Author: admin

ಉಪ್ಪಿನಂಗಡಿ : ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದು, ಅವರಿಗೆ ತರಗತಿ ಕೊಠಡಿಯೊಳಗೆ ಪ್ರವೇಶ ನಿರಾಕರಿಸಿದ ಪ್ರಾಂಶುಪಾಲರು, ಸರಕಾರದ ಮತ್ತು ನ್ಯಾಯಾಲಯದ ಆದೇಶವನ್ನು ಮನವರಿಕೆ ಮಾಡಿಕೊಟ್ಟರು. ಕಾಲೇಜು ಕೊಠಡಿಯೊಳಗೆ ಸಮವಸ್ತ್ರ ಮಾತ್ರ ಬಳಸಲು ಅವಕಾಶವೆಂದು ಸ್ವಷ್ಟಪಡಿಸಿದರು.ನಿಯಮ ಪಾಲಿಸಲು ಒಪ್ಪದ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಕಾಲೇಜು ಅವರಣದಲ್ಲೇ ಕುಳಿತರು. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ಅವಕಾಶ ನೀಡದಿರುವುದನ್ನು ವಿರೋಧಿಸಿ ಅವರ ಬೆಂಬಲವಾಗಿ ಕೆಲವು ಮಂದಿ ವಿದ್ಯಾರ್ಥಿಗಳು ತರಗತಿಯನ್ನು ಬಹಿಷ್ಕರಿಸಿದ ಘಟನೆ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ಹಿಜಾಬ್ ಬೆಂಬಲಿಸಿ  ವಿದ್ಯಾರ್ಥಿಗಳ ಗುಂಪು ತರಗತಿ ಬಹಿಷ್ಕರಿಸಿದ ಬೆನ್ನಲ್ಲೇ ಇನ್ನಷ್ಟು ಗೊಂದಲ ಸೃಷ್ಟಿಯಾಗುವುದನ್ನು ತಡೆಯಲು ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿಗೆ ಎರಡು ದಿನಗಳ ಕಾಲ ರಜೆ ಸಾರಲಾಗಿದೆ.

Read More

ಕೆನಡಾ : ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರಿಗೆ ಕೋವಿಡ್ ದೃಢಪಟ್ಟಿರುವ ವಿಷಯನ್ನು ಕೆನಡಾದ ಪ್ರಧಾನಿ  ಜಸ್ಟಿನ್ ಟ್ರುಡೊ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ನಾನು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ನನಗೆ ಸೋಂಕು ದೃಢಪಟ್ಟಿದೆ, ಸದ್ಯ ನಾನು ಆರೋಗ್ಯವಾಗಿದ್ದೇನೆ ಎಂದಿದ್ದಾರೆ. ಪ್ರಧಾನಿ ಜಸ್ಟಿನ್ ಟ್ರುಡೊ 2 ಡೋಸ್ ​​ ಲಸಿಕೆ ಹಾಗೂ ಬೂಸ್ಟರ್‌ ಡೋಸ್ ಸಹ ಪಡೆದಿದ್ದಾರಂತೆ. ಆದರೂ ಸೋಂಕು ದೃಢಪಟ್ಟಿದೆ. ಅವರ ಮೂವರು ಮಕ್ಕಳಲ್ಲಿ ಇಬ್ಬರಿಗೆ ಕೊರೊನಾ ​​ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

Read More

ಬಾಯಾರಿಕೆಗೆ ಎಳನೀರು ಉತ್ತಮ ದ್ರವವಾಗಿದೆ ಹಾಗೂ ನಿಯಮಿತವಾಗಿ ಸೇವಿಸುತ್ತಾ ಬರುವ ಮೂಲಕ ಹಲವು ಬಗೆಯಲ್ಲಿ ಆರೋಗ್ಯವನ್ನು ವೃದ್ದಿಸುತ್ತದೆ. ವಿಶೇಷವಾಗಿ, ದಿನದ ಪ್ರಥಮ ಆಹಾರವಾಗಿ ಬೆಳಗ್ಗಿನ ಸಮಯದಲ್ಲಿ ಸೇವಿಸಿದರೆ ಇನ್ನೂ ಹೆಚ್ಚಿನ ಪ್ರಯೋಜನವಿದೆ. ಎಲ್ಲಾ ಪ್ರಯೋಜಗಳನ್ನು ಕ್ರೋಡೀಕರಿಸಿದರೆ, ಇದರಷ್ಟು ಆರೋಗ್ಯಕರವಾದ ಪಾನೀಯ ಇನ್ನೊಂದಿಲ್ಲ ಎಂದು ಖಚಿತವಾಗಿ ಹೇಳಬಹುದು ಪ್ರಕೃತಿ ದತ್ತವಾಗಿರುವ ಎಳೆನೀರು ಕೇವಲ ಬಾಯಾರಿಕೆ ಮಾತ್ರವಲ್ಲ. ನಮ್ಮ ದೇಹದಲ್ಲಿ ನಾನಾ ರೀತಿಯ ಸಮಸ್ಯೆಗಳನ್ನು ಹೋಗಲಾಡಿಸಲು ಸಹಕಾರಿಯಾಗಿದೆ. ಎಳೆನೀರು ಕುಡಿಯುವುದರಿಂದ ಮಲಬದ್ಧತೆ ಕಡಿಮೆಯಾಗುತ್ತದೆ. ಮನುಷ್ಯನಿಗೆ ತೀವ್ರ ಸುಸ್ತು ಆಯಾಸವಾದಾಗ ಎಳೆನೀರು ನಮ್ಮದೇಹವನ್ನು ಪುನಶ್ಚೇತನ ಮಾಡುತ್ತದೆ. ಇದಲ್ಲದೇ ಮೂತ್ರ ಪಿಂಡವನ್ನು ಸ್ವಚ್ಛಗೊಳಿಸಲು ಕೂಡ ಎಳೆನೀರು ಸಹಾಯಕವಾಗಿದೆ. ಜೊತೆಗೆ ಮೂತ್ರಪಿಂಡದಲ್ಲಿ ಕಲ್ಲು ಆಗುವ ಸಮಸ್ಯೆಗಳಿದ್ದರೆ, 7 ದಿನಗಳ ಕಾಲ ಎಳೆನೀರನ್ನು ನಿಯಮಿತವಾಗಿ ಸೇವಿಸಿದರೆ, ಕಲ್ಲನ್ನು ಆಕಸ್ಮಿಕವಾಗಿ ತೆಗೆದು ಹಾಕುತ್ತದೆ,

Read More

ಚೆನ್ನೈ: ನವೆಂಬರ್ 18, 2004ರಲ್ಲಿ ಧನುಷ್ ಹಾಗೂ ಐಶ್ವರ್ಯಾ ವಿವಾಹವಾಗಿದ್ದರು.18 ವರ್ಷಗಳ ಬಳಿಕ ಇಬ್ಬರೂ ಬೇರೆಯಾಗಲು ನಿರ್ಧರಿಸಿರುವುದು ಅವರ ಅಭಿಮಾನಿಗಳಿಗೆ ದೊಡ್ಡ ಶಾಕ್ ಆಗಿದೆ. ನಟ ಧನುಷ್ ಹಾಗೂ ಐಶ್ವರ್ಯಾ ಇಬ್ಬರೂ ಟ್ವಿಟ್ಟರ್ ನಲ್ಲಿ ಬೇರೆಯಾಗುತ್ತಿರುವ ವಿಷಯವನ್ನು ಘೋಷಣೆ ಮಾಡಿದ್ದಾರೆ. ಇಬ್ಬರೂ ಬೇರೆಯಾಗುತ್ತಿರುವುದಾಗಿ ಧನುಷ್ ಹಾಗೂ ಐಶ್ವರ್ಯಾ ಜೊತೆಯಾಗಿ ಟ್ವೀಟ್ ಮಾಡಿ ಘೋಷಣೆ ಮಾಡಿದ್ದಾರೆ. ಧನುಷ್ ಸೋಶಿಯಲ್ ಮೀಡಿಯಾ ಮೂಲಕ ವಿಚ್ಛೇದನದ ಬಗ್ಗೆ ಬಹಿರಂಗ ಪತ್ರವನ್ನು ಬರೆದಿದ್ದಾರೆ. “18 ವರ್ಷ ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಾಗಿ ಹಾಗೂ ಹಿತೈಷಿಯಾಗಿ ಜೊತೆಗಿದ್ದೆವು. ಬೆಳವಣಿಗೆ, ಪರಸ್ಪರ ಅರಿತುಕೊಳ್ಳುವಿಕೆ, ಹೊಂದಾಣಿಕೆ ಹಾಗೂ ಒಪ್ಪಿಕೊಳ್ಳುವ ಜರ್ನಿ ಮಧುರವಾಗಿತ್ತು. ಇವತ್ತು ನಾವು ನಮ್ಮ ಬೇರೆ ದಾರಿಗಳನ್ನು ಹುಡುಕಿಕೊಳ್ಳುವ ತೀರ್ಮಾನಕ್ಕೆ ಬಂದಿದ್ದೇವೆ. ಐಶ್ವರ್ಯ ಹಾಗೂ ನಾನು ಇಬ್ಬರೂ ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದು, ಒಬ್ಬರನೊಬ್ಬರು ಸ್ವತಂತ್ರ ವ್ಯಕ್ತಿಯಾಗಿ ಅರ್ಥ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ. ನಮ್ಮ ನಿರ್ಧಾರಗಳಿಗೆ ಗೌರವ ನೀಡಿ ಮತ್ತು ಇದನ್ನು ನಿಭಾಯಿಸಲು ಬಿಡಿ ” ಎಂದು ಧನುಷ್ ತಿಳಿಸಿದ್ದಾರೆ.

Read More

ಬೆಂಗಳೂರು: ಯಶ್ ಅಭಿನಯದ ‘ಕಿರಾತಕ’ ಚಿತ್ರವನ್ನು ನಿರ್ದೇಶಿಸಿದ್ದ ಪ್ರದೀಪ್ ರಾಜ್(46) ಜ.20ರಂದು ನಿಧನರಾಗಿದ್ದಾರೆ. ಡಯಾಬಿಟಿಸ್ ನಿಂದ ಹಲವು ವರ್ಷಗಳಿಂದ ಬಳಲುತ್ತಿದ್ದ ಪ್ರದೀಪ್ ರಾಜ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಇದೀಗ ಅವರು ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಈ ಕುರಿತು ಪ್ರದೀಪ್ ರಾಜ್ ಸಹೋದರ ಪ್ರಶಾಂತ್ ಮಾಹಿತಿ ನೀಡಿದ್ದಾರೆ. ಯಶ್ ಅಭಿನಯದ ಕಿರಾತಕ , ಸತೀಶ್ ಅಭಿನಯದ ಅಂಜದ ಗಂಡು, ಮಿಸ್ಟರ್ 420, ಬೆಂಗಳೂರು 23 ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರು. ಪ್ರದೀಪ್ ರಾಜ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಅಗಲಿದ್ದಾರೆ

Read More

ಮೂಡುಬಿದಿರೆ : ಇಲ್ಲಿನ ಗಂಟಾಲ್ಕಟ್ಟೆಯ ಸಮೀಪ ಜ.20 ರ ಮುಂಜಾನೆ.ಗಂಟಾಲ್ಕಟ್ಟೆಯ ಸಮೀಪ ಓಮ್ನಿ ಕಾರು ಬೈಕ್ ಢಿಕ್ಕಿಯಾಗಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಹಿರಿಯ ಯಕ್ಷಗಾನ ಕಲಾವಿದ ವಾಮನ ಕುಮಾರ್ ವೇಣೂರು (47) ಮೃತಪಟ್ಟಿದ್ದಾರೆ ಧರ್ಮಸ್ಥಳ ಮೇಳದ , ಕದ್ರಿ ಮೇಳ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ಹಿರಿಯಡ್ಕ ಮೇಳದಲ್ಲಿ ಕಲಾವಿದರಾಗಿದ್ದರು. ಕುಂದಾಪುರದ ಕೊಂಕಿ ಎಂಬಲ್ಲಿ ರಾತ್ರಿ ಯಕ್ಷಗಾನವನ್ನು ಮುಗಿಸಿ ಮನೆಗೆ ಹಿಂತಿರುಗುವಾಗ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. 26 ವರ್ಷಗಳ ತಿರುಗಾಟ ನಡೆಸಿದ ಅನುಭವಿ ಕಲಾವಿದರಾಗಿದ್ದ ಹಿರಿಯ ಯಕ್ಷಗಾನ ಕಲಾವಿದ ವಾಮನ ಕುಮಾರ್ ಅವರು ಹಾಸ್ಯ, ಸ್ತ್ರೀ, ಪುರುಷ, ಪುಂಡು ಹೀಗೆ ಹಲವು ಪಾತ್ರಗಳನ್ನು ಮಾಡಿ ಅಭಿಮಾನಿಗಳ ಮನಗೆದ್ದಿದ್ದರು. ವಾಮನ್ ಕುಮಾರ್ ಅವರ ಸಾವಿಗೆ ಯಕ್ಷಗಾನ ಕಲಾವಿದರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Read More

ಚೆನ್ನೈ: ತಮ್ಮ ಸ್ವಂತ ಪ್ರೊಡಕ್ಷನ್ ಹೌಸ್ ಹೊಂದಿರುವ ನಟಿ ನಯನತಾರಾ ಸಿನಿಮಾಗಳಲ್ಲಿ ಬಂಡವಾಳ ಹೂಡುತ್ತಲೇ ಬೇರೆ ವ್ಯವಹಾರಗಳಲ್ಲೂ ಹಣ ತೊಡಗಿಸುತ್ತಿದ್ದಾರೆ. ಈಗಾಗಲೇ ಅನೇಕ ವ್ಯವಹಾರಗಳಲ್ಲಿ ಹೂಡಿಕೆ ಮಾಡಿದ್ದಾರೆ ಮತ್ತು ಇತ್ತೀಚಿನ ವರದಿಗಳ ಪ್ರಕಾರ ಅವರು ಯುಎಇಯಲ್ಲಿ ತಮ್ಮ ಹೊಸ ಉದ್ಯಮಕ್ಕಾಗಿ ದೊಡ್ಡ ಮೊತ್ತವನ್ನು ಖರ್ಚು ಮಾಡಲು ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ. ನಯನತಾರಾ ಮತ್ತು ವಿಘ್ನೇಶ್ ಅವರು ತೈಲ ಕಂಪನಿಯಲ್ಲಿ ಜಂಟಿಯಾಗಿ 100 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ವರದಿಯಾಗಿದೆ. ಕಳೆದ ತಿಂಗಳು ನಯನತಾರ ತನ್ನ ಭಾವಿ ಪತಿ ವಿಘ್ನೇಶ್ ಜೊತೆ ದುಬೈಗೆ ಪ್ರವಾಸಕ್ಕೆ ಹೋಗಿದ್ದರು ಎಂದು ತಿಳಿದುಬಂದಿದೆ. ಆದರೆ, ಈ ಸುದ್ದಿಯ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ನಟಿಯಾಗಿರುವುದರ ಜೊತೆಗೆ, ಅವರು ತಮ್ಮ ಭಾವಿ ಪತಿರ ವಿಘ್ನೇಶ್ ಶಿವನ್ ಅವರೊಂದಿಗೆ ರೌಡಿ ಪಿಕ್ಚರ್ಸ್ (ಪ್ರೊಡಕ್ಷನ್ ಹೌಸ್) ಅನ್ನು ಪ್ರಾರಂಭಿಸಿದರು. ಇತ್ತಿಚೇಗೆ ನಯನತಾರಾ ಚೆನ್ನೈನ ಐಷಾರಾಮಿ ಪ್ರದೇಶದಲ್ಲಿ 4BKH ಫ್ಲಾಟ್ ಅನ್ನು ಖರೀದಿಸಿದ್ದಾರೆ ಎಂದು ವರದಿಯಾಗಿದೆ.

Read More

ಉಡುಪಿ: ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಜ.15, ಶನಿವಾರ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್‍ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಅನಿವಾರ್ಯ ಸಂದರ್ಭಗಳಲ್ಲಿ, ನೀವು ನನಗೆ ಕರೆ ಮಾಡಬಹುದಾಗಿದೆ.  ಕಳೆದ ಎರಡು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಮನವಿ ಮಾಡುತ್ತೇನೆ’ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

Read More

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜ.17,ಸೋಮವಾರ ಶಾಲಾ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆ ನಡೆದಿತ್ತು. ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳು ದ.ಕ.ಜಿಲ್ಲೆಯಲ್ಲಿ 5 ಕ್ಕಿಂತ ಹೆಚ್ಚು ಕೊರೊನಾ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ದ. ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ    ಈಗಿರುವ ಸ್ಥಿತಿಯಲ್ಲಿ ದ.ಕ.ಜಿಲ್ಲೆಯಲ್ಲಿ ಪೂರ್ತಿಯಾಗಿ ಶಾಲೆಗಳನ್ನು ಸ್ಥಗಿತಗೊಳಿಸುವುದರಿಂದ ತೊಂದರೆಯಾಗಲಿದೆ. ಈ ಕಾರಣದಿಂದ ಯಾವ ಶಾಲೆಗಳಲ್ಲಿ ಹೆಚ್ಚುಕೋವಿಡ್ ಪಾಸಿಟಿವ್ ಸಂಖ್ಯೆ ಕಂಡು ಬಂದಿದೆಯೋ ಆ ಶಾಲೆಗಳನ್ನು ಮಾತ್ರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಬಹುದು ಎಂದು ಅಧಿಕಾರಿಗಳು, ಆಡಳಿತ ಮಂಡಳಿಯಿಂದ ಅಭಿಪ್ರಾಯ ವ್ಯಕ್ತವಾಯಿತು.      ದ.ಕ.ಜಿಲ್ಲೆಯ ಶಾಲೆಗಳಿಂದ ದಿನನಿತ್ಯ ಕೊರೊನಾ ಪ್ರಕರಣ ಬಗ್ಗೆ ಮಾಹಿತಿ ಪಡೆದು, ಅದಕ್ಕನುಗುಣವಾಗಿ ಶಿಕ್ಷಣ ಇಲಾಖೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಒಂದು ವಾರದ ನಂತರ ಮತ್ತೊಂದು ಸುತ್ತಿನಲ್ಲಿ ಶಾಲಾ ಆಡಳಿತ ಮಂಡಳಿ, ಅಧಿಕಾರಿಗಳ ಸಭೆ…

Read More

ಬೆಂಗಳೂರು :ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಹಾಗೂ ಓಮಿಕ್ರಾನ್ ಸೋಂಕಿಗೆ ಕಡಿವಾಣ ಹಾಕಲು‌ರಾಜ್ಯ ಸರಕಾರ ಮತ್ತೊಂದಷ್ಟು ಬಿಗಿ ಕ್ರಮಗಳನ್ನು ಜಾರಿಗೊಳಿಸಿದೆ. ಸಿಎಂ ಬೊಮ್ಮಾಯಿ‌ ನೇತೃತ್ವದಲ್ಲಿ ಸಚಿವರಾದ ಡಾ. ಸುಧಾಕರ್, ಆರ್. ಅಶೋಕ್, ಅಶ್ವತ್ಥ ನಾರಾಯಣ್ ಹಾಗೂ ತಜ್ಞರ ಸಮಿತಿ ಜತೆ ಸುಮಾರುಮೂರುವರೆ ಗಂಟೆಗಳ ಕಾಲ‌ನಡೆದ ಸಭೆ ಬಳಿಕ ಸಚಿವರು ಈ ನಿರ್ಧಾರವನ್ನು ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ 10-12ನೇ ತರಗತಿ ಹೊರತುಪಡಿಸಿ ಉಳಿದೆಲ್ಲಾ ಶಾಲೆಗಳನ್ನು ಮುಚ್ಚಿ ಕೇವಲ ಆನ್‌ಲೈನ್ ತರಗತಿ ನಡೆಸಲು ಸರ್ಕಾರ ತೀರ್ಮಾನ ಮಾಡಿದೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಮುಂದುವರೆಯಲಿದ್ದು ಈ ವಾರದಿಂದ 2 ವಾರ ವಾರಾಂತ್ಯದ ಕರ್ಫ್ಯೂ ಇರಲಿದೆ. ಪಬ್, ಬಾರ್, ಮಾಲ್, ಚಿತ್ರಮಂದಿರ, ಹೋಟೆಲ್ ಗಳಲ್ಲಿ ಶೇ. 5050ರಷ್ಟುಜನರ ಮಿತಿ ಇರಬೇಕು. ಯಾವುದೇ ಸಭೆ, ಸಮಾರಂಭ ಮಾಡುವಂಯಿಲ್ಲ ಇದು ಎಲ್ಲಾ ರಾಜಕೀಯ ಪಕ್ಷಕ್ಕೂ ಅನ್ವಯ. ದೇವಸ್ಥಾನ, ಮಸೀದಿ, ಚರ್ಚ್ ಗಳಲ್ಲಿ‌ ಪೂಜೆ ಯಥಾಸ್ಥಿತಿ ಆದರೆ ನಿಗದಿಗಿಂತ ಅಧಿಕ ಜನರು ಸೇರುವ ಹಾಗಿಲ್ಲ. ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ…

Read More