದಲು ಸಾಧ್ಯವಾಗುವುದು ಎಂದು ಹೇಳಿದರು. ಬಳಿಕ ಲೂಯಿಸ್ ಡಿ’ಸಿಲ್ವ ಅವರಿಗೆ ಮೊದಲ ನಿರಖು ಠೇವಣಾತಿ ಪತ್ರ ವಿತರಿಸಿದರು. ಫರ್ಚೂನ್ ಪ್ರಮೋಟರ್ಸ್ ಪಾಲುದಾರರಾದ ಅಬುಲಾಲ್ ಪುತ್ತಿಗೆ ಅವರು ಭದ್ರತಾ ಕೋಶ ಉದ್ಘಾಟಿಸಿ ಮೆಟಲ್ಲಾ ಅಲ್ಲೋನ್ಸ್ ಅವರಿಗೆ ಉಳಿತಾಯ…

Read More

ಮಂಗಳೂರು,ಏ.28 : ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ. “ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ. ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್…

Read More